ಇಂಡಿಗೋ ವಿಮಾನ ಸೇವೆಗಳಲ್ಲಿ ತೀವ್ರ ವ್ಯತ್ಯಯ(ಸಂಗ್ರಹ ಚಿತ್ರ) 
ವಾಣಿಜ್ಯ

ಇಂಡಿಗೋ ಅವ್ಯವಸ್ಥೆ: ಮೂರು ಹೊಸ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಅನುಮತಿ

ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್‌ಪ್ರೆಸ್ ಈ ವಾರ ಕೇಂದ್ರದಿಂದ ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು(ಎನ್‌ಒಸಿ) ಪಡೆದಿವೆ. ಮತ್ತೊಂದು ವಿಮಾನಯಾನ ಸಂಸ್ಥೆ ಶಂಖ್ ಏರ್ ಈ ಹಿಂದೆ ತನ್ನ ಅನುಮತಿಯನ್ನು ಪಡೆದುಕೊಂಡಿತ್ತು.

ನವದೆಹಲಿ: ಇತ್ತೀಚಿಗೆ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ವಿಮಾನ ಕಾರ್ಯಾಚರಣೆಯಲ್ಲಿ ಭಾರಿ ಅವ್ಯವಸ್ಥೆ ಉಂಟಾದ ನಂತರ ವಿಮಾನಯಾನ ಮಾರುಕಟ್ಟೆಯಲ್ಲಿ ಏಕಸ್ವಾಮ್ಯತೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಬುಧವಾರ ಮೂರು ಹೊಸ ವಿಮಾನಯಾನ ಸಂಸ್ಥೆಗಳಿಗೆ ಅನುಮತಿ ನೀಡಿದ್ದು, ಅವು ಶೀಘ್ರದಲ್ಲೇ ಭಾರತೀಯ ವಿಮಾನಯಾನ ಸೇವೆ ಆರಂಭಿಸಲಿವೆ.

ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್‌ಪ್ರೆಸ್ ಈ ವಾರ ಕೇಂದ್ರದಿಂದ ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು(ಎನ್‌ಒಸಿ) ಪಡೆದಿವೆ. ಮತ್ತೊಂದು ವಿಮಾನಯಾನ ಸಂಸ್ಥೆ ಶಂಖ್ ಏರ್ ಈ ಹಿಂದೆ ತನ್ನ ಅನುಮತಿಯನ್ನು ಪಡೆದುಕೊಂಡಿತ್ತು.

ಡಿಸೆಂಬರ್ ಮೊದಲ ವಾರದಲ್ಲಿ ಇಂಡಿಗೋ ವಿಮಾನ ಕಾರ್ಯಾಚರಣೆಯ ಅಡಚಣೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ದೇಶೀಯ ವಿಮಾನಯಾನ ವಲಯದಲ್ಲಿ ಏಕಸ್ವಾಮ್ಯತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು.

ಭಾರತದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಬಯಸುವ ಸಂಭಾವ್ಯ ವಿಮಾನಯಾನ ಸಂಸ್ಥೆಗಳಾದ ಶಂಖ್ ಏರ್, ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್‌ಪ್ರೆಸ್‌ ತಂಡಗಳೊಂದಿಗೆ ಕಳೆದ ವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ನಡೆಸಿದ ಸಭೆಯ ನಂತರ ಈ ಅನುಮತಿ ನೀಡಲಾಗಿದೆ.

"ಶಂಖ್ ಏರ್ ಈಗಾಗಲೇ ಸಚಿವಾಲಯದಿಂದ NOC ಪಡೆದಿದ್ದರೆ, ಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್‌ಪ್ರೆಸ್ ಈ ವಾರ ತಮ್ಮ NOC ಗಳನ್ನು ಪಡೆದಿವೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನೀತಿಗಳಿಂದಾಗಿ ವಿಶ್ವದ ವೇಗವಾಗಿ ಬೆಳೆಯುತ್ತಿರುವ ವಾಯುಯಾನ ಮಾರುಕಟ್ಟೆಗಳಲ್ಲಿ ಒಂದಾಗಿರುವ ಭಾರತೀಯ ವಿಮಾನಯಾನದಲ್ಲಿ ಹೆಚ್ಚಿನ ವಿಮಾನಯಾನ ಸಂಸ್ಥೆಗಳನ್ನು ಪ್ರೋತ್ಸಾಹಿಸುವುದು ಸಚಿವಾಲಯದ ಪ್ರಯತ್ನವಾಗಿದೆ. ಉಡಾನ್‌ನಂತಹ ಯೋಜನೆಗಳು ದೇಶದೊಳಗಿನ ಪ್ರಾದೇಶಿಕ ಸಂಪರ್ಕದಲ್ಲಿ ಪ್ರಮುಖ ಪಾತ್ರ ವಹಿಸಲು ಸಣ್ಣ ವಿಮಾನಯಾನ ಸಂಸ್ಥೆಗಳಾದ ಸ್ಟಾರ್ ಏರ್, ಇಂಡಿಯಾ ಒನ್ ಏರ್, ಫ್ಲೈ91 ಇತ್ಯಾದಿಗಳನ್ನು ಸಕ್ರಿಯಗೊಳಿಸಿವೆ ಮತ್ತು ಮುಂದಿನ ಬೆಳವಣಿಗೆಗೆ ಹೆಚ್ಚಿನ ಅವಕಾಶವಿದೆ" ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್