ಭಾರತ್ ಅಕ್ಕಿ (ಸಾಂಕೇತಿಕ ಚಿತ್ರ) 
ವಾಣಿಜ್ಯ

ಶೀಘ್ರವೇ ಮಾರುಕಟ್ಟೆಗೆ ಭಾರತ್ ಅಕ್ಕಿ; ಪ್ರತಿ ಕೆ.ಜಿ.ಗೆ 29 ರೂಪಾಯಿ!

ಬೆಲೆ ಏರಿಕೆಗೆ ಕಡಿವಾಣ ಹಾಕುವುದಕ್ಕೆ ಸರ್ಕಾರ ರೀಟೇಲ್ ಮಳಿಗೆಗಳ ಮೂಲಕ ಸಬ್ಸಿಡಿ ದರದಲ್ಲಿ ಧಾನ್ಯಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. 

ನವದೆಹಲಿ: ಬೆಲೆ ಏರಿಕೆಗೆ ಕಡಿವಾಣ ಹಾಕುವುದಕ್ಕೆ ಸರ್ಕಾರ ರೀಟೇಲ್ ಮಳಿಗೆಗಳ ಮೂಲಕ ಸಬ್ಸಿಡಿ ದರದಲ್ಲಿ ಧಾನ್ಯಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. 

ರೀಟೆಲ್ ಮಳಿಗೆಗಳ ಮೂಲಕ 29 ರೂಪಾಯಿಗಳಿಗೆ 1 ಕೆ.ಜಿ ಅಕ್ಕಿ ಮಾರಾಟ ಮಾಡುವ ನಿರ್ಧಾರವನ್ನು ಮುಂದಿನ ಕೆಲವೇ ದಿನಗಳಲ್ಲಿ ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಮುಂದಿನ ಕೆಲವೇ ವಾರಗಳಲ್ಲಿ ಮಾರುಕಟ್ಟೆಯಲ್ಲಿ ಭಾರತ್ ಅಕ್ಕಿ (Bharat rice) ಪ್ರತಿ ಕೆ.ಜಿಗೆ 29 ರೂಪಾಯಿಗಳಿಗೆ ಲಭ್ಯವಾಗಲಿದೆ. 

ನಿರ್ದಿಷ್ಟ ರಫ್ತು ಹಾಗೂ ಎಫ್ ಸಿಐ ನಿಂದ ಮುಕ್ತ ಮಾರುಕಟ್ಟೆ ಮಾರಾಟಕ್ಕೆ ಕಡಿವಾಣ ಹಾಕಿದ ನಂತರವೂ ಬಹುಮಂದಿ ಉಪಯೋಗಿಸುವ ಅಕ್ಕಿಯ ವೈವಿಧ್ಯಗಳ ರೀಟೆಲ್ ಬೆಲೆ ಹಾಗೆಯೇ ಉಳಿದಿದ್ದು, ಈ ಬೆಲೆಗಳನ್ನು ಕಡಿಮೆ ಮಾಡುವುದು ಈ ಕ್ರಮದ ಉದ್ದೇಶವಾಗಿದೆ. 

ಅಕ್ಕಿ ಬೆಲೆ ಏರಿಕೆಯಾಗುತ್ತಿರುವ ಸಮಸ್ಯೆ ಕಳವಳಕಾರಿಯಾಗಿ, ಆಶಾದಾಯಕವಾಗಿ ಭಾರತ್ ಅಕ್ಕಿ ಉಪಕ್ರಮ ಬೆಲೆಗಳನ್ನು ತಗ್ಗಿಸುವಲ್ಲಿ ಸ್ವಲ್ಪಮಟ್ಟಿಗೆ ಪರಿಣಾಮ ಬೀರಬಹುದು" ಎಂದು ಅಧಿಕಾರಿಯೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದಾಖಲೆಯ ಉತ್ಪಾದನೆ, ಎಫ್‌ಸಿಐನೊಂದಿಗೆ ಸಾಕಷ್ಟು ದಾಸ್ತಾನುಗಳು ಮತ್ತು ಧಾನ್ಯ ರಫ್ತಿನ ಮೇಲೆ ವಿಧಿಸಲಾದ ವಿವಿಧ ನಿರ್ಬಂಧಗಳು ಮತ್ತು ಸುಂಕಗಳ ಹೊರತಾಗಿಯೂ ಅಕ್ಕಿಯ ದೇಶೀಯ ಬೆಲೆಗಳು ಏರುಗತಿಯಲ್ಲಿದೆ ಎಂದು ಅಧಿಕಾರಿ ಹೇಳಿದರು.

ಪ್ರಸ್ತುತ, ಭಾರತ್ ಬೇಳೆ ಮತ್ತು ಭಾರತ್ ಹಿಟ್ಟು ಉಪಕ್ರಮಗಳ ಅಡಿಯಲ್ಲಿ ಸರ್ಕಾರ ಚನಾ ದಾಲ್ ಮತ್ತು ಹಿಟ್ಟು ನ್ನು ಅನುಕ್ರಮವಾಗಿ ರೂ 60/ಕೆಜಿ ಮತ್ತು ರೂ 27.5/ಕೆಜಿಗೆ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಎಫ್‌ಸಿಐ ಇದುವರೆಗೆ ತನ್ನ ಹೆಚ್ಚುವರಿ ಸ್ಟಾಕ್‌ನಿಂದ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ 7 ಮಿಲಿಯನ್ ಟನ್ (MT) ಗೋಧಿಯನ್ನು ಬೃಹತ್ ಖರೀದಿದಾರರಿಗೆ ಮಾರಾಟ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT