ಸಿಲ್ಕ್ಯಾರಾ ಸುರಂಗ ಕುಸಿತ 
ವಾಣಿಜ್ಯ

ಉತ್ತರಾಖಂಡ ಸುರಂಗ ನಿರ್ಮಾಣ ಸಂಸ್ಥೆಯೊಂದಿಗೆ ನಂಟು ನಿರಾಕರಿಸಿದ ಅದಾನಿ ಗ್ರೂಪ್

ಕಳೆದ 16 ದಿನಗಳಿಂದ 41 ಕಾರ್ಮಿಕರು ಸಿಕ್ಕಿಬಿದ್ದಿರುವ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ನಿರ್ಮಾಣದಲ್ಲಿ ಯಾವುದೇ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿಲ್ಲ ಎಂದು ಬಿಲಿಯನೇರ್ ಗೌತಮ್ ಅದಾನಿ ಅವರ ದಾನಿ ಗ್ರೂಪ್ ಸೋಮವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಕಳೆದ 16 ದಿನಗಳಿಂದ 41 ಕಾರ್ಮಿಕರು ಸಿಕ್ಕಿಬಿದ್ದಿರುವ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ನಿರ್ಮಾಣದಲ್ಲಿ ಯಾವುದೇ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿಲ್ಲ ಎಂದು ಬಿಲಿಯನೇರ್ ಗೌತಮ್ ಅದಾನಿ ಅವರ ದಾನಿ ಗ್ರೂಪ್ ಸೋಮವಾರ ಸ್ಪಷ್ಟಪಡಿಸಿದೆ.

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಂಪನಿಯಲ್ಲಿ ದಾನಿ ಗ್ರೂಪ್ ಯಾವುದೇ ಪಾಲನ್ನು ಹೊಂದಿಲ್ಲ ಅಥವಾ ಹೊಂದುವುದಿಲ್ಲ ಅದಾನಿ ಸಮೂಹದ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ಅದಾನಿ ಸಮೂಹ ಅಥವಾ ಅದರ ಯಾವುದೇ ಅಂಗಸಂಸ್ಥೆಗಳು ಸುರಂಗ ನಿರ್ಮಾಣದಲ್ಲಿ ಯಾವುದೇ ರೀತಿಯ ನೇರ ಅಥವಾ ಪರೋಕ್ಷವಾಗಿ ಭಾಗಿಯಾಗಿಲ್ಲ" ಎಂದು ಅದಾನಿ ಗ್ರೂಪ್ ಹೇಳಿದೆ.

ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಸುರಂಗದ ನಿರ್ಮಾಣ ಕಾರ್ಯವನ್ನು ನೋಡಿಕೊಳ್ಳುತ್ತಿದೆ. ಸುರಂಗ ನಿರ್ಮಾಣದಲ್ಲಿ ತೊಡಗಿರುವ ಆ ಕಂಪನಿಯಲ್ಲಿ ನಾವು ಯಾವುದೇ ಷೇರುಗಳನ್ನು ಹೊಂದಿಲ್ಲ ಅಥವಾ ಹೊಂದುವುದಿಲ್ಲ ಎಂದು ಅದಾನಿ ಗ್ರೂಪ್ ಸ್ಪಷ್ಪಪಡಿಸಿದೆ.

ನಮ್ಮ ಕಂಪನಿ ಹೆಸರನ್ನು ಸುರಂಗ ಕುಸಿತಕ್ಕೆ ಲಿಂಕ್ ಯಾವುದೇ "ನೀಚ ಪ್ರಯತ್ನಗಳನ್ನು" ನಾವು ಬಲವಾಗಿ ಖಂಡಿಸುತ್ತೇವೆ. "ಈ ಕಠಿಣ ಸಮಯದಲ್ಲಿ, ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಿಕ್ಕಿಬಿದ್ದ ಕಾರ್ಮಿಕರು ಮತ್ತು ಅವರ ಕುಟುಂದೊಂದಿಗೆ ಇವೆ" ಎಂದು ಅದಾನಿ ಗ್ರೂಪ್ ಹೇಳಿದೆ.

ಹೈದರಾಬಾದ್ ಮೂಲದ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ನಿರ್ಮಿಸುತ್ತಿರುವ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದ ಒಂದು ಭಾಗ, ನವೆಂಬರ್ 12 ರಂದು ಭೂಕುಸಿತದಿಂದ ಕುಸಿದು ಬಿದ್ದಿದ್ದು, ಪರಿಣಾಮ 41 ಕಾರ್ಮಿಕರು 260 ಮೀಟರ್‌ಗಳೊಳಗೆ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣೆಗಾಗಿ ಕಳೆದ 16 ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT