ಸಾಂದರ್ಭಿಕ ಚಿತ್ರ  
ವಾಣಿಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆ, ನೂತನ ದರ ಹೀಗಿದೆ...

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರ ಇಂದಿನಿಂದ 62 ರೂಪಾಯಿ ಹೆಚ್ಚಳವಾಗಿದ್ದು, 1,740 ರೂಪಾಯಿಗಳಿಂದ 1,802 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಏರಿಕೆಯನ್ನು ಘೋಷಿಸಿದ ನಂತರ ಮೆಟ್ರೋ ನಗರಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಂದು ತಿಂಗಳ ಆರಂಭ ದಿನ ಹೆಚ್ಚಾಗಿದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರ ಇಂದಿನಿಂದ 62 ರೂಪಾಯಿ ಹೆಚ್ಚಳವಾಗಿದ್ದು, 1,740 ರೂಪಾಯಿಗಳಿಂದ 1,802 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ಅಕ್ಟೋಬರ್ 1 ರಂದು, ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್ ದರವನ್ನು 48.50 ರೂ ಹೆಚ್ಚಿಸಿದ್ದವು, ಸೆಪ್ಟೆಂಬರ್‌ನಲ್ಲಿ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 39 ರೂಪಾಯಿ ಹೆಚ್ಚಿಸಲಾಗಿತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 8.50 ರೂಪಾಯಿಗಳ ಹೆಚ್ಚಳವನ್ನು ಘೋಷಿಸಿದ್ದವು.

ಕಳೆದ ಏಪ್ರಿಲ್ ನಿಂದ ಇದು 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಸತತ ನಾಲ್ಕನೇ ಬಾರಿ ಏರಿಕೆಯಾಗಿದೆ. ದೆಹಲಿ ಹೊರತಾಗಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯೂ ಹೆಚ್ಚಾಗಿದೆ. ಇತ್ತೀಚಿನ ಏರಿಕೆಯೊಂದಿಗೆ, ಚಿಲ್ಲರೆ ಬೆಲೆ ಈಗ ಮುಂಬೈನಲ್ಲಿ ರೂ 1,754.50, ಚೆನ್ನೈನಲ್ಲಿ ರೂ 1,964.50 ಮತ್ತು ಕೋಲ್ಕತ್ತಾದಲ್ಲಿ ರೂ 1,911.50 ಆಗಿದೆ.

ದೆಹಲಿಯ ಹೊರತಾಗಿ, ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯೂ ಹೆಚ್ಚಾಗಿದೆ. ಇತ್ತೀಚಿನ ಏರಿಕೆಯೊಂದಿಗೆ, ಚಿಲ್ಲರೆ ಬೆಲೆ ಈಗ ಮುಂಬೈನಲ್ಲಿ 1,754.50 ರೂಪಾಯಿ, ಚೆನ್ನೈನಲ್ಲಿ 1,964.50 ರೂಪಾಯಿ ಮತ್ತು ಕೋಲ್ಕತ್ತಾದಲ್ಲಿ 1,911.50 ರೂಪಾಯಿ ಆಗಿದೆ.

ನವೆಂಬರ್ 1ರಿಂದ ಬೆಂಗಳೂರಿನಲ್ಲಿ ಇರುವ ಎಲ್​ಪಿಜಿ ದರ

ಗೃಹಬಳಕೆ 14.2 ಕಿಲೋ ಗ್ಯಾಸ್ ಬೆಲೆ: 805.50 ರೂ

ಗೃಹ ಬಳಕೆ 5 ಕಿಲೋ ಗ್ಯಾಸ್ ಬೆಲೆ: 300.50 ರೂ

ವಾಣಿಜ್ಯ ಬಳಕೆ ಸಿಲಿಂಡರ್ 19 ಕಿಲೋ ಗ್ಯಾಸ್ ಬೆಲೆ: 1,879 ರೂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT