(ಸಾಂಕೇತಿಕ ಚಿತ್ರ) 
ವಾಣಿಜ್ಯ

ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆ ಸುದ್ದಿ ಸಾಮಾಜಿಕ ಜಾಲತಾಣಗಳ ಸೃಷ್ಟಿ!

ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದೆ ಎಂಬ ಸುದ್ದಿ ಭಾನುವಾರ ಎಲ್ಲೆಡೆ ವೈರಲ್ ಆಗತೊಡಗಿತ್ತು. 

ನವದೆಹಲಿ: ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದೆ ಎಂಬ ಸುದ್ದಿ ಭಾನುವಾರ ಎಲ್ಲೆಡೆ ವೈರಲ್ ಆಗತೊಡಗಿತ್ತು. 

ಅರ್ಥಶಾಸ್ತ್ರಜ್ಞರು ಈ ಬಗ್ಗೆ ಮಾತನಾಡಿದ್ದು, ಭಾರತದ ಜಿಡಿಪಿ 4 ಟ್ರಿಲಿಯನ್ ಡಾಲರ್ ದಾಟಿದೆ ಎಂಬುದು ಸಾಮಾಜಿಕ ಮಾಧ್ಯಮದ ಸೃಷ್ಟಿಯಷ್ಟೇ. ಇದು ತಪ್ಪು ಮಾಹಿತಿಯನ್ನೊಳಗೊಂಡ ವೈರಲ್ ಸುದ್ದಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
 
ಭಾರತ ಇನ್ನಷ್ಟೇ ಈ ಗುರಿಯನ್ನು ತಲುಪಬೇಕಿದೆ. ಸರ್ಕಾರದ ಅಂದಾಜಿನ ಪ್ರಕಾರ 2024ರ ಆರ್ಥಿಕ ವರ್ಷದಲ್ಲಿ  ಭಾರತದ ಪೂರ್ಣ ಜಿಡಿಪಿ 302 ಲಕ್ಷ ಕೋಟಿಯಷ್ಟಿರಲಿದೆ, ಇದು 3.6 ಟ್ರಿಲಿಯನ್ ಡಾಲರ್ ನಷ್ಟಾಗಲಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿ ಸಹ ದೇಶದ 2023 ನೇ ಸಾಲಿನ ಜಿಡಿಪಿಯನ್ನು $3.6 ಟ್ರಿಲಿಯನ್‌ಗೆ ಅಂದಾಜಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿನ ಈ ಸುಳ್ಳು ಸುದ್ದಿಯನ್ನು ಹಲವು ರಾಜಕಾರಣಿಗಳೂ ನಂಬಿದ್ದರು. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಹ ಭಾರತ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿ ಪ್ರಧಾನಿ ಮೋದಿ ನಾಯಕತ್ವವನ್ನು ಹೊಗಳಿದ್ದರು.

ಜಲ್ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ್ಯೆ ಡಿ ಪುರಂದರೇಶ್ವರಿ ಸೇರಿದಂತೆ ಹಲವರು ಭಾರತದ ಈ ಸಾಧನೆಗಾಗಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದರು.

ಭಾರತ 2023-24 ರ ಏಪ್ರಿಲ್- ಜೂನ್ ಅವಧಿಯಲ್ಲಿ ಶೇ.7.8 ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಿತ್ತು. ಇದು ಕಳೆದ 4 ತ್ರೈಮಾಸಿಕದಲ್ಲೇ ಅತ್ಯಧಿಕ ಜಿಡಿಪಿ ಬೆಳವಣಿಗೆಯಾಗಿತ್ತು ಹಾಗೂ ಸೇವಾ ವಲಯದಲ್ಲಿನ ಜಿಡಿಪಿ 2 ಅಂಕಿಯ ವಿಸ್ತರಣೆ ಕಂಡಿತ್ತು. ಈ ಮೂಲಕ ಭಾರತ ಜಗತ್ತಿನಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜೂನ್ ತ್ರೈಮಾಸಿಕದಲ್ಲಿ 7.8% ಜಿಡಿಪಿ ಬೆಳವಣಿಗೆಯು ಅದೇ ಅವಧಿಯಲ್ಲಿ ಚೀನಾ ದಾಖಲಿಸಿದ 6.3% ಗಿಂತ ಹೆಚ್ಚಾಗಿದೆ. ಆಗಸ್ಟ್‌ನಲ್ಲಿ ಬಿಡುಗಡೆಯಾದ ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಮಾಹಿತಿಯ ಪ್ರಕಾರ, ಕೃಷಿ ವಲಯದ ಒಟ್ಟು ಮೌಲ್ಯವರ್ಧನೆಯು (GVA) 3.5% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ, ಇದು ಏಪ್ರಿಲ್-ಜೂನ್ 2022-23 ರಲ್ಲಿ ದಾಖಲಾಗಿದ್ದ ಶೇ. 2.4% ಕ್ಕಿಂತಲೂ ಹೆಚ್ಚಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ