ಇನ್ಫೋಸಿಸ್ 
ವಾಣಿಜ್ಯ

Infosys ಉದ್ಯೋಗಿಗಳ ಸಾಮೂಹಿಕ ವಜಾ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು "ತುರ್ತು ಮತ್ತು ಅಗತ್ಯ ಕ್ರಮಗಳನ್ನು" ತೆಗೆದುಕೊಳ್ಳುವಂತೆ ಸೂಚಿಸಿದೆ.

ನವದೆಹಲಿ: ಐಟಿ ಉದ್ಯೋಗಿಗಳ ಕಲ್ಯಾಣ ಸಂಘ ಕಳವಳ ವ್ಯಕ್ತಪಡಿಸಿರುವುದನ್ನು ಅನುಸರಿಸಿ, ಇನ್ಫೋಸಿಸ್ ಮೈಸೂರಿನ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಸಾಮೂಹಿಕ ವಜಾಗೊಳಿಸುವಿಕೆ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು "ತುರ್ತು ಮತ್ತು ಅಗತ್ಯ ಕ್ರಮಗಳನ್ನು" ತೆಗೆದುಕೊಳ್ಳುವಂತೆ ಸೂಚಿಸಿದೆ. ಐಟಿ ನೌಕರರ ಕಲ್ಯಾಣ ಸಂಘವಾದ ಎನ್‌ಐಟಿಇಎಸ್‌ ದೂರಿನ ಮೇರೆಗೆ ಈ ಸೂಚನೆಯನ್ನು ನೀಡಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಾಮೂಹಿಕ ವಜಾ ವಿಚಾರದಲ್ಲಿ ಕರ್ನಾಟಕ ಮಧ್ಯಪ್ರವೇಶಿಸಿ ವಿವಾದವನ್ನು ಪರಿಹರಿಸಬೇಕು ನಿರ್ದೇಶನ ನೀಡಿದೆ. ಅಲ್ಲದೆ ದೂರುದಾರರಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ.

ಕಳೆದ ಶುಕ್ರವಾರ ತರಬೇತಿ ಪಡೆದ ಸುಮಾರು 400 ನೌಕರರನ್ನು ಇನ್ಫೋಸಿಸ್ ವಜಾಗೊಳಿಸಿದೆ. ಈ ವಜಾಗೊಳಿಸುವಿಕೆಯನ್ನು 'ಅಕ್ರಮ, ಅನೈತಿಕ' ಎಂದು ಜರೆದಿರುವ ಎನ್‌ಐಟಿಇಎಸ್‌, ಇದು 'ಕಾರ್ಮಿಕ ಕಾನೂನುಗಳ ಉಲ್ಲಂಘನೆ' ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT