ಸಾಂದರ್ಭಿಕ ಚಿತ್ರ 
ವಾಣಿಜ್ಯ

ಬೆಂಗಳೂರು ಮೂಲದ ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ!

ಬೆಂಗಳೂರು ಮೂಲದ ಸೆಮಿಕಂಡಕ್ಟರ್ ಮತ್ತು ಎಂಬೆಡೆಡ್ ಸಿಸ್ಟಮ್ಸ್ ಡಿಸೈನ್ ಕಂಪನಿ ಆಗಿರುವ InSemi ಅನ್ನು 280 ಕೋಟಿ ರೂ.ಗೆ ಸ್ವಾಧೀನಪಡಿಸಿಕೊಳ್ಳಲು ಟೆಕ್ ದೈತ್ಯ ಇನ್ಫೋಸಿಸ್ ಒಪ್ಪಿಕೊಂಡಿದೆ.

ಬೆಂಗಳೂರು: ಬೆಂಗಳೂರು ಮೂಲದ ಸೆಮಿಕಂಡಕ್ಟರ್ ಮತ್ತು ಎಂಬೆಡೆಡ್ ಸಿಸ್ಟಮ್ಸ್ ಡಿಸೈನ್ ಕಂಪನಿ ಆಗಿರುವ InSemi ಅನ್ನು 280 ಕೋಟಿ ರೂ.ಗೆ ಸ್ವಾಧೀನಪಡಿಸಿಕೊಳ್ಳಲು ಟೆಕ್ ದೈತ್ಯ ಇನ್ಫೋಸಿಸ್ ಒಪ್ಪಿಕೊಂಡಿದೆ.

“AI ಅನುಕೂಲತೆಗಳು, ಸ್ಮಾರ್ಟ್ ಸಾಧನಗಳು, 5G ಮತ್ತು ಅದಕ್ಕೂ ಮೀರಿದ ಎಲೆಕ್ಟ್ರಿಕ್ ವಾಹನಗಳ ಆಗಮನದೊಂದಿಗೆ, ಎಂಬೆಡೆಡ್ ಸಿಸ್ಟಮ್‌ಗಳೊಂದಿಗೆ ಸಂಯೋಜಿಸಲ್ಪಟ್ಟ ಮುಂದಿನ ಪೀಳಿಗೆಯ ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳ ಬೇಡಿಕೆಯು ವಿಶಿಷ್ಟವಾದ ವಿಭಿನ್ನತೆಯನ್ನು ಸೃಷ್ಟಿಸುತ್ತದೆ. InSemi ಒಂದು ಕಾರ್ಯತಂತ್ರದ ಹೂಡಿಕೆಯಾಗಿದ್ದು, ಇಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಾಯಕತ್ವದ ಸ್ಥಾನವನ್ನು ಪಡೆದುಕೊಳ್ಳುತ್ತದೆ ಎಂದು ಇನ್ಫೋಸಿಸ್‌ನ EVP ಮತ್ತು ಸಹ-ವಿತರಣಾ ಮುಖ್ಯಸ್ಥ ದಿನೇಶ್ ಆರ್ ಹೇಳಿದರು.

 2013 ರಲ್ಲಿ ಸ್ಥಾಪಿಸಲಾದ InSemi  900 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು, ಎಲೆಕ್ಟ್ರಾನಿಕ್ ವಿನ್ಯಾಸ, ಪ್ಲಾಟ್‌ಫಾರ್ಮ್ ವಿನ್ಯಾಸ, ಆಟೊಮೇಷನ್, ಎಂಬೆಡೆಡ್ ಮತ್ತು ಸಾಫ್ಟ್‌ವೇರ್ ತಂತ್ರಜ್ಞಾನಗಳ ಪರಿಣತಿಯೊಂದಿಗೆ ಎಂಡ್-ಟು-ಎಂಡ್ ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳನ್ನು ನೀಡುತ್ತದೆ. ಇದು ಸೆಮಿ-ಕಂಡಕ್ಟರ್, ಗ್ರಾಹಕ ಎಲೆಕ್ಟ್ರಾನಿಕ್ಸ್, ಆಟೋಮೋಟಿವ್ ಮತ್ತು ಹೈಟೆಕ್ ಉದ್ಯಮಗಳಾದ್ಯಂತ ಹಲವಾರು ಪ್ರಮುಖ ಜಾಗತಿಕ ನಿಗಮಗಳಿಗೆ ಸೇವೆ ಸಲ್ಲಿಸುತ್ತದೆ.

ಕಳೆದ ವರ್ಷ ಮಾರ್ಚ್‌ಗೆ ಕೊನೆಗೊಂಡ ವರ್ಷದಲ್ಲಿ ಕಂಪನಿಯು 154 ಕೋಟಿ ಆದಾಯವನ್ನು ಹೊಂದಿತ್ತು. ಇದರ ಸ್ವಾಧೀನವು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಗೆ ನಮ್ಮ ಬದ್ಧತೆಯನ್ನು ಪ್ರದರ್ಶಿಸುತ್ತದೆ ಮತ್ತು ಎಂಜಿನಿಯರಿಂಗ್ ನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಸೇವೆಗಳಲ್ಲಿ ಪರಿಣತಿಯನ್ನು ಬಲಪಡಿಸುತ್ತದೆ" ಎಂದು ಇನ್ಫೋಸಿಸ್ ಹೇಳಿದೆ.

ಇನ್ಫೋಸಿಸ್ ಪ್ರಕಾರ, ಸ್ವಾಧೀನ ಪ್ರಕ್ರಿಯೆಯು 2024 ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇನ್ಫೋಸಿಸ್ ನೊಂದಿಗೆ ಸ್ವಾಧೀನದೊಂದಿಗೆ ಸಹಯೋಗ ದೊಡ್ಡ ಪ್ರಮಾಣದಲ್ಲಿ ಸೃಷ್ಟಿಯಾಗಲಿದೆ. AI, ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಶಕ್ತಿ ಬರಲಿದೆ. ಮುಂದಿನ ಪೀಳಿಗೆಯ ತಂತ್ರಜ್ಞಾನದ ಶಕ್ತಿಯನ್ನು ಜಾಗತಿಕ ಗ್ರಾಹಕರು ಮತ್ತು ಉದ್ಯಮ ವಲಯಗಳಲ್ಲಿ ವಿಸ್ತರಿಸಲು ಅನುವು ಮಾಡಿಕೊಡುತ್ತದೆ ಎಂದು InSemi ಸಹ ಸಂಸ್ಥಾಪಕರಾದ ಶ್ರೀಕಾಂತ್ ಸಂಪಿಗೆತಯಾ ಮತ್ತು ಅರೂಪ್ ದಶ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT