ಡೊನಾಲ್ಡ್ ಟ್ರಂಪ್- ಷೇರುಮಾರುಕಟ್ಟೆ online desk
ವಾಣಿಜ್ಯ

Trump ಹುಚ್ಚಾಟಕ್ಕೆ 10 ಸೆಕೆಂಡ್ ಗಳಲ್ಲಿ 20 ಲಕ್ಷ ಕೋಟಿ ರೂ ಉಡೀಸ್! ಭಾರತೀಯ ಮಾರುಕಟ್ಟೆಯಲ್ಲಿ ಕಂಡರಿಯದ ನಷ್ಟ!

ಟ್ರಂಪ್ ಸುಂಕ ಸಮರದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಗಳಲ್ಲಿ ರಕ್ತಪಾತ ಉಂಟಾಗಿದ್ದು, ಭಾರತೀಯ ಈಕ್ವಿಟಿ ಮಾರುಕಟ್ಟೆ 10 ತಿಂಗಳಲ್ಲೇ ಅತ್ಯಧಿಕ ಕುಸಿತ ಕಾಣುವಂತೆ ಮಾಡಿದೆ.

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಟ್ಯಾರಿಫ್ ಹುಚ್ಚಾಟಕ್ಕೆ ಜಾಗತಿಕ ಷೇರು ಮಾರುಕಟ್ಟೆ ತಲ್ಲಣಿಸಿದ್ದು, ಇದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲೂ ಕಂಡುಬಂದಿದೆ.

ಏಷ್ಯಾದ ಷೇರುಪೇಟೆಗಳು ಮತ್ತು ಅಮೆರಿಕದ ಷೇರುಪೇಟೆಗಳಲ್ಲಿ ಮಾರಾಟ ಕುಸಿತವು ಗಮನಾರ್ಹ ನಷ್ಟವನ್ನು ಸೂಚಿಸಿದ್ದು, ಸೆನ್ಸೆಕ್ಸ್ 4,000 ಅಂಕ ಕುಸಿತ ದಾಖಲಿಸಿದೆ.

ಟ್ರಂಪ್ ಸುಂಕ ಸಮರದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಗಳಲ್ಲಿ ರಕ್ತಪಾತ ಉಂಟಾಗಿದ್ದು, ಭಾರತೀಯ ಈಕ್ವಿಟಿ ಮಾರುಕಟ್ಟೆ 10 ತಿಂಗಳಲ್ಲೇ ಅತ್ಯಧಿಕ ಕುಸಿತ ಕಾಣುವಂತೆ ಮಾಡಿದೆ. ಇದರ ಜೊತೆಗೆ ಹೂಡಿಕೆದಾರರ 20 ಲಕ್ಷ ಕೋಟಿ ರೂಪಾಯಿಗಳು ಹತ್ತೇ ಸೆಕೆಂಡ್ ಗಳಲ್ಲಿ ನಿರ್ನಾಮವಾಗಿದೆ.

ಸೆನ್ಸೆಕ್ಸ್ ಸುಮಾರು 4,000 ಪಾಯಿಂಟ್‌ಗಳ ಕುಸಿತವನ್ನು ಕಂಡಿದ್ದು, ಕಳೆದ ವಹಿವಾಟಿನ ಅವಧಿಯಿಂದ 3.5% ಕ್ಕಿಂತ ಹೆಚ್ಚು ಕುಸಿತ ಕಂಡಿದೆ, ಆದರೆ ನಿಫ್ಟಿ ಇಂದು ಬೆಳಿಗ್ಗೆ 1,000 ಪಾಯಿಂಟ್‌ಗಳಿಗೂ ಹೆಚ್ಚು ಕುಸಿತ ಕಂಡಿದೆ.

ಅಮೆರಿಕದ ಕೈಗಾರಿಕೆಗಳಿಗೆ "ಸುವರ್ಣ ಯುಗ"ದ ಮುನ್ಸೂಚನೆಯಾಗಿ ಹೇಳಲಾಗುವ ಈ ಟ್ರಂಪ್ ಟ್ಯಾರಿಫ್, ಅಮೇರಿಕಾಗೆ ಅನ್ಯಾಯವಾಗಿದೆ ಎಂದು ಅಧ್ಯಕ್ಷ ಟ್ರಂಪ್ ನಂಬುವ ವ್ಯಾಪಾರ ಪದ್ಧತಿಗಳನ್ನು ರದ್ದುಗೊಳಿಸಲು ಪ್ರಯತ್ನಿಸುತ್ತವೆ. ಸುಂಕಗಳು ದೇಶ-ನಿರ್ದಿಷ್ಟವಾಗಿದ್ದು 50% ವರೆಗೆ ನಿಗದಿಯಾಗುತ್ತಿವೆ. ಭಾರತಕ್ಕೆ 26% ರಷ್ಟು ಸುಂಕ ಘೋಷಿಸಲಾಗಿತ್ತು. ಇದು ರಫ್ತುದಾರರು ಮತ್ತು ವ್ಯಾಪಾರಿಗಳಲ್ಲಿ ಭಯವನ್ನು ಹೆಚ್ಚಿಸಿದೆ.

ವಾರಾಂತ್ಯದ ರಜಾದಿನಗಳ ನಂತರ ಸೋಮವಾರ ಬೆಳಿಗ್ಗೆ 9 ಗಂಟೆಗೆ ವಹಿವಾಟು ಪುನರಾರಂಭವಾದಾಗ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 3, 939.68 ಅಂಕ ಕುಸಿತ ಕಂಡು 71,425.01ಕ್ಕೆ ತಲುಪಿತ್ತು. ಈ ಅವಧಿಯಲ್ಲಿ ನಿಫ್ಟಿ 50ಯು 1,160.8 ಅಂಕಗಳ ಕುಸಿತದೊಂದಿಗೆ 21,743.65ಕ್ಕೆ ತಲುಪಿದೆ.

ಈ ನಡುವೆ ಇಂದು ಬೆಳಿಗ್ಗೆ ರೂಪಾಯಿ ಮೌಲ್ಯವು ಕುಸಿತ ಕಂಡಿದ್ದು, ಡಾಲರ್ ಎದುರು 30 ಪೈಸೆ ಕುಸಿತ ಕಂಡು ಪ್ರತಿ ಡಾಲರ್ ಗೆ ರೂಪಾಯಿ ಮೌಲ್ಯ 85.74ಕ್ಕೆ ತಲುಪಿದೆ.

ಟ್ರಂಪ್ ಅವರ ಸುಂಕಗಳು ಭಾರತೀಯ ಮಾರುಕಟ್ಟೆಗಳಲ್ಲಿ ಭಯವನ್ನು ಉಂಟುಮಾಡುವುದು ಖಚಿತ ಮತ್ತು ಜಾಗತಿಕ ವ್ಯಾಪಾರ ಯುದ್ಧದಿಂದ ತನ್ನ ದೇಶೀಯ ಆರ್ಥಿಕತೆಯನ್ನು ರಕ್ಷಿಸಲು ದೇಶಕ್ಕೆ ಈಗ ಆರ್ಥಿಕ ಸುಧಾರಣೆಗಳು ಬೇಕಾಗುತ್ತವೆ ಎಂದು ವಿಶ್ಲೇಷಕರು ಸೂಚಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT