Suzuki's online desk
ವಾಣಿಜ್ಯ

Maruti Suzuki: ಫೆಬ್ರವರಿ 1 ರಿಂದ ಕಾರುಗಳ ಬೆಲೆಯಲ್ಲಿ ಭಾರಿ ಏರಿಕೆ!

ಇನ್ಪುಟ್ ವೆಚ್ಚಗಳು ಹೆಚ್ಚಳವಾಗಿರುವುದರಿಂದಾಗಿ ಕಾರುಗಳ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಸಂಸ್ಥೆ ಹೇಳಿದೆ.

ನವದೆಹಲಿ: ಕಾರು ತಯಾರಕ ಸಂಸ್ಥೆ ಮಾರುತಿ ಸುಜೂಕಿ ಇಂಡಿಯಾ ಫೆ.1 ರಿಂದ ಕಾರುಗಳ ಬೆಲೆಯನ್ನು ಏರಿಕೆ ಮಾಡುವುದಾಗಿ ಜ.23 ರಂದು ಘೋಷಿಸಿದೆ.

ಇನ್ಪುಟ್ ವೆಚ್ಚಗಳು ಹೆಚ್ಚಳವಾಗಿರುವುದರಿಂದಾಗಿ ಕಾರುಗಳ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಸಂಸ್ಥೆ ಹೇಳಿದೆ.

"ಕಂಪನಿಯು ವೆಚ್ಚವನ್ನು ಅತ್ಯುತ್ತಮವಾಗಿಸಲು ಮತ್ತು ಗ್ರಾಹಕರ ಮೇಲಿನ ಪರಿಣಾಮವನ್ನು ಕಡಿಮೆ ಮಾಡಲು ಬದ್ಧವಾಗಿದ್ದರೂ, ಹೆಚ್ಚಿದ ಕೆಲವು ವೆಚ್ಚಗಳನ್ನು ಮಾರುಕಟ್ಟೆಗೆ ವರ್ಗಾಯಿಸುವ ಅನಿವಾರ್ಯತೆ ಎದುರಾಗಿದೆ" ಎಂದು ಸಂಸ್ಥೆ ಹೇಳಿದೆ.

ಪರಿಷ್ಕೃತ ಬೆಲೆಗಳ ಅಡಿಯಲ್ಲಿ, ಕಂಪನಿಯ ಕಾಂಪ್ಯಾಕ್ಟ್ ಕಾರು ಸೆಲೆರಿಯೊದ ಎಕ್ಸ್-ಶೋರೂಂ ಬೆಲೆಯಲ್ಲಿ ರೂ. 32,500 ರಷ್ಟು ಹೆಚ್ಚಳವಾಗಲಿದ್ದು, ಪ್ರೀಮಿಯಂ ಮಾದರಿ ಎಲ್‌ಎನ್‌ವಿಕ್ಟೊದ ಬೆಲೆಯಲ್ಲಿ ರೂ. 30,000 ರಷ್ಟು ಹೆಚ್ಚಳವಾಗಲಿದೆ.

ಕಂಪನಿಯ ಜನಪ್ರಿಯ ಮಾದರಿ ವ್ಯಾಗನ್-ಆರ್ ಬೆಲೆ ರೂ. 15,000 ದವರೆಗೆ ಮತ್ತು ಸ್ವಿಫ್ಟ್ ಬೆಲೆ ರೂ. 5,000 ದವರೆಗೆ ಹೆಚ್ಚಾಗಲಿದೆ.

ಬ್ರೆಝಾ ಮತ್ತು ಗ್ರ್ಯಾಂಡ್ ವಿಟಾರಾ ಎಸ್‌ಯುವಿಗಳ ಬೆಲೆ ಕ್ರಮವಾಗಿ ರೂ. 20,000 ಮತ್ತು ರೂ. 25,000 ದವರೆಗೆ ಏರಿಕೆಯಾಗಲಿದೆ.

ಆರಂಭಿಕ ಹಂತದ ಸಣ್ಣ ಕಾರುಗಳಾದ ಆಲ್ಟೊ ಕೆ 10 ಬೆಲೆ ರೂ. 19,500 ದವರೆಗೆ ಮತ್ತು ಎಸ್-ಪ್ರೆಸ್ಸೊ ಬೆಲೆ ರೂ. 5,000 ದವರೆಗೆ ಏರಿಕೆಯಾಗಲಿದೆ.

ಪ್ರೀಮಿಯಂ ಕಾಂಪ್ಯಾಕ್ಟ್ ಮಾದರಿ ಬಲೆನೊ ಬೆಲೆ ರೂ. 9,000 ದವರೆಗೆ, ಕಾಂಪ್ಯಾಕ್ಟ್ ಎಸ್‌ಯುವಿ ಫ್ರಾಂಕ್ಸ್ ಬೆಲೆ ರೂ. 5,500 ದವರೆಗೆ ಮತ್ತು ಕಾಂಪ್ಯಾಕ್ಟ್ ಸೆಡಾನ್ ಡಿಜೈರ್ ಬೆಲೆ ರೂ. 10,000 ದವರೆಗೆ ಏರಿಕೆಯಾಗಲಿದೆ ಎಂದು ಅದು ಹೇಳಿದೆ.

ಕಂಪನಿ ಪ್ರಸ್ತುತ ಆರಂಭಿಕ ಹಂತದ ಆಲ್ಟೊ ಕೆ -10 ವಾಹನಗಳನ್ನು ರೂ. 3.99 ಲಕ್ಷದಿಂದ ಪ್ರಾರಂಭವಾಗಿ ಇನ್ವಿಕ್ಟೊ ರೂ. 28.92 ಲಕ್ಷದವರೆಗೆ ಮಾರಾಟ ಮಾಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT