ಸಾಂದರ್ಭಿಕ ಚಿತ್ರ 
ವಾಣಿಜ್ಯ

2023-24 ರಲ್ಲಿ BSNL ಗೆ 18 ದಶಲಕ್ಷ ಗ್ರಾಹಕರು ಗುಡ್ ಬೈ!

BSNL ಗ್ರಾಹಕರ ಸಂಖ್ಯೆ 88.06 ಮಿಲಿಯನ್ ಗೆ ಇಳಿಕೆಯಾಗಿದೆ. ಭಾರತದ ಟೆಲಿಕಾಮ್ ನಿಯಂತ್ರಕ ಪ್ರಾಧಿಕಾರ(ಟ್ರಾಯ್) ನ ಮಾಹಿತಿಯ ಪ್ರಕಾರ, ಸಂಸ್ಥೆ 2024 ರ ಮಾರ್ಚ್ ತಿಂಗಳ ಒಂದರಲ್ಲೇ 2.3 ಮಿಲಿಯನ್ ಗ್ರಾಹಕರನ್ನು ಕಳೆದುಕೊಂಡಿದೆ.

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸೇವೆ ಪೂರೈಕೆದಾರ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) 2023-24 ಆರ್ಥಿಕ ವರ್ಷದಲ್ಲಿ 18 ದಶಲಕ್ಷದಷ್ಟು ಗ್ರಾಹಕರನ್ನು ಕಳೆದುಕೊಂಡಿದೆ.

ಈಗ BSNL ಗ್ರಾಹಕರ ಸಂಖ್ಯೆ 88.06 ಮಿಲಿಯನ್ ಗೆ ಇಳಿಕೆಯಾಗಿದೆ. ಭಾರತದ ಟೆಲಿಕಾಮ್ ನಿಯಂತ್ರಕ ಪ್ರಾಧಿಕಾರ(ಟ್ರಾಯ್) ನ ಮಾಹಿತಿಯ ಪ್ರಕಾರ, ಸಂಸ್ಥೆ 2024 ರ ಮಾರ್ಚ್ ತಿಂಗಳ ಒಂದರಲ್ಲೇ 2.3 ಮಿಲಿಯನ್ ಗ್ರಾಹಕರನ್ನು ಕಳೆದುಕೊಂಡಿದೆ. ಗ್ರಾಹಕರ ಸಂಖ್ಯೆ ಇಳಿಕೆಯಾಗುತ್ತಿರುವುದನ್ನು ತಡೆಗಟ್ಟಲು ಸಾಧ್ಯವಾಗದೇ ಇರುವ ಸಂಸ್ಥೆಗಳ ಪೈಕಿ ವೊಡಾಫೋನ್ ನಂತರದ ಸ್ಥಾನದಲ್ಲಿ ಬಿಎಸ್ಎನ್ಎಲ್ ಇದೆ.

ಉದ್ಯಮದ ತಜ್ಞರ ಪ್ರಕಾರ ಈ ಕುಸಿತಕ್ಕೆ ನೆಟ್‌ವರ್ಕ್ ಅಪ್‌ಗ್ರೇಡ್‌ಗಳಲ್ಲಿನ ಹೂಡಿಕೆಯ ಕೊರತೆ ಕಾರಣವಾಗಿದೆ. BSNL ತನ್ನ ಗ್ರಾಹಕರಿಗೆ ತನ್ನ ಹೈ-ಸ್ಪೀಡ್ 4G ಮತ್ತು 5G ನೆಟ್‌ವರ್ಕ್‌ಗಳನ್ನು ಇನ್ನೂ ಹೊರತಂದಿಲ್ಲ. ವೊಡಾಫೋನ್ ಸಂಸ್ಥೆ ಮಾರ್ಚ್ ತಿಂಗಳಲ್ಲಿ 0.68 ದಶಲಕ್ಷ ಗ್ರಾಹಕರನ್ನು ಕಳೆದುಕೊಂಡಿದೆ. ಮತ್ತೊಂದೆಡೆ, ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಕ್ರಮವಾಗಿ 2.14 ಮಿಲಿಯನ್ ಮತ್ತು 1.76 ಮಿಲಿಯನ್ ಹೊಸ ಗ್ರಾಹಕರೊಂದಿಗೆ ಗ್ರಾಹಕರನ್ನು ಗಳಿಸಿವೆ.

BSNL ನ ಮಾರುಕಟ್ಟೆ ಪಾಲು ಮಾರ್ಚ್ 2024 ವೇಳೆಗೆ 7.57% ಕ್ಕೆ ಇಳಿದಿದೆ, ಆದರೆ ಅದರ ಪ್ರತಿಸ್ಪರ್ಧಿಗಳು, ಖಾಸಗಿ ಟೆಲಿಕಾಂ ಸೇವಾ ಪೂರೈಕೆದಾರರು ಮಾರುಕಟ್ಟೆ ಪಾಲನ್ನು ಹೆಚ್ಚಿಸಿಕೊಂಡಿದ್ದಾರೆ. TRAI ಪ್ರಕಾರ, ರಿಲಯನ್ಸ್ ಜಿಯೋ ದೇಶದಲ್ಲಿ 40.30% ನೊಂದಿಗೆ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ನಂತರದ ಸ್ಥಾನದಲ್ಲಿ ಭಾರ್ತಿ ಏರ್‌ಟೆಲ್ 33.10% ಮತ್ತು ವೊಡಾಫೋನ್ ಐಡಿಯಾ 18.86% ಟೆಲಿಕಾಂ ಮಾರುಕಟ್ಟೆ ಪಾಲನ್ನು ಹೊಂದಿದೆ.

ವರ್ಷದುದ್ದಕ್ಕೂ, ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆಗೆ ತನ್ನ ಚಂದಾದಾರರ ನಷ್ಟವನ್ನು ತಡೆಯಲು ಸಾಧ್ಯವಾಗಲಿಲ್ಲ. ಏಪ್ರಿಲ್ 2023 ರಲ್ಲಿ, BSNL ತನ್ನ ನೆಟ್‌ವರ್ಕ್ ನ್ನು ತೊರೆದ 2.99 ಮಿಲಿಯನ್ ಚಂದಾದಾರರೊಂದಿಗೆ, ಮೇ 2023 ರಲ್ಲಿ 2.81 ಮಿಲಿಯನ್ ನಷ್ಟು ಗ್ರಾಹಕರ ನಷ್ಟವನ್ನು ಅನುಭವಿಸಿದೆ ಎಂದು TRAI ಡೇಟಾ ಬಹಿರಂಗಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT