ವಾಣಿಜ್ಯ

ವಾಣಿಜ್ಯ ಬಳಕೆ LPG cylinder ಬೆಲೆ ಹೆಚ್ಚಳ: ನೂತನ ದರ ಹೀಗಿದೆ...

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂಪಾಯಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1,740 ರೂಪಾಯಿ ಆಗಿದೆ.

ಮುಂಬೈ: ಇಂದು ಅಕ್ಟೋಬರ್ 1 ತಿಂಗಳ ಆರಂಭದಲ್ಲಿ ದಸರಾ ಹಬ್ಬಕ್ಕೆ ಮುನ್ನ ಹಣದುಬ್ಬರದಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು49 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂಪಾಯಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1,740 ರೂಪಾಯಿ ಆಗಿದೆ. ಕಂಪೆನಿಗಳು ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲಿನಂತೆ ದೆಹಲಿಯಲ್ಲಿ 803 ರೂಪಾಯಿಗೆ ಲಭ್ಯವಿರುತ್ತದೆ.

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು 48.50 ರೂಪಾಯಿ ಬೆಲೆ ಏರಿಕೆ ಕಂಡುಬಂದಿದ್ದು 1,818 ರೂಪಾಯಿಗೆ ತಲುಪಿದೆ. ಬೆಲೆ ಪರಿಷ್ಕರಣೆಗೂ ಮೊದಲು ಬೆಲೆಯು 19 KG ಪ್ರತಿ ಸಿಲಿಂಡರ್‌ಗೆ 1,769.50 ರೂಪಾಯಿಗಳಷ್ಟಿತ್ತು.

ಎಲ್‌ಪಿಜಿ ಸಿಲಿಂಡರ್‌ಗಳ ಹೊಸ ದರಗಳನ್ನು ಇಂದು ಅಕ್ಟೋಬರ್ 1 ರಂದು ಬಿಡುಗಡೆ ಮಾಡಲಾಗಿದೆ. ದಸರಾ ಮತ್ತು ದೀಪಾವಳಿಯಂತಹ ಹಬ್ಬಗಳಿಗೆ ಮುನ್ನವೇ ಹಣದುಬ್ಬರದಿಂದ ಗ್ರಾಹಕರು ತತ್ತರಿಸಿದ್ದಾರೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸುಮಾರು 50 ರೂಪಾಯಿ ಹೆಚ್ಚಿಸಲಾಗಿದ್ದು, ಇಂದಿನಿಂದ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದೆಹಲಿಯಲ್ಲಿ 1740 ರೂಪಾಯಿ ಆಗಿದೆ. ಈ ದರ ಇಂಡೇನ್ ಸಿಲಿಂಡರ್ ಆಗಿದೆ. ಇಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಇತ್ತೀಚಿನ ದರದ ಪ್ರಕಾರ, ಅಕ್ಟೋಬರ್ 1, 2024ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮುಂಬೈನಲ್ಲಿ 1692.50 ರೂಪಾಯಿ, ಕೋಲ್ಕತ್ತಾದಲ್ಲಿ 1850.50 ರೂಪಾಯಿ ಮತ್ತು ಚೆನ್ನೈನಲ್ಲಿ 1903 ರೂಪಾಯಿ ಆಗಿದೆ. ಈ ಹಿಂದೆ ಸೆಪ್ಟೆಂಬರ್‌ನಲ್ಲಿ ಸಹ ಎಲ್‌ಪಿಜಿ ಸಿಲಿಂಡರ್ ದರ ಸುಮಾರು 39 ರೂಪಾಯಿ ಏರಿಕೆಯಾಗಿ 1691.50 ರೂಪಾಯಿಗೆ ತಲುಪಿತ್ತು.

ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿನ ಹೆಚ್ಚಳದಿಂದಾಗಿ, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಧಾಬಾಗಳ ಆಹಾರ ದರಗಳ ಮೇಲೆ ಪರಿಣಾಮ ಬೀರಬಹುದು. ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳನ್ನು ಈ ಸ್ಥಳಗಳಲ್ಲಿ ಪ್ರತ್ಯೇಕವಾಗಿ ಬಳಸಲಾಗುತ್ತದೆ. ಕಳೆದ ಸೆಪ್ಟೆಂಬರ್‌ ಮತ್ತು ಆಗಸ್ಟ್‌ನಲ್ಲಿಯೂ ಬೆಲೆ ಏರಿಕೆಯಾಗಿತ್ತು. ಸೆಪ್ಟೆಂಬರ್ ನಲ್ಲಿ 39 ರೂಪಾಯಿ, ಆಗಸ್ಟ್ ನಲ್ಲಿ 8-9 ರೂಪಾಯಿ ಏರಿಕೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT