ಸಾಂಕೇತಿಕ ಚಿತ್ರ) 
ವಾಣಿಜ್ಯ

GST ಕಡಿತ, ಆಹಾರ ವಸ್ತುಗಳ ಬೆಲೆ ಇಳಿಕೆ; ದಶಕದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದ ಹಣದುಬ್ಬರ

ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ(MoSPI) ಮಾಹಿತಿಯ ಪ್ರಕಾರ, ಆಹಾರವಸ್ತುಗಳ ಬೆಲೆಗಳು ಭರ್ಜರಿ ಇಳಿಕೆಯಾಗಿರುವುದು ಹಣದುಬ್ಬರ ಕುಸಿತಕ್ಕೆ ಕಾರಣವಾಗಿದೆ.

ಚೆನ್ನೈ: ಜಿಎಸ್ ಟಿ ಕಡಿತದ ಪರಿಣಾಮವಾಗಿ ದೇಶದಲ್ಲಿ ಆಹಾರ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಭಾರತದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ 2025 ರಲ್ಲಿ ರಲ್ಲಿ ಶೇ. 0.25ಕ್ಕೆ ತೀವ್ರವಾಗಿ ಕುಸಿದಿದೆ. ಇದು ಕಳೆದ 10 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಹಣದುಬ್ಬರವಾಗಿದೆ.

ಸೆಪ್ಟೆಂಬರ್‌ನಲ್ಲಿ ಶೇ. 1.54 ಇದ್ದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ನಲ್ಲಿ ಕೇವಲ ಶೇ. 0.25 ದಾಖಲಾಗಿದೆ. ಪ್ರಸ್ತುತ ಗ್ರಾಹಕ ಬೆಲೆ ಸೂಚ್ಯಂಕ(CPI) ಸರಣಿಯಲ್ಲಿ ಇದು ಅತ್ಯಂತ ಕಡಿಮೆ ಮಟ್ಟವನ್ನು ಗುರುತಿಸಿದೆ.

ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ(MoSPI) ಮಾಹಿತಿಯ ಪ್ರಕಾರ, ಆಹಾರವಸ್ತುಗಳ ಬೆಲೆಗಳು ಭರ್ಜರಿ ಇಳಿಕೆಯಾಗಿರುವುದು ಹಣದುಬ್ಬರ ಕುಸಿತಕ್ಕೆ ಕಾರಣವಾಗಿದೆ. ಆಹಾರ ಹಣದುಬ್ಬರವು ಸೆಪ್ಟೆಂಬರ್​ನಲ್ಲಿ ಮೈನಸ್ ಶೇ. 2.33 ಇದ್ದದ್ದು ಈಗ ಮೈನಸ್ 5.02ಕ್ಕೆ ಕುಸಿದಿದೆ.

ಅನುಕೂಲಕರ ಹವಾಮಾನ ಪರಿಸ್ಥಿತಿಗಳಿಂದಾಗಿ ತರಕಾರಿ, ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳ ಬೆಲೆಗಳು ಗಮನಾರ್ಹ ಕುಸಿತವನ್ನು ದಾಖಲಿಸಿವೆ. ಅಲ್ಲದೆ ಸೆಪ್ಟೆಂಬರ್ ಅಂತ್ಯದಲ್ಲಿ ಜಾರಿಗೆ ತರಲಾದ ಜಿಎಸ್‌ಟಿ ದರ ಕಡಿತ ಸಹ ಹಣದುಬ್ಬರ ಕುಸಿತದಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇನ್ನು ರಾಜ್ಯಗಳ ಪೈಕಿ ಕೇರಳದಲ್ಲಿ ಅತಿಹೆಚ್ಚು ಹಣದುಬ್ಬರ ದಾಖಲಾಗಿದೆ. ಈ ದಕ್ಷಿಣ ರಾಜ್ಯದಲ್ಲಿ ಹಣದುಬ್ಬರ ಬರೋಬ್ಬರಿ ಶೇ. 8.56 ಇದೆ. ಜಮ್ಮು ಮತ್ತು ಕಾಶ್ಮೀರ ಹಾಗೂ ಕರ್ನಾಟಕದಲ್ಲೂ ಶೇ. 2ಕ್ಕಿಂತಲೂ ಹೆಚ್ಚು ಹಣದುಬ್ಬರ ದಾಖಲಾಗಿದೆ. ಹಣದುಬ್ಬರ ಮೈನಸ್ ಹೊಂದಿರುವ ರಾಜ್ಯಗಳಲ್ಲಿ ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರ ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT