ಸಂಗ್ರಹ ಚಿತ್ರ 
ವಾಣಿಜ್ಯ

ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾ ಸಂಸ್ಥೆ ಜೊತೆಗೆ ಕ್ರೆಡಲ್ ಒಪ್ಪಂದ

ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಬೆಂಗಳೂರು: ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ರಾಜ್ಯ ಇಂಧನ ಇಲಾಖೆಯ ಪ್ರತಿನಿಧಿಯಾಗಿ ಕ್ರೆಡಲ್‍ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಹಾಗೂ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಪರವಾಗಿ ಅದರ ಮುಖ್ಯ ಕಾರ್ಯನಿರ್ವಾಹಕ ಜಾನ್ ಗ್ರಿಮ್ಸ್ ಮತ್ತು ಒಪ್ಪಂದಕ್ಕೆ ಸಹಿ ಹಾಕಿದರು.

ಶುದ್ಧ ಇಂಧನ ಮತ್ತು ಹಸಿರು ಹೈಡ್ರೋಜನ್ ಉಪಕ್ರಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಮತ್ತು ಆಸ್ಟ್ರೇಲಿಯಾ ಒಟ್ಟಾಗಿ ಕೆಲಸ ಮಾಡಲು ಬದ್ಧವಾಗಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಮೂಲಕ ಆಸ್ಟ್ರೇಲಿಯಾದ ಕಂಪನಿಗಳ ಜತೆಗಿನ ಕರ್ನಾಟಕದ ಸಂಪರ್ಕ ಸಲಭವಾಗುವ ಜತೆಗೆ ಹೂಡಿಕೆ ಅವಕಾಶಗಳು ಹೆಚ್ಚಲಿವೆ. ನವೀಕರಿಸಬಹುದಾದ ಇಂಧನ ಉತ್ಪಾದನೆ ಮತ್ತು ಉತ್ತೇಜನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ರಾಜ್ಯದ ಕೈಗಾರಿಕಾ ನೀತಿಗೆ ಅನುಗುಣವಾಗಿ ಯೋಜನೆಗಳಿಗೆ ಪ್ರೊತ್ಸಾಹಕಗಳನ್ನು ಒದಗಿಸಿದ್ದೇವೆ. ಈ ಕ್ರಮಗಳಿಂದಾಗಿ ಕರ್ನಾಟಕವು ಹೂಡಿಕೆಗೆ ಆದ್ಯತೆಯ ತಾಣವಾಗಿದೆ ಎಂದು ಇಂಧನೆ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದ್ದಾರೆ.

ಈ ಒಪ್ಪಂದವು ತಂತ್ರಜ್ಞಾನ ವರ್ಗಾವಣೆ ಮತ್ತು ಸಹಯೋಗವನ್ನು ಸುಗಮಗೊಳಿಸುವುದಲ್ಲದೆ, ಈ ವಲಯಗಳಲ್ಲಿ ಪರಸ್ಪರ ಹಿತಾಸಕ್ತಿಗಳನ್ನು ಬೆಂಬಲಿಸುವ ದ್ವಿಪಕ್ಷೀಯ ಹೂಡಿಕೆ ಅವಕಾಶಗಳನ್ನು ಅನ್ವೇಷಿಸುತ್ತದೆ ಮತ್ತು ಶುದ್ಧ ಇಂಧನ, ನವೀಕರಿಸಬಹುದಾದ ಮತ್ತು ಗ್ರೀನ್ ಹೈಡ್ರೋಜನ್‌ನಲ್ಲಿ ವಾಣಿಜ್ಯೀಕರಣದ ನಿರೀಕ್ಷೆಗಳನ್ನು ಗುರುತಿಸುತ್ತದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ತಿಳಿಸಿದರು.

ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್ ಸ್ಟೋರೇಜ್ ವ್ಯವಸ್ಥೆಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರ ಹೆಚ್ಚಿಸುವ ಗುರಿ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel