ಏರ್ ಇಂಡಿಯಾಗೆ ದಂಡ 
ವಾಣಿಜ್ಯ

'Non-qualified' ಪೈಲಟ್ ಗಳ ಬಳಕೆ: Air India ಗೆ ದುಬಾರಿ ದಂಡ ಹೇರಿದ DGCA

ಅರ್ಹರಲ್ಲದ ಪೈಲಟ್ ಗಳನ್ನು ವಿಮಾನಯಾನ ಸೇವೆಗೆ ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ಡಿಜಿಸಿಎ ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಗೆ 90 ಲಕ್ಷರೂ ದಂಡ ವಿಧಿಸಿದೆ.

ಮುಂಬೈ: ಟಾಟಾ ಸಮೂಹ ಒಡೆತನದ ಏರ್ ಇಂಡಿಯಾ ಸಂಸ್ಥೆಗೆ ಭಾರತೀಯ ವಿಮಾನಯಾನ ನಿಯಂತ್ರಣ ಸಂಸ್ಥೆ (ಡಿಜಿಸಿಎ)ಶಾಕ್ ನೀಡಿದ್ದು, ದುಬಾರಿ ದಂಡ ಹೇರಿದೆ.

ಹೌದು.. ಅರ್ಹರಲ್ಲದ ಪೈಲಟ್ ಗಳನ್ನು ವಿಮಾನಯಾನ ಸೇವೆಗೆ ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ಡಿಜಿಸಿಎ ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಗೆ 90 ಲಕ್ಷರೂ ದಂಡ ವಿಧಿಸಿದೆ. ಅರ್ಹತೆ ಹೊಂದಿರದ ಸಿಬ್ಬಂದಿ ಸದಸ್ಯರ ಮೂಲಕ ವಿಮಾನವನ್ನು ನಿರ್ವಹಿಸಿದ್ದಕ್ಕಾಗಿ ಈ ದಂಡವನ್ನು ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 90 ಲಕ್ಷ ರೂ ದಂಡ ಹೇರಿದ್ದು ಮಾತ್ರವಲ್ಲದೇ ಡಿಜಿಸಿಎ ಏರ್ ಇಂಡಿಯಾದ ಡೈರೆಕ್ಟರ್ ಆಪರೇಷನ್‌ Pankul Mathur ಅವರಿಗೆ 6 ಲಕ್ಷ ರೂಪಾಯಿ ಮತ್ತು ಡೈರೆಕ್ಟರ್ ಟ್ರೈನಿಂಗ್‌ Manish Vasavada ಅವರಿಗೆ 3 ಲಕ್ಷ ರೂಪಾಯಿ ದಂಡ ವಿಧಿಸಿದೆ. ಜುಲೈ 10 ರಂದು ಸಲ್ಲಿಸಲಾದ ಏರ್ ಇಂಡಿಯಾದ ಸ್ವಯಂಪ್ರೇರಿತ ವರದಿಯ ಆಧಾರದ ಮೇಲೆ ನಿಯಂತ್ರಕ ಸಂಸ್ಥೆ ಈ ಕ್ರಮ ಕೈಗೊಂಡಿದೆ.

ಡಿಜಿಸಿಎ ತನಿಖೆ

ಜುಲೈ 10 ರಂದು ಏರ್ ಇಂಡಿಯಾ ಸ್ವಯಂ ಪ್ರೇರಣೆಯಿಂದ ಡಿಜಿಸಿಎಗೆ ವರದಿ ಸಲ್ಲಿಸಿದ್ದು, ಇದಾದ ನಂತರ ನಿಯಂತ್ರಕ ಸಂಸ್ಥೆ ತನಿಖೆ ನಡೆಸಿತ್ತು. ಈ ವೇಳೆ ಕಂಪನಿಯ ಕೆಲವು ಪೋಸ್ಟ್ ಹೋಲ್ಡರ್‌ಗಳು ಮತ್ತು ಸಿಬ್ಬಂದಿ ಅನೇಕ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಮತ್ತು ಭದ್ರತಾ ಅಪಾಯಗಳನ್ನು ಉಂಟುಮಾಡುವ ಲೋಪಗಳು ಕಂಡುಬಂದಿವೆ. ಇದೇ ಕಾರಣಕ್ಕೆ ಏರ್ ಇಂಡಿಯಾ ಸಂಸ್ಥೆಗೆ ಡಿಜಿಸಿಎ ದಂಡ ಹೇರಿದೆ ಎನ್ನಲಾಗಿದೆ.

ಪೈಲಟ್‌ಗಳಿಗೆ ಎಚ್ಚರಿಕೆ

ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಪೈಲಟ್‌ಗೆ ಎಚ್ಚರಿಕೆ ನೀಡಲಾಗಿದೆ ಎಂದು ನಿಯಂತ್ರಕರು ತಿಳಿಸಿದ್ದಾರೆ. DGCA ಹೊರಡಿಸಿದ ಹೇಳಿಕೆಯ ಪ್ರಕಾರ, ಏರ್ ಇಂಡಿಯಾ ಲಿಮಿಟೆಡ್ ತರಬೇತಿದಾರರಲ್ಲದ ಲೈನ್ ಕ್ಯಾಪ್ಟನ್ ಮತ್ತು ನಾನ್-ಲೈನ್-ರಿಲೀಸ್ಡ್ ಫಸ್ಟ್ ಆಫೀಸರ್‌ನೊಂದಿಗೆ ವಿಮಾನವನ್ನು ನಿರ್ವಹಿಸಲಾಗಿತು. ನಿಯಂತ್ರಕರ ಪ್ರಕಾರ, ಇದು ಗಂಭೀರ ವಿಷಯವಾಗಿದೆ ಏಕೆಂದರೆ ಇದು ಸುರಕ್ಷತೆಯ ಅಪಾಯಗಳನ್ನು ಉಂಟುಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ