ಜಿಎಸ್ ಟಿ ಸಾಂದರ್ಭಿಕ ಚಿತ್ರ 
ವಾಣಿಜ್ಯ

ಆರು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 'ಮೇರಾ ಬಿಲ್ ಮೇರಾ ಅಧಿಕಾರ್' ಜಿಎಸ್‌ಟಿ ಬಹುಮಾನ ಯೋಜನೆ ಪ್ರಾರಂಭ: 30 ಕೋಟಿ ರೂ. ಮೀಸಲು

ಜಿಎಸ್‌ಟಿ ಲಕ್ಕಿ ಡ್ರಾ 'ಮೇರಾ ಬಿಲ್ ಮೇರಾ ಅಧಿಕಾರ್' ಯೋಜನೆಯನ್ನು ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ ಪ್ರಾರಂಭಿಸಲಾಗಿದ್ದು, ಈ ಬಹುಮಾನ ಯೋಜನೆಗಾಗಿ ಕೇಂದ್ರ ಮತ್ತು ರಾಜ್ಯಗಳು ಈ ಹಣಕಾಸು ವರ್ಷಕ್ಕೆ 30 ಕೋಟಿ ರೂಪಾಯಿಯನ್ನು ಮೀಸಲಿಟ್ಟಿವೆ.

ಗುರುಗ್ರಾಮ: ಜಿಎಸ್‌ಟಿ ಲಕ್ಕಿ ಡ್ರಾ 'ಮೇರಾ ಬಿಲ್ ಮೇರಾ ಅಧಿಕಾರ್' ಯೋಜನೆಯನ್ನು ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ ಪ್ರಾರಂಭಿಸಲಾಗಿದ್ದು, ಈ ಬಹುಮಾನ ಯೋಜನೆಗಾಗಿ ಕೇಂದ್ರ ಮತ್ತು ರಾಜ್ಯಗಳು ಈ ಹಣಕಾಸು ವರ್ಷಕ್ಕೆ 30 ಕೋಟಿ ರೂಪಾಯಿಯನ್ನು ಮೀಸಲಿಟ್ಟಿವೆ.

ಈ ಯೋಜನೆಯ ಆ್ಯಪ್ ನ್ನು ಇಲ್ಲಿಯವರೆಗೂ 50,000 ಕ್ಕೂ ಹೆಚ್ಚು ಜನರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ ಎಂದು ಹರಿಯಾಣ ಉಪ ಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಹೇಳಿದ್ದಾರೆ. 

'ಮೇರಾ ಬಿಲ್ ಮೇರಾ ಅಧಿಕಾರ್' ಜಿಎಸ್‌ಟಿ ಲಕ್ಕಿ ಡ್ರಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರು ರಾಜ್ಯಗಳಲ್ಲಿ ಪ್ರಾರಂಭಿಸಲಾಗುತ್ತಿದ್ದು, ಬಹುಮಾನದ ಹಣವನ್ನು ಕೇಂದ್ರ ಮತ್ತು ರಾಜ್ಯಗಳು ಸಮಾನವಾಗಿ ನೀಡಲಿವೆ ಎಂದು ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.

ಜಿಎಸ್‌ಟಿಯು ನಾಗರಿಕರು, ಗ್ರಾಹಕರು ಮತ್ತು ಸರ್ಕಾರಗಳಿಗೆ ಪ್ರಯೋಜನಕಾರಿಯಾಗಿದೆ. ಆದಾಯವು ಪ್ರತಿ ತಿಂಗಳು ಹೆಚ್ಚುತ್ತಿದೆ ಮತ್ತು ಜಿಎಸ್‌ಟಿಯಡಿ ತೆರಿಗೆ ದರ ಕಡಿಮೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯಗಳು ಒಗ್ಗೂಡಿವೆ ಎಂದು ಅವರು ತಿಳಿಸಿದ್ದಾರೆ. 

ಈ ಹಣಕಾಸು ವರ್ಷದಲ್ಲಿ ಪ್ರತಿ ತಿಂಗಳು ಸರಾಸರಿ ಜಿಎಸ್‌ಟಿ ಸಂಗ್ರಹ 1.60 ಲಕ್ಷ ಕೋಟಿ ರೂ. ಆಗಿದ್ದು, ಅಸ್ಸಾಂ, ಗುಜರಾತ್ ಮತ್ತು ಹರಿಯಾಣ ಮತ್ತು ಪುದುಚೇರಿ, ದಾದ್ರಾ ನಗರ ಹವೇಲಿ, ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದಿನಿಂದ ಪ್ರಾಯೋಗಿಕ ಆಧಾರದ ಮೇಲೆ ಮೇರಾ ಬಿಲ್ ಮೇರಾ ಅಧಿಕಾರ್ ಯೋಜನೆಯನ್ನು ಸರ್ಕಾರ ಶುಕ್ರವಾರ ಪ್ರಾರಂಭಿಸಿದೆ. ಪ್ರತಿ ತಿಂಗಳು 810 ಲಕ್ಕಿ ಡ್ರಾಗಳು ನಡೆಯುತ್ತವೆ. ಪ್ರತಿ ತ್ರೈಮಾಸಿಕದಲ್ಲಿ 2 ಬಂಪರ್ ಲಕ್ಕಿ ಡ್ರಾಗಳು ಇರುತ್ತವೆ.

ಮಾಸಿಕ ಡ್ರಾಗಳಲ್ಲಿ ತಲಾ 10,000 ರೂಪಾಯಿಗಳ ಮೌಲ್ಯದ ಜಿಎಸ್‌ಟಿ ಇನ್‌ವಾಯ್ಸ್‌ಗಳ 800 ಲಕ್ಕಿ ಡ್ರಾಗಳು ಮತ್ತು ತಲಾ 10 ಲಕ್ಷ ರೂ. ಬಹುಮಾನಗಳೊಂದಿಗೆ 10 ಡ್ರಾಗಳು ಸೇರಿವೆ. ಪ್ರತಿ ತ್ರೈಮಾಸಿಕದಲ್ಲಿ ತಲಾ 1 ಕೋಟಿ ರೂ. ಬಂಪರ್ ಡ್ರಾ ಸಿಗಲಿದೆ.  ಜಿಎಸ್‌ಟಿ ಇನ್ ವಾಯ್ಸ್  ತಮ್ಮ ಹಕ್ಕು ಎಂದು ಜನರು ತಿಳಿದಿರಬೇಕು, ಮಾರಾಟದ ನಂತರದ ಸೇವೆಗೆ ಇದು ಅಗತ್ಯವಿದೆ ಮತ್ತು ಜನರಿಗೆ ಅರಿವು ಮೂಡಿಸಲು ನಾವು ಈ ಯೋಜನೆಯನ್ನು ಪ್ರಾರಂಭಿಸಿದ್ದೇವೆ ಎಂದು ಮಲ್ಹೋತ್ರಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT