ಸಾಂದರ್ಭಿಕ ಚಿತ್ರ 
ವಾಣಿಜ್ಯ

ತೆರಿಗೆದಾರರು ಡಿಸೆಂಬರ್ 31 ರಿಂದ 'ವಿವಾದ್ ಸೆ ವಿಶ್ವಾಸ್' 2024 ಸ್ಕೀಮ್ ಆಯ್ಕೆ ಮಾಡಬಹುದು: CBDT ಮುಖ್ಯಸ್ಥ

ತೆರಿಗೆದಾರರು ಈ ಹೊಸ ಯೋಜನೆಯನ್ನು ಆಯ್ಕೆ ಮಾಡಿಕೊಂಡರೆ, ಹೀಗೆ ಉಳಿದ ಹಲವು ಮೇಲ್ಮನವಿಗಳು ಇತ್ಯರ್ಥವಾಗಲಿವೆ ಎಂದು ಅವರು ತಿಳಿಸಿದ್ದಾರೆ.

ನವದೆಹಲಿ: ಬಾಕಿ ಉಳಿದಿರುವ ನೇರ ತೆರಿಗೆ ಮೇಲ್ಮನವಿಯ ಇತ್ಯರ್ಥಕ್ಕಾಗಿ ಬಜೆಟ್‌ನಲ್ಲಿ ಘೋಷಿಸಲಾದ 'ವಿವಾದ್ ಸೇ ವಿಶ್ವಾಸ್' ಯೋಜನೆಯನ್ನು ಈ ವರ್ಷ ಪ್ರಾರಂಭಿಸಲಾಗುವುದು. ಅಧಿಸೂಚನೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು CBDT ಅಧ್ಯಕ್ಷ ರವಿ ಅಗರವಾಲ್ ಬುಧವಾರ ಹೇಳಿದ್ದಾರೆ.

ಬಜೆಟ್ ನಂತರದ ಸಂದರ್ಶನದಲ್ಲಿ ಪಿಟಿಐಗೆ ಮಾತನಾಡಿದ ಅವರು, ದೇಶದ ವಿವಿಧ ನ್ಯಾಯಾಲಯಗಳಲ್ಲಿ ನೇರ ತೆರಿಗೆ ಸಂಬಂಧಿತ ಸಾಕಷ್ಟು ಮೇಲ್ಮನೆಗಳು ದಾಖಲಾಗಿವೆ. ತೆರಿಗೆದಾರರು ಈ ಹೊಸ ಯೋಜನೆಯನ್ನು ಆಯ್ಕೆ ಮಾಡಿಕೊಂಡರೆ, ಹೀಗೆ ಉಳಿದ ಹಲವು ಮೇಲ್ಮನವಿಗಳು ಇತ್ಯರ್ಥವಾಗಲಿವೆ ಎಂದು ಅವರು ತಿಳಿಸಿದ್ದಾರೆ.

ನೇರ ತೆರಿಗೆ ಅಥವಾ ಆದಾಯ ತೆರಿಗೆ ವರ್ಗದ ಅಡಿಯ ಪ್ರಕರಣಗಳಿಗೆ 2020ರಲ್ಲಿ ಮೊದಲ ಬಾರಿಗೆ 'ವಿವಾದ್ ಸೇ ವಿಶ್ವಾಸ್' ಯೋಜನೆಯನ್ನು ಸರ್ಕಾರ ಪರಿಚಯಿಸಿತು. ಹಲವು ಲಕ್ಷ ತೆರಿಗೆದಾರರು ಈ ಯೋಜನೆಯ ಲಾಭ ಪಡೆದಿದ್ದರಿಂದ ಸುಮಾರು 75,000 ಕೋಟಿ ಆದಾಯ ಬಂದಿದೆ. ಡಿಸೆಂಬರ್ 31 ರೊಳಗೆ ಈ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ಶೀಘ್ರದಲ್ಲಿ ಈ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗುವುದು. ಅದರೊಂದಿಗೆ ಸಾಮಾನ್ಯವಾಗಿ ಎದುರಾಗುವ ಪ್ರಶ್ನೆಗಳಿಗೆ ಉತ್ತರ ನೀಡಲಾಗುವುದು ಎಂದು ಅಗರ್ ವಾಲ್ ಹೇಳಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ "ಬಾಕಿ ಉಳಿದಿರುವ ಮೇಲ್ಮನವಿಗಳ ಇತ್ಯರ್ಥಕ್ಕಾಗಿ" ಯೋಜನೆಯನ್ನು ಪರಿಚಯಿಸಲು ಪ್ರಸ್ತಾಪಿಸಿದ್ದಾರೆ." ಇದನ್ನು ನಿರ್ದಿಷ್ಟ ದಿನಾಂಕದಿಂದ ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ. ಯೋಜನೆಗೆ ಕೊನೆಯ ದಿನಾಂಕವನ್ನು ಸಹ ಸೂಚಿಸಲು ಪ್ರಸ್ತಾಪಿಸಲಾಗಿದೆ" ಎಂದು ಸಚಿವರು ಮಂಗಳವಾರ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT