ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ 
ವಾಣಿಜ್ಯ

Repo Rate unchanged: ಸತತ ಏಳನೇ ಬಾರಿಗೆ ರೆಪೋ ದರ ಬದಲಾವಣೆ ಇಲ್ಲ: RBI ಗವರ್ನರ್ ಶಕ್ತಿಕಾಂತ್ ದಾಸ್!

ನಿರೀಕ್ಷೆಯಂತೆಯೇ ಸತತ ಏಳನೇ ಬಾರಿಗೆ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ.

ನವದೆಹಲಿ: ನಿರೀಕ್ಷೆಯಂತೆಯೇ ಸತತ ಏಳನೇ ಬಾರಿಗೆ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ.

ಏಪ್ರಿಲ್ 3ರಿಂದ ನಡೆದ ಆರ್​ಬಿಐನ ಹಣಕಾಸು ನೀತಿ ಸಮಿತಿ ಅಥವಾ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಎಂಪಿಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದ್ದು, ಸತತ ಏಳನೇ ಬಾರಿ ರೆಪೋ ದರ ಬದಲಾವಣೆ ಆಗಿಲ್ಲ. ಹಾಗೆಯೇ, ಹಣದ ಹರಿವು ಸಂಕುಚಿತಗೊಳಿಸುವ ಕ್ರಮವನ್ನೂ (Withdrawal of Accommodation) ಆರ್​ಬಿಐ ಮುಂದುವರಿಸುತ್ತಿರುವುದನ್ನು ತಿಳಿಸಿದ್ದಾರೆ.

ಎಂಪಿಸಿ ಸಭೆಯಲ್ಲಿ ಗವರ್ನರ್ ಶಕ್ತಿಕಾಂತ್ ದಾಸ್ ಅವರನ್ನೂ ಸೇರಿ ಭಾಗವಹಿಸಿದ್ದ 6 ಮಂದಿ ಪೈಕಿ ಐವರು ರೆಪೋ ದರ ಯಥಾಸ್ಥಿತಿ ಮುಂದುವರಿಸಲು ಒಲವು ತೋರಿದರೆನ್ನಲಾಗಿದೆ. 5:1 ಮತಗಳು ಈ ನಿರ್ಧಾರದ ಪರವಾಗಿ ಬಂದಿದೆ. ಇದರೊಂದಿಗೆ ಕಳೆದ ಒಂದು ವರ್ಷದಿಂದ ಇರುವ ಶೇ. 6.5ರ ಬಡ್ಡಿದರವೇ ಮುಂದುವರಿಯಲಿದೆ.

ನಿರೀಕ್ಷಿತ ನಿರ್ಧಾರ

ವಿವಿಧ ಆರ್ಥಿಕ ತಜ್ಞರು ಮತ್ತು ರೇಟಿಂಗ್ ಏಜೆನ್ಸಿಗಳು ಆರ್​ಬಿಐ ಈ ಬಾರಿಯೂ ರೆಪೋ ದರದಲ್ಲಿ ಬದಲಾವಣೆ ಮಾಡದಿರಬಹುದು ಎಂದು ನಿರೀಕ್ಷಿಸಿದ್ದವು.

ಆರ್ಥಿಕ ಪರಿಸ್ಥಿತಿ ಕುರಿತು ಚರ್ಚೆ

ರೆಪೊ ದರ, ರಿವರ್ಸ್ ರೆಪೊ ದರ ಮತ್ತು ಇತರ ನೀತಿ ದರಗಳ ಕುರಿತು MPCಯ ನಿರ್ಧಾರವನ್ನು ಪ್ರಕಟಿಸುವುದರ ಹೊರತಾಗಿ, ಸಮಿತಿ ಸಭೆ ಪ್ರಸ್ತುತ ದೇಶೀಯ ಮತ್ತು ಜಾಗತಿಕ ಆರ್ಥಿಕ ಪರಿಸ್ಥಿತಿಯನ್ನು ಚರ್ಚಿಸಿವೆ. ಭಾರತದ ಆರ್ಥಿಕತೆಯು 2023ರ ನಾಲ್ಕನೇ ತ್ರೈಮಾಸಿಕದಲ್ಲಿ ಶೇಕಡಾ 8.4ರಷ್ಟು ಬೆಳೆದಿದೆ. ಇದು ಪ್ರಮುಖ ಆರ್ಥಿಕತೆಗಳಲ್ಲಿ ಅತ್ಯಂತ ವೇಗದ ಚಲನೆ. ಫೆಬ್ರವರಿಯಲ್ಲಿ ಚಿಲ್ಲರೆ ಬೆಲೆಗಳು ಹೆಚ್ಚಿದ ಆಹಾರ ಬೆಲೆಗಳಿಂದಾಗಿ ನಿರೀಕ್ಷಿತ ವೇಗಕ್ಕಿಂತ 5.09 ಶೇಕಡಾಕ್ಕೆ ಏರಿತು. RBIನ ನಿಗದಿತ 4ಕ್ಕಿಂತ ಶೇಕಡಾ ಗುರಿ ಹೆಚ್ಚಿದೆ.

ಫೆಬ್ರವರಿಯಲ್ಲಿ, 2024-25ರಲ್ಲಿ ಹಣದುಬ್ಬರವು ಸರಾಸರಿ 4.5%ಕ್ಕೆ ಇಳಿದಿವೆ. ಆರು ಹಣಕಾಸು ನೀತಿ ಸಮಿತಿ ಸದಸ್ಯರಲ್ಲಿ ಒಬ್ಬರು ದರ ಕಡಿತಕ್ಕೆ ಮತ ಹಾಕಿದರು. ಆದರೆ ದರ ಬದಲಾಗಲಿಲ್ಲ. ಭಾರತದಲ್ಲಿ ಹಣದುಬ್ಬರವು ಕೇಂದ್ರೀಯ ಬ್ಯಾಂಕಿನ ಗುರಿಗಿಂತ ಹೆಚ್ಚಾಗಿದೆ. ಪ್ರಮುಖ ಹಣದುಬ್ಬರವು 4%ಗಿಂತ ಕಡಿಮೆಯಾಗಿದೆ. ಇದು ಕೇಂದ್ರ ಬ್ಯಾಂಕ್ ಮುಂದೆ ನೀತಿಯನ್ನು ಸಡಿಲಗೊಳಿಸುವ ಅವಕಾಶ ನೀಡಲಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT