ತುಹಿನ್‌ ಕಾಂತ ಪಾಂಡೆ  
ವಾಣಿಜ್ಯ

SEBI ನೂತನ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ನೇಮಕ

ಸೆಬಿ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2 ರಂದು ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.

ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಸಂಪುಟದ ನೇಮಕಾತಿ ಸಮಿತಿಯ ಅನುಮೋದನೆಯ ನಂತರ, ಹಣಕಾಸು ಕಾರ್ಯದರ್ಶಿ ಪಾಂಡೆ ಅವರು ಮೂರು ವರ್ಷಗಳ ಅವಧಿಗೆ ಸೆಬಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಸೆಬಿ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2 ರಂದು ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪಾಂಡೆ ಅವರು ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಹಿರಿಯ ಅಧಿಕಾರಿಗಳಲ್ಲಿ ಮೊದಲ ಸಾಲಿನನವರಾಗಿದ್ದು, ತೆರಿಗೆ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದಕ್ಕೂ ಮೊದಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಇವರು ಏರ್‌ ಇಂಡಿಯಾದ ಖಾಸಗೀಕರಣ ಹಾಗೂ ಎಲ್‌ಐಸಿ ಸಂಸ್ಥೆ ಸಾರ್ವಜನಿಕ ಹೂಡಿಕೆಯಲ್ಲಿ ಸೇರಲು ಪ್ರಮುಖ ಪಾತ್ರವಹಿಸಿದ್ದರು.

ಮೂಲತಃ ಪಂಜಾಬ್‌ನವರಾದ ಪಾಂಡೆ ಪಂಜಾಬ್‌ ವಿವಿಯಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಲಂಡನ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಒಡಿಶಾದಲ್ಲಿ ಐಎಎಸ್ ಅಧಿಕಾರಿಯಾದ ನಂತರ ಜಿಲ್ಲಾಧಿಕಾರಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಸರ್ಕಾರಿ ಅಧಿಸೂಚನೆಯಂತೆ ಪಾಂಡೆ ಅವರನ್ನು ಸಂಪುಟ ಸಮಿತಿಯು ಮೂರು ವರ್ಷದವರೆಗೆ ಸೆಬಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲು ಅನುಮೋದಿಸಿದೆ. ತುಹಿನ್‌ ಕಾಂತ ಪಾಂಡೆ ಅವರು ಮಾಧಬಿ ಪುರಿ ಬುಚ್‌ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಮಾಧಬಿ ಪುರಿ ಬುಚ್‌ ಅವರು ಸೆಬಿಯ ಮೊದಲ ಮಹಿಳಾ ಮುಖ್ಯಸ್ಥರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT