ಸಾಂದರ್ಭಿಕ ಚಿತ್ರ  
ವಾಣಿಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆ, ನೂತನ ದರ ಹೀಗಿದೆ...

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರ ಇಂದಿನಿಂದ 62 ರೂಪಾಯಿ ಹೆಚ್ಚಳವಾಗಿದ್ದು, 1,740 ರೂಪಾಯಿಗಳಿಂದ 1,802 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಏರಿಕೆಯನ್ನು ಘೋಷಿಸಿದ ನಂತರ ಮೆಟ್ರೋ ನಗರಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದು ತಿಂಗಳ ಆರಂಭ ದಿನ ಹೆಚ್ಚಾಗಿದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರ ಇಂದಿನಿಂದ 62 ರೂಪಾಯಿ ಹೆಚ್ಚಳವಾಗಿದ್ದು, 1,740 ರೂಪಾಯಿಗಳಿಂದ 1,802 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ಅಕ್ಟೋಬರ್ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್ ದರವನ್ನು 48.50 ರೂ ಹೆಚ್ಚಿಸಿದ್ದವು, ಸೆಪ್ಟೆಂಬರ್‌ನಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 39 ರೂಪಾಯಿ ಹೆಚ್ಚಿಸಲಾಗಿತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 8.50 ರೂಪಾಯಿಗಳ ಹೆಚ್ಚಳವನ್ನು ಘೋಷಿಸಿದ್ದವು.

ಕಳೆದ ಏಪ್ರಿಲ್ ನಿಂದ ಇದು 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಸತತ ನಾಲ್ಕನೇ ಬಾರಿ ಏರಿಕೆಯಾಗಿದೆ. ದೆಹಲಿ ಹೊರತಾಗಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯೂ ಹೆಚ್ಚಾಗಿದೆ. ಇತ್ತೀಚಿನ ಏರಿಕೆಯೊಂದಿಗೆ, ಚಿಲ್ಲರೆ ಬೆಲೆ ಈಗ ಮುಂಬೈನಲ್ಲಿ ರೂ 1,754.50, ಚೆನ್ನೈನಲ್ಲಿ ರೂ 1,964.50 ಮತ್ತು ಕೋಲ್ಕತ್ತಾದಲ್ಲಿ ರೂ 1,911.50 ಆಗಿದೆ.

ದೆಹಲಿಯ ಹೊರತಾಗಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯೂ ಹೆಚ್ಚಾಗಿದೆ. ಇತ್ತೀಚಿನ ಏರಿಕೆಯೊಂದಿಗೆ, ಚಿಲ್ಲರೆ ಬೆಲೆ ಈಗ ಮುಂಬೈನಲ್ಲಿ 1,754.50 ರೂಪಾಯಿ, ಚೆನ್ನೈನಲ್ಲಿ 1,964.50 ರೂಪಾಯಿ ಮತ್ತು ಕೋಲ್ಕತ್ತಾದಲ್ಲಿ 1,911.50 ರೂಪಾಯಿ ಆಗಿದೆ.

ನವೆಂಬರ್ 1ರಿಂದ ಬೆಂಗಳೂರಿನಲ್ಲಿ ಇರುವ ಎಲ್​ಪಿಜಿ ದರ

ಗೃಹಬಳಕೆ 14.2 ಕಿಲೋ ಗ್ಯಾಸ್ ಬೆಲೆ: 805.50 ರೂ

ಗೃಹ ಬಳಕೆ 5 ಕಿಲೋ ಗ್ಯಾಸ್ ಬೆಲೆ: 300.50 ರೂ

ವಾಣಿಜ್ಯ ಬಳಕೆ ಸಿಲಿಂಡರ್ 19 ಕಿಲೋ ಗ್ಯಾಸ್ ಬೆಲೆ: 1,879 ರೂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT