ಆರ್ ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ 
ವಾಣಿಜ್ಯ

ರಿಸರ್ವ್ ಬ್ಯಾಂಕ್ ಮುಖ್ಯಸ್ಥರಿಗೂ deepfake ಬಿಸಿ; RBI ಎಚ್ಚರಿಕೆ!

ಆರ್ ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಅವರ ಡೀಪ್ ಫೇಕ್ ವಿಡಿಯೋ ಮೂಲಕ ದುಷ್ಕರ್ಮಿಗಳು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ.

ನವದೆಹಲಿ: ಖ್ಯಾತ ನಟ-ನಟಿಯರನ್ನು ಇನ್ನಿಲ್ಲದಂತೆ ಕಾಡುತ್ತಿರುವ deepfake ಉಪಟಳ ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಗೂ ತಟ್ಟಿದೆ.

ಹೌದು.. ಆರ್ ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಅವರ ಡೀಪ್ ಫೇಕ್ ವಿಡಿಯೋ ಮೂಲಕ ದುಷ್ಕರ್ಮಿಗಳು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ಉನ್ನತ ನಿರ್ವಹಣೆಯ ಮುಖ್ಯಸ್ಥರ ಹೆಸರಲ್ಲಿ ಡೀಪ್‌ಫೇಕ್ ವೀಡಿಯೊಗಳು ಹರಿದಾಡುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಆರ್ಥಿಕ ಸಲಹೆಯನ್ನು ನೀಡುವುದರ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಮಂಗಳವಾರ ಆರ್ ಬಿಐ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, 'ಕೆಲವು ಹೂಡಿಕೆ ಯೋಜನೆಗಳ ಪ್ರಾರಂಭ ಅಥವಾ ಬೆಂಬಲವನ್ನು ಹೇಳಿಕೊಳ್ಳುವ ಸಾಮಾಜಿಕ ಮಾಧ್ಯಮಗಳಲ್ಲಿ ಗವರ್ನರ್ (ಶಕ್ತಿಕಾಂತ ದಾಸ್) ಅವರ ನಕಲಿ ವೀಡಿಯೊಗಳನ್ನು ಪ್ರಸಾರ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದೆ.

"ತಾಂತ್ರಿಕ ಸಾಧನಗಳ ಬಳಕೆಯ ಮೂಲಕ ಇಂತಹ ಯೋಜನೆಗಳಲ್ಲಿ ತಮ್ಮ ಹಣವನ್ನು ಹೂಡಿಕೆ ಮಾಡಲು ಈ ಡೀಪ್ ಫೇಕ್ ವಿಡಿಯೊಗಳು ಜನರಿಗೆ ಸಲಹೆ ನೀಡಲು ಪ್ರಯತ್ನಿಸುತ್ತಿವೆ. ಆದರೆ ತನ್ನ ಅಧಿಕಾರಿಗಳು ಅಂತಹ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಅಥವಾ ಬೆಂಬಲಿಸುವುದಿಲ್ಲ ಮತ್ತು ಈ ವಿಡಿಯೊಗಳು ನಕಲಿ ಎಂದು ಸ್ಪಷ್ಟನೆ ನೀಡಿದೆ.

ಗಮನಾರ್ಹವಾಗಿ, ಆರ್‌ಬಿಐ ಅಂತಹ ಯಾವುದೇ ಹಣಕಾಸು ಹೂಡಿಕೆ ಸಲಹೆಯನ್ನು ನೀಡುವುದಿಲ್ಲ. ಆದ್ದರಿಂದ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಇಂತಹ ಡೀಪ್‌ಫೇಕ್ ವೀಡಿಯೊಗಳೊಂದಿಗೆ ತೊಡಗಿಸಿಕೊಳ್ಳುವ ಮತ್ತು ಅದಕ್ಕೆ ಬಲಿಯಾಗದಂತೆ ಸಾರ್ವಜನಿಕರಿಗೆ ಆರ್‌ಬಿಐ ಎಚ್ಚರಿಕೆ ನೀಡಿದೆ.

ಈ ವರ್ಷದ ಆರಂಭದಲ್ಲಿ, ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (ಎನ್‌ಎಸ್‌ಇ) ಹೂಡಿಕೆದಾರರು ನಕಲಿ ಅಥವಾ ಕೃತಕ ಬುದ್ಧಿಮತ್ತೆಗೆ ಸಂಚಿಗೆ ಬೀಳದಂತೆ ಎಚ್ಚರಿಕೆ ನೀಡಿತ್ತು. ಎನ್ಎಸ್ ಇ ಎಂಡಿ ಮತ್ತು ಸಿಇಒ ಆಶಿಶ್‌ಕುಮಾರ್ ಚೌಹಾಣ್ ಸ್ಟಾಕ್‌ಗಳನ್ನು ಶಿಫಾರಸು ಮಾಡುವ ಡೀಪ್ ಫೇಕ್ ನಕಲಿ ವೀಡಿಯೊಗಳನ್ನು ರಚಿಸಲಾಗಿದೆ.

ದೊಡ್ಡ ಉದ್ಯಮಿಗಳ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಹಲವಾರು ನಿದರ್ಶನಗಳಿವೆ. ಸ್ಟಾಕ್‌ಗಳನ್ನು ಖರೀದಿಸಲು ಶಿಫಾರಸು ಮಾಡಿ ಮತ್ತು ವ್ಯಾಪಾರ ಸಲಹೆಯನ್ನು ನೀಡುತ್ತಿವೆ. ಅಂತಹ ಎಲ್ಲಾ ವೀಡಿಯೊಗಳು ನಕಲಿ ಮತ್ತು ಕೃತಕ ಬುದ್ಧಿಮತ್ತೆಯಿಂದ ರಚಿಸಲ್ಪಟ್ಟವು ಎಂದು ಎನ್ ಎಸ್ ಇ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT