ಭಾರತದ ಮಸಾಲೆ ಪದಾರ್ಥಗಳು  
ವಾಣಿಜ್ಯ

ಭಾರತದ ಮಸಾಲೆ ಪದಾರ್ಥಗಳಿಗೆ ಹಾಂಕಾಂಗ್, ಸಿಂಗಾಪುರ ನಿಷೇಧ!

ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಭಾರತೀಯ ಆಹಾರ ನಿಯಂತ್ರಕಗಳ ಬಗ್ಗೆ ಜನರಿಗೆ ವಿಶ್ವಾಸ ಕಡಿಮೆಯಾಗಿದೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಹೇಳುತ್ತದೆ.

ನವದೆಹಲಿ: ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ನಂತರ ಹಾಂಗ್ ಕಾಂಗ್ ಮತ್ತು ಸಿಂಗಾಪುರ ದೇಶಗಳು ಎರಡು ಜನಪ್ರಿಯ ಭಾರತದ ಮಸಾಲೆ ಬ್ರಾಂಡ್‌ಗಳ ನಾಲ್ಕು ಉತ್ಪನ್ನಗಳನ್ನು ನಿಷೇಧಿಸಿದ ನಂತರ, ಭಾರತೀಯರಲ್ಲಿ ಅವುಗಳ ಸುರಕ್ಷತೆಯ ಬಗ್ಗೆ ಚಿಂತೆಗೀಡುಮಾಡಿದೆ.

ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಭಾರತೀಯ ಆಹಾರ ನಿಯಂತ್ರಕಗಳ ಬಗ್ಗೆ ಜನರಿಗೆ ವಿಶ್ವಾಸ ಕಡಿಮೆಯಾಗಿದೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಹೇಳುತ್ತದೆ.

ಸ್ತನ ಕ್ಯಾನ್ಸರ್ ಮತ್ತು ಲಿಂಫೋಮಾದ ಅಪಾಯವನ್ನು ಹೆಚ್ಚಿಸುವ ಕ್ಯಾನ್ಸರ್-ಉಂಟುಮಾಡುವ ಏಜೆಂಟ್ ಎಥಿಲೀನ್ ಆಕ್ಸೈಡ್ ಇರುವಿಕೆಯನ್ನು ಉಲ್ಲೇಖಿಸಿ ಹಾಂಗ್ ಕಾಂಗ್ ಮತ್ತು ಸಿಂಗಾಪುರ ದೇಶಗಳು MDH ಮತ್ತು ಎವರೆಸ್ಟ್ ಜಾತಿಯ ನಾಲ್ಕು ಮಸಾಲೆ ಉತ್ಪನ್ನಗಳನ್ನು ನಿಷೇಧಿಸಿವೆ.

ಈ ಎರಡು ದೇಶಗಳು ಉತ್ಪನ್ನಗಳನ್ನು ನಿಷೇಧಿಸಿದ ನಂತರ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಈ ಬಗ್ಗೆ ತನಿಖೆ ನಡೆಸುತ್ತಿದೆ.

ಸಾಮಾಜಿಕ ಮಾಧ್ಯಮ ವೇದಿಕೆ ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆಯ ಪ್ರಕಾರ, ಈ ಎರಡು ಬ್ರಾಂಡ್‌ಗಳ ಪ್ಯಾಕೇಜ್ಡ್ ಮಸಾಲೆಗಳನ್ನು ದೀರ್ಘಕಾಲದವರೆಗೆ ಸೇವಿಸುತ್ತಿದ್ದ ಶೇಕಡಾ 72ರಷ್ಟು ಗ್ರಾಹಕರು ಅವುಗಳಲ್ಲಿ ಕಾರ್ಸಿನೋಜೆನಿಕ್ ಅಂಶಗಳು ಕಂಡುಬಂದ ನಂತರ ಕಳವಳ ವ್ಯಕ್ತಪಡಿಸಿದ್ದಾರೆ.

ಸಮೀಕ್ಷೆಗೆ ಒಳಪಟ್ಟ 293 ಜಿಲ್ಲೆಗಳಲ್ಲಿ ನೆಲೆಸಿರುವ 12,361 ಜನರಲ್ಲಿ ಶೇಕಡಾ 62 ಜನರು ಈ ಬ್ರಾಂಡ್‌ಗಳ ಮಸಾಲೆಗಳನ್ನು ಸೇವಿಸುತ್ತಿದ್ದಾರೆ. ಕೇವಲ ಶೇಕಡಾ 10ರಷ್ಟು ಜನರು ಈ ಬ್ರಾಂಡ್‌ಗಳನ್ನು ಸೇವಿಸುತ್ತಿಲ್ಲ ಎಂದು ತಿಳಿದುಬಂದಿದೆ.

ಲೋಕಲ್ ಸರ್ಕಲ್ಸ್ ಸಂಸ್ಥಾಪಕ ಸಚಿನ್ ತಪಾರಿಯಾ ಪ್ರಕಾರ, ಕೇಂದ್ರ ಮತ್ತು ರಾಜ್ಯಗಳೆರಡೂ - ಸಾರ್ವಜನಿಕ ಕಾಳಜಿಗಳನ್ನು ಗಮನಿಸಿ ಗುಣಮಟ್ಟವನ್ನು ಬಲಪಡಿಸುವ ಅಗತ್ಯವಿದೆ, ಅವುಗಳ ಅನುಷ್ಠಾನ, ನೀತಿ ಮತ್ತು ಆಡಳಿತವು ಕಲುಷಿತ ಆಹಾರ ಉತ್ಪನ್ನಗಳಾಗಿ ಜನಸಮುದಾಯ ಮೇಲೆ ದೀರ್ಘಾವಧಿಯ ಪ್ರತಿಕೂಲ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಹೇಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT