ಸಾಂದರ್ಭಿಕ ಚಿತ್ರ 
ವಾಣಿಜ್ಯ

ITR filing: ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆಗೆ ಗಡುವು ಜುಲೈ 31 ರಿಂದ ಸೆಪ್ಟೆಂಬರ್ 15ಕ್ಕೆ ವಿಸ್ತರಣೆ!

ಈ ವಿಸ್ತರಣೆಯಿಂದ ತೆರಿಗೆ ಪಾವತಿದಾರರು ಯಾವುದೇ ತಪ್ಪುಗಳಿಲ್ಲದೆ ರಿಟರ್ನ್ಸ್ ಸಲ್ಲಿಸಲು ಸಾಕಷ್ಟು ಸಮಯ ಸಿಗಲಿದೆ.

ನವದೆಹಲಿ: 2025-26ನೇ ಮೌಲ್ಯಮಾಪನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಈ ಹಿಂದೆ ಜುಲೈ 31 ಅಂತಿಮ ದಿನವಾಗಿತ್ತು. ಆದರೆ, ಇದೀಗ ಸೆಪ್ಟೆಂಬರ್ 15, 2025ರವರೆಗೆ ವಿಸ್ತರಿಸಲಾಗಿದೆ.

ಐಟಿಆರ್ ಫಾರ್ಮ್‌ಗಳಲ್ಲಿ ಗಣನೀಯ ಬದಲಾವಣೆಗಳಾಗಿದ್ದು, ಸಿಸ್ಟಮ್ ಅಪ್‌ಡೇಟ್ ನಡೆಯುತ್ತಿದೆ. ಹೀಗಾಗಿ, ರಿಟರ್ನ್ಸ್ ಸಲ್ಲಿಸಲು ಹೆಚ್ಚು ಸಮಯ ಬೇಕಾಗಬಹುದು ಎಂದು ಪರಿಗಣಿಸಿ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 25ರವರೆಗೂ ವಿಸ್ತರಿಸಲಾಗಿದೆ.

ಈ ವಿಸ್ತರಣೆಯಿಂದ ತೆರಿಗೆ ಪಾವತಿದಾರರು ಯಾವುದೇ ತಪ್ಪುಗಳಿಲ್ಲದೆ ರಿಟರ್ನ್ಸ್ ಸಲ್ಲಿಸಲು ಸಾಕಷ್ಟು ಸಮಯ ಸಿಗಲಿದೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT)ಮಂಗಳವಾರ ಮಾಹಿತಿ ನೀಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ CBDT,ಈ ವಿಸ್ತರಣೆಯು ತೆರಿಗೆದಾರರಿಗೆ ಸುಗಮ ಹಾಗೂ ನಿಖರವಾಗಿ ರಿಟರ್ನ್ಸ್ ಸಲ್ಲಿಕೆಗೆ ಖಾತ್ರಿ ಒದಗಿಸುತ್ತದೆ. ಗಮನಾರ್ಹ ಐಟಿ ಫಾರಂ ಬದಲಾವಣೆ, ಸಿಸ್ಟಂ ಅಭಿವೃದ್ಧಿ ಮತ್ತು TDS ಕ್ರೆಡಿಟ್ ಪ್ರತಿಫಲನದಿಂದಾಗಿ ಈ ವಿಸ್ತರಣೆಯು ಹೆಚ್ಚಿನ ಸಮಯವನ್ನು ಒದಗಿಸುತ್ತದೆ. ಇದು ಎಲ್ಲರಿಗೂ ಸುಗಮ ಮತ್ತು ಹೆಚ್ಚು ನಿಖರವಾದ ಫೈಲಿಂಗ್ ಅನುಭವವನ್ನು ಖಾತ್ರಿಗೊಳಿಸುತ್ತದೆ. ಈ ಕುರಿತು ಅಧಿಸೂಚನೆಯನ್ನು ಶೀಘ್ರದಲ್ಲಿಯೇ ಹೊರಡಿಸಲಾಗುವುದು ಎಂದು ಹೇಳಿದೆ.

ಅಲ್ಲದೇ ಮೇ 31, 2025 ರವೆರಿಗಿನ ಬಾಕಿಯಿರುವ TDS ಸ್ಟೇಟ್ ಮೆಂಟ್ ಗಳು ಜೂನ್ ಆರಂಭದವರೆಗೆ ಪ್ರತಿಫಲಿಸುವ ನಿರೀಕ್ಷೆಯಿಲ್ಲ. ಸಿಸ್ಟಂ ಅಪ್ ಡೇಟ್ ನಿಂದ ವಿಳಂಬವಾಗುತ್ತಿದ್ದು, ತೆರಿಗೆದಾರರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಮತ್ತು ತೆರಿಗೆ ಸಲ್ಲಿಸುವ ಪ್ರಕ್ರಿಯೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲಾಗುತ್ತಿದೆ ಎಂದು CBDT ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT