ಸಾಂದರ್ಭಿಕ ಚಿತ್ರ 
ವಾಣಿಜ್ಯ

ಏಪ್ರಿಲ್ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ; ಇದುವರೆಗಿನ ಅತ್ಯಧಿಕ ಕಲೆಕ್ಷನ್

ಕಳೆದ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿದ್ದು, ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಅತ್ಯಧಿಕ ಕಲೆಕ್ಷನ್ ಆಗಿದೆ.

ನವದೆಹಲಿ: ಕಳೆದ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿದ್ದು, ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಅತ್ಯಧಿಕ ಕಲೆಕ್ಷನ್ ಆಗಿದೆ.

ಕಳೆದ ಏಪ್ರಿಲ್ ನಲ್ಲಿ ಒಟ್ಟು ಜಿಎಸ್ ಟಿ ಆದಾಯ 1,87,035 ಕೋಟಿ ರೂ.ಸಂಗ್ರವಾಗಿದ್ದು, ಇದರಲ್ಲಿ ಸಿಜಿಎಸ್ ಟಿ 38,440 ಕೋಟಿ ರೂ., ಎಸ್ ಜಿಎಸ್ ಟಿ ರೂ. 47,412 ಕೋಟಿ, ಐಜಿಎಸ್ ಟಿ 89,158 ಕೋಟಿ ರೂ. 12,025 ಕೋಟಿ ಸೆಸ್ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದಿನ ವರ್ಷ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್ ಟಿ ಸಂಗ್ರಹವಾಗಿತ್ತು. ಏಪ್ರಿಲ್ 2023 ರ ಆದಾಯವು ಕಳೆದ ವರ್ಷದ ಏಪ್ರಿಲ್ ತಿಂಗಳ ಜಿಎಸ್‌ಟಿ ಆದಾಯಕ್ಕಿಂತ 12 ಶೇಕಡಾ ಹೆಚ್ಚಾಗಿದೆ" ಎಂದು ಸಚಿವಾಲಯ ಹೇಳಿದೆ.

ಕರ್ನಾಟಕದಲ್ಲಿ 14,593 ಕೋಟಿ ರೂ ಜಿಎಸ್​ಟಿ ಸಂಗ್ರಹ
ದೇಶಾದ್ಯಂತ ಸಂಗ್ರಹವಾಗಿರುವ ಒಟ್ಟು ಜಿಎಸ್​ಟಿ ಕಲೆಕ್ಷನ್ ಪೈಕಿ ಕರ್ನಾಟಕದ ಪಾಲು ಗಮನಾರ್ಹವಾಗಿದೆ. ಕರ್ನಾಟಕದಲ್ಲಿ 14,593 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದೆ.

ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕದಲ್ಲೇ ಅತಿಹೆಚ್ಚು ಜಿಎಸ್​ಟಿ ಸಂಗ್ರಹವಾಗಿದೆ. ಮಹಾರಾಷ್ಟ್ರದಲ್ಲಿ 33,196 ಕೋಟಿ ರೂ ಜಿಎಸ್​ಟಿ ಸಂಗ್ರಹ ಆಗಿದೆ. ಗುಜರಾತ್, ತಮಿಳುನಾಡು, ಉತ್ತರಪ್ರದೇಶ ಮತ್ತು ಹರ್ಯಾಣ ರಾಜ್ಯಗಳು 10,000 ಕೋಟಿ ರೂಗೂ ಹೆಚ್ಚು ಮೊತ್ತದ ಜಿಎಸ್​ಟಿ ಕಲೆಕ್ಷನ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!