ಬೆಂಗಳೂರಿನಲ್ಲಿ ಬುಧವಾರ ರಾಷ್ಟ್ರೀಯ ಪಿಂಚಣಿ ಯೋಜನೆ ಕಾರ್ಡ್‌ಗಳನ್ನು ಹಿಡಿದುಕೊಂಡು ಮಕ್ಕಳು ಕಾಣಿಸಿಕೊಂಡಿದ್ದಾರೆ.ಪೋಸ್ ನೀಡಿದರು. 
ವಾಣಿಜ್ಯ

ಮಕ್ಕಳ ಉಜ್ವಲ ಭವಿಷ್ಯಕ್ಕೆ ಬುನಾದಿ; NPS ವಾತ್ಸಲ್ಯ ಯೋಜನೆ ಇಂದಿನಿಂದ ಆರಂಭ

ಇತ್ತೀಚಿನ ಬಜೆಟ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು NPS ವಾತ್ಸಲ್ಯ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ಅದು ಇವತ್ತಿನಿಂದ ಜಾರಿಗೆ ಬರುತ್ತಿದೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ NPS ವಾತ್ಸಲ್ಯ ಯೋಜನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಚಾಲನೆ ನೀಡಿದರು.18 ವರ್ಷದೊಳಗಿನ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಪೋಷಕರು ಈ ಯೋಜನೆಯಡಿ ಅಕೌಂಟ್ ತೆರೆಯಬಹುದು. ವರ್ಷಕ್ಕೆ ಕನಿಷ್ಠ 1,000 ರೂ. ಹೂಡಿಕೆ ಅಗತ್ಯವಾಗಿದೆ.

ಇತ್ತೀಚಿನ ಬಜೆಟ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು NPS ವಾತ್ಸಲ್ಯ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದರು. ಅದು ಇವತ್ತಿನಿಂದ ಜಾರಿಗೆ ಬರುತ್ತಿದೆ. ಮಕ್ಕಳ ಹೆಸರಿನಲ್ಲಿ ತೆರೆಯಬಹುದಾದ ಈ ಯೋಜನೆಯಿಂದ ನಾನಾ ರೀತಿಯ ಪ್ರಯೋಜನಗಳನ್ನು ಪಡೆಯಲು ಅವಕಾಶ ಇದೆ.

NPS ವಾತ್ಸಲ್ಯ ಸರ್ಕಾರಿ ಸ್ವಾಮ್ಯದ ಪೆನ್ಷನ್ ಫಂಡ್ ರೆಗ್ಯುಲೇಟರಿ ಅಂಡ್ ಡೆವಲಪ್ಮೆಂಟ್ ಅಥಾರಿಟಿ (PERDA) ಸಂಸ್ಥೆಯಿಂದ ನಿರ್ವಹಿಸಲಾಗುವ ಯೋಜನೆ. ಭಾರತದ ಯಾವುದೇ ನಾಗರಿಕರು ತಮ್ಮ ಮಕ್ಕಳ ಹೆಸರಿನಲ್ಲಿ ಸ್ಕೀಮ್ ಅಕೌಂಟ್ ತೆರೆಯಬಹುದು. ಆ ಮಗು 18 ವರ್ಷ ವಯಸ್ಸಾಗುವವರೆಗೂ ಯೋಜನೆ ಚಾಲನೆಯಲ್ಲಿರುತ್ತದೆ. ವಯಸ್ಕ ಮಟಕ್ಕೆ ಬಂದ ಬಳಿಕ ಅಕೌಂಟ್ ಅನ್ನು ಮುಂದುವರಿಸಬಹುದು ಅಥವಾ ಅಂತ್ಯಗೊಳಿಸಬಹುದು.

NPS ವಾತ್ಸಲ್ಯ ಯೋಜನೆಯ ಪ್ರಮುಖ ಪ್ರಯೋಜನಗಳು

  • ದೀರ್ಘಾವಧಿ ಹೂಡಿಕೆ

  • ಮಗುವಿನ ಭವಿಷ್ಯಕ್ಕೆ ಒಂದು ಹಣಕಾಸು ಭದ್ರತೆ

  • ಪ್ರೌಢಾವಸ್ಥೆಗೆ ಬರುವಾಗಲೇ ಮಕ್ಕಳಲ್ಲಿ ಉಳಿತಾಯ ಮತ್ತು ಹೂಡಿಕೆ ಪ್ರವೃತ್ತಿ ಬೆಳೆಸಲು ಅನುಕೂಲ.

  • ಉನ್ನತ ಶಿಕ್ಷಣಕ್ಕೆ ಹಣ ಕೂಡಿಡಲು ಉತ್ತಮ ಮಾರ್ಗ

  • ರಿಸ್ಕ್​ಗೆ ತಕ್ಕಂತೆ ಫಂಡ್​ಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ

NPS ವಾತ್ಸಲ್ಯ ಯೋಜನೆಯಲ್ಲಿ ವರ್ಷಕ್ಕೆ ಕನಿಷ್ಠ 1,000 ಸಾವಿರ ರೂ. ಹೂಡಿಕೆ ಅಗತ್ಯವಾಗಿದೆ. ಅದಕ್ಕಿಂತ ಹೆಚ್ಚಿಗೆ ಎಷ್ಟು ಬೇಕಾದರೂ ಹೂಡಿಕೆ ಮಾಡಲು ಅವಕಾಶ ಇದೆ. ಮಗುವಿನ ಹೆಸರಿನಲ್ಲಿ ಪೋಷಕರು ಹೂಡಿಕೆ ಮಾಡುತ್ತಾರೆ. ಮಗು 18 ವರ್ಷ ವಯಸ್ಸು ಆದ ಬಳಿಕ ಯೋಜನೆಯನ್ನು ಮುಂದುವರಿಸಿಕೊಂಡು ಹೋಗಬಹುದು. ಆದರೆ, ಹೊಸದಾಗಿ ಕೆವೈಸಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.

ಎನ್​ಪಿಎಸ್ ವಾತ್ಸಲ್ಯ ಯೋಜನೆ ಅಡಿಯಲ್ಲಿ ಆನ್ ಲೈನ್, ಕೇಂದ್ರೀಯ ಬ್ಯಾಂಕ್ ಗಳು ಅಥವಾ ಅಂಚೆ ಕಚೇರಿಗಳಲ್ಲಿ ಖಾತೆ ತೆರೆದು ಮೂರು ವರ್ಷಗಳ ಬಳಿಕ ಭಾಗಶಃ ಹಣವನ್ನು ಹಿಂಪಡೆಯುವ ಅವಕಾಶ ಇರುತ್ತದೆ. ಮಗುವಿನ ವಯಸ್ಸು 18 ವರ್ಷ ಆಗುವವರೆಗೂ ಈ ರೀತಿ ಮೂರು ಬಾರಿ ಸ್ವಲ್ಪ ಹಣವನ್ನು ಹಿಂಪಡೆಯಬಹುದು.

ಹದಿನೆಂಟು ವರ್ಷ ವಯಸ್ಸಿನ ಬಳಿಕ ಯೋಜನೆಯಿಂದ ಬೇಕಾದರೆ ಹೊರಬರಬಹುದು. ನಿಮ್ಮ ಹೂಡಿಕೆ ಆ ಸಂದರ್ಭದಲ್ಲಿ 2-50 ಲಕ್ಷ ರೂ. ಗಿಂತ ಕಡಿಮೆ ಇದ್ದರೆ ಇಡೀ ಹಣವನ್ನು ಹಿಂಪಡೆಯಬಹುದು. 2.5 ಲಕ್ಷ ರೂ.ಗಿಂತ ಹೆಚ್ಚಿಗೆ ಇದ್ದರೆ ಶೇ. 20ರಷ್ಟು ಹಣವನ್ನು ಲಂಪ್ಸಮ್ ಆಗಿ ಪಡೆಯಬಹುದು. ಇನ್ನುಳಿದ ಶೇ. 80ರಷ್ಟು ಹಣವನ್ನು ಆ್ಯನುಟಿ ಖರೀದಿಗೆ ಬಳಸಬೇಕು. ಈ ಆ್ಯನುಟಿಯಿಂದ ನಿಯಮಿತವಾಗಿ ಆದಾಯ ಬರುತ್ತಿರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT