ಸಂಗ್ರಹ ಚಿತ್ರ 
ವಾಣಿಜ್ಯ

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರುಪೇರಿನ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಸಣ್ಣ ಮಟ್ಟಿನ ಏರಿಕೆ ದಾಖಲಾಗಿದೆ. ಬುಧವಾರ ದರಗಳೊಂದಿಗೆ ಹೋಲಿಸಿದರೆ ಇಂದು ಪ್ರತಿ ಗ್ರಾಂಗೆ ರೂ.1ರಷ್ಟು ಏರಿಕೆಯಾಗಿದೆ.

ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಬೆಂಗಳೂರಿನ ಇಂದಿನ ಚಿನ್ನದ ದರ (26 ಫೆಬ್ರವರಿ) ಬೆಂಗಳೂರು ನಗರದಲ್ಲಿ 24 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ 16,190 ರೂ. ಆಗಿದ್ದು, 10 ಗ್ರಾಂಗೆ ರೂ. 1,61,900 ದಾಖಲಾಗಿದೆ. ನಿನ್ನೆಗಿಂತ 10ರಷ್ಟು ಹೆಚ್ಚಳ ಕಂಡಿದೆ. 100 ಗ್ರಾಂಗೆ ರೂ.16,19,000 ದರ ದಾಖಲಾಗಿದೆ.

ಇದೇ ವೇಳೆ 22 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ ರೂ.14,841 ಆಗಿದ್ದು, 10 ಗ್ರಾಂಗೆ ರೂ.1,48,410 ತಲುಪಿದೆ. 100 ಗ್ರಾಂಗೆ ರೂ.14,84,100 ದರವಾಗಿದೆ. ಬೆಲೆಯಲ್ಲಿ ಸಣ್ಣ ಪ್ರಮಾಣದ ಏರಿಕೆ ಕಂಡುಬಂದಿದೆ.

ಇನ್ನು ಬೆಳ್ಳಿ ದರವು ಪ್ರತಿ ಕಿಲೋಗೆ ರೂ.2.84 ಲಕ್ಷದ ಗಡಿಯನ್ನು ತಲುಪಿದೆ. ಇದರಂತೆ 10 ಗ್ರಾಂ ಬೆಳ್ಳಿ ದರ 2,849 ರೂ.ಕ್ಕೆ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,62,050 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,48,560 ರೂ.ಗಳಿದೆ.

ಮುಂಬೈನಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,61,900 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,48,410 ರೂ.ಗಳಿದೆ.

ಅದೇ ರೀತಿ, ಚೆನ್ನೈನಲ್ಲಿ 10 ಗ್ರಾಂ ಚಿನ್ನದ ಬೆಲೆ 1,62,890 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,49,310 ರೂ.ಗಳಿದೆ.

ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,61,900 ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,48,410 ನಲ್ಲಿ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!