ಸಾಂದರ್ಭಿಕ ಚಿತ್ರ 
ವಾಣಿಜ್ಯ

ನಿಮ್ಮಲ್ಲಿ 2000 ಮುಖಬೆಲೆಯ ನೋಟು ಇದೆಯೇ? ಇಂದೇ ಕೊನೆ ದಿನ, ಬ್ಯಾಂಕ್ ನಲ್ಲಿ ವಿನಿಮಯ ಮಾಡಿಕೊಳ್ಳಿ!

2000 ರೂಪಾಯಿ ಮುಖಬೆಲೆಯ ನೋಟು ಇಂದು ಸೆಪ್ಟೆಂಬರ್ 30 ಶನಿವಾರದ ನಂತರ ಅದರ ಮೌಲ್ಯವನ್ನು ಹೊಂದಿರುವುದಿಲ್ಲ. ಯಾವುದೇ ಬ್ಯಾಂಕ್‌ನಲ್ಲಿ ಅದನ್ನು ವಿನಿಮಯ ಮಾಡಿಕೊಳ್ಳದಿದ್ದರೆ ಅದು ಅಮಾನ್ಯವಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ಪಷ್ಟಪಡಿಸಿದೆ. 

ನವದೆಹಲಿ: 2000 ರೂಪಾಯಿ ಮುಖಬೆಲೆಯ ನೋಟು ಇಂದು ಸೆಪ್ಟೆಂಬರ್ 30 ಶನಿವಾರದ ನಂತರ ಅದರ ಮೌಲ್ಯವನ್ನು ಹೊಂದಿರುವುದಿಲ್ಲ. ಯಾವುದೇ ಬ್ಯಾಂಕ್‌ನಲ್ಲಿ ಅದನ್ನು ವಿನಿಮಯ ಮಾಡಿಕೊಳ್ಳದಿದ್ದರೆ ಅದು ಅಮಾನ್ಯವಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ಪಷ್ಟಪಡಿಸಿದೆ. 

ಕಾಲಮಿತಿಯಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ನಲ್ಲಿ ವಿನಿಮಯ ಮಾಡಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸುವ ಉದ್ದೇಶಕ್ಕಾಗಿ RBI ಈ ಮೊದಲು ಸೆಪ್ಟೆಂಬರ್ 30ನ್ನು ಕೊನೆಯ ದಿನಾಂಕವಾಗಿ ನಿಗದಿಪಡಿಸಿತ್ತು.

ಆರ್‌ಬಿಐ ಮೇ ತಿಂಗಳಲ್ಲಿ ಹೆಚ್ಚಿನ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಿದ ನಂತರ 2000 ಮುಖಬೆಲೆಯ ಬ್ಯಾಂಕ್‌ನೋಟುಗಳಲ್ಲಿ ಸುಮಾರು ಶೇಕಡಾ 93ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ ಎಂದು ಹೇಳಿದೆ.

ಜನರು 2000 ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಶಾಖೆಗಳು ಮತ್ತು ಆರ್‌ಬಿಐನ ಪ್ರಾದೇಶಿಕ ಶಾಖೆಗಳಲ್ಲಿ ಬದಲಾಯಿಸಲು ಅಥವಾ ಠೇವಣಿ ಮಾಡಲು ಸೂಚಿಸಲಾಗಿದೆ. ಖಾತೆದಾರರಲ್ಲದವರು ಯಾವುದೇ ಬ್ಯಾಂಕ್ ಶಾಖೆಯಲ್ಲಿ ಒಮ್ಮೆಗೆ 20,000 ಮಿತಿಯವರೆಗೆ 2000 ಬ್ಯಾಂಕ್‌ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದು.

ಮೇ 19 ರಂದು, ಆರ್‌ಬಿಐ 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿತು ಆದರೆ ಅದು ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಹೇಳಿದೆ. ಆದರೆ, ತಕ್ಷಣವೇ ಜಾರಿಗೆ ಬರುವಂತೆ ಇಂತಹ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿತ್ತು.

2000 ಮುಖಬೆಲೆಯ ಬ್ಯಾಂಕ್‌ ನೋಟನ್ನು ನವೆಂಬರ್ 2016 ರಲ್ಲಿ ದೇಶದಲ್ಲಿ ಚಲಾವಣೆಗೆ ಪರಿಚಯಿಸಲಾಯಿತು, ಪ್ರಾಥಮಿಕವಾಗಿ ಆ ಸಮಯದಲ್ಲಿ ಚಲಾವಣೆಯಲ್ಲಿದ್ದ ಎಲ್ಲಾ 500 ಮತ್ತು 1000 ಬ್ಯಾಂಕ್‌ನೋಟುಗಳ ವಹಿವಾಟನ್ನು ಹಿಂಪಡೆಯಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT