ಆರೋಗ್ಯ ವಿಮೆ ಮತ್ತು ಜಿಎಸ್ ಟಿ 
ವಾಣಿಜ್ಯ

ಆರೋಗ್ಯ ವಿಮೆ ಮೇಲಿನ GST ರದ್ಧತಿಗೆ ಕೇಂದ್ರ ಸರ್ಕಾರ ಚಿಂತನೆ; ಇನ್ಶೂರೆನ್ಸ್ ಪ್ರೀಮಿಯಂ ಶೀಘ್ರದಲ್ಲೇ ಕಡಿತ ಸಾಧ್ಯತೆ

ವಿಮೆ ಮೇಲಿನ ಜಿಎಸ್ ಟಿ ತೆಗೆದುಹಾಕಲು ಸಾರ್ವಜನಿಕರಿಂದ ವ್ಯಾಪಕ ಒತ್ತಡಗಳು ಬಂದ ಹಿನ್ನೆಲೆಯಲ್ಲಿ ಜಿಎಸ್‌ಟಿ ತೆಗೆದು ಹಾಕಲು ಮುಂದಾಗಿದೆ ಎನ್ನಲಾಗಿದೆ.

ನವದೆಹಲಿ: ಆರೋಗ್ಯ ವಿಮೆ ಮೇಲಿನ GST ರದ್ಧತಿಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ವಿಮಾ ಪ್ರೀಮಿಯಂ ಕಡಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಂಬರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಆರೋಗ್ಯ ವಿಮೆ (Health Insurance) ಮತ್ತು ಟರ್ಮ್ ವಿಮೆ (Term Insurance) ಪಾಲಿಸಿಗಳ ಮೇಲೆ ಜಿಎಸ್ ಟಿ ತೆಗೆದುಹಾಕಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ವಿಮೆ ಮೇಲಿನ ಜಿಎಸ್ ಟಿ ತೆಗೆದುಹಾಕಲು ಸಾರ್ವಜನಿಕರಿಂದ ವ್ಯಾಪಕ ಒತ್ತಡಗಳು ಬಂದ ಹಿನ್ನೆಲೆಯಲ್ಲಿ ಜಿಎಸ್‌ಟಿ ತೆಗೆದು ಹಾಕಲು ಮುಂದಾಗಿದೆ ಎನ್ನಲಾಗಿದೆ.

ಜಿಎಸ್‌ಟಿ ಕೌನ್ಸಿಲ್‌ನ ಸಚಿವ ಉಪಸಮಿತಿ ಇತ್ತೀಚೆಗೆ ಈ ನಿಟ್ಟಿನಲ್ಲಿ ಸಭೆ ನಡೆಸಿತ್ತು. ಇದರಲ್ಲಿ ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ ಮತ್ತು ಪಾಲಿಸಿದಾರರಿಗೆ ಪರಿಹಾರ ನೀಡಲು ವಿಮೆ ಮೇಲಿನ ಜಿಎಸ್‌ಟಿ ರದ್ದತಿಯನ್ನು ಬಹುತೇಕ ಸದಸ್ಯರು ಬೆಂಬಲಿಸಿದರು ಎಂದು ಹೇಳಲಾಗಿದೆ.

ಷರತ್ತು ಅನ್ವಯ!

ಇನ್ನು ಸಾಮಾನ್ಯ ಜನರು ತೆಗೆದುಕೊಳ್ಳುವ ರೂ.5 ಲಕ್ಷದೊಳಗಿನ ಆರೋಗ್ಯ ವಿಮಾ ಪಾಲಿಸಿಗಳ ಮೇಲೆ ಈ ವಿನಾಯಿತಿ ಲಭ್ಯವಿರುತ್ತದೆ. 5 ಲಕ್ಷಕ್ಕಿಂತ ಹೆಚ್ಚಿನ ಪಾಲಿಸಿಗಳಿಗೆ ಶೇ.18ರಷ್ಟು ಜಿಎಸ್‌ಟಿ ಮುಂದುವರಿಯುತ್ತದೆ.

ಇವುಗಳ ಜೊತೆಗೆ ಸೈಕಲ್ ಮತ್ತು ನೋಟ್ ಬುಕ್‌ಗಳ ಮೇಲೆ ಈಗಿರುವ ಜಿಎಸ್‌ಟಿಯನ್ನು ಶೇ12ರಿಂದ ಶೇ.5ಕ್ಕೆ ಇಳಿಸುವ ಪ್ರಸ್ತಾವನೆ ಇದ್ದು, 10 ಸಾವಿರ ರೂ 20 ಲೀಟರ್‍ಗಿಂತ ಹೆಚ್ಚಿನ ಪ್ಯಾಕೇಜ್ಡ್ ಕುಡಿಯುವ ನೀರಿನ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18 ರಿಂದ ಶೇ.5 ಕ್ಕೆ ಇಳಿಸಲು ಉದ್ದೇಶಿಸಲಾಗಿದೆ. ಇದರಿಂದ ಆಗುವ ಆದಾಯ ನಷ್ಟವನ್ನು ಸರಿದೂಗಿಸಲು ಕೆಲವು ಐಷಾರಾಮಿ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇ.18ರಿಂದ ಶೇ.28ಕ್ಕೆ ಹೆಚ್ಚಿಸಲು ಜಿಎಸ್‌ಟಿ ಕೌನ್ಸಿಲ್ ಮುಂದಾಗಿದೆ ಎಂದು ಹೇಳಲಾಗಿದೆ.

ಮುಂದಿನ ತಿಂಗಳು ನಡೆಯಲಿರುವ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT