ಚಿನ್ನದ ದರ ಏರಿಕೆ online desk
ವಾಣಿಜ್ಯ

ಇತಿಹಾಸದಲ್ಲೇ ಮೊದಲು: 3 ಲಕ್ಷ ರೂ ಗಡಿ ದಾಟಿದ ಬೆಳ್ಳಿ ಬೆಲೆ, Gold rate ಕೂಡ 1,750 ರೂ ಏರಿಕೆ

ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 3,18,000 ಆಗಿದ್ದರೆ, ದೆಹಲಿಯಲ್ಲಿ ರೂ. 3,05,000, ಮುಂಬೈನಲ್ಲಿ ರೂ. 3,05,000 ಹಾಗೂ ಕೊಲ್ಕತ್ತದಲ್ಲೂ ರೂ. 3,05,000 ಗಳಾಗಿದೆ.

ಮುಂಬೈ: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಮೊದಲ ಬಾರಿಗೆ ಕೆಜಿಗೆ 3 ಲಕ್ಷ ರೂ. ದಾಟಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸೋಮವಾರ ಭಾರಿ ಪ್ರಮಾಣದ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಇದೇ ಮೊದಲ ಬಾರಿಗೆ 3 ಲಕ್ಷ ರೂ ಗಡಿ ದಾಟಿದೆ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 3,05,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ.3,050, ರೂ. 3,0,500 ಹಾಗೂ ರೂ. 3,05,000 ಗಳಾಗಿವೆ.

ಉಳಿದಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 3,18,000 ಆಗಿದ್ದರೆ, ದೆಹಲಿಯಲ್ಲಿ ರೂ. 3,05,000, ಮುಂಬೈನಲ್ಲಿ ರೂ. 3,05,000 ಹಾಗೂ ಕೊಲ್ಕತ್ತದಲ್ಲೂ ರೂ. 3,05,000 ಗಳಾಗಿದೆ.

ಚಿನ್ನದ ಬೆಲೆಯಲ್ಲೂ ಗಣನೀಯ ಏರಿಕೆ

ಇನ್ನು ಮಹಿಳೆಯರ ಮೆಚ್ಚಿನ ಹಳದಿ ಲೋಹದ ಬೆಲೆಯಲ್ಲೂ ಗಣನೀಯ ಏರಿಕೆ ಕಂಡುಬಂದಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 1,750 ರೂ ಏರಿಕೆಯಾಗಿದೆ. ಅಂದರೆ ಪ್ರತೀ ಗ್ರಾಂಗೆ 175ರೂ ಏರಿಕೆಯಾಗಿದೆ.

18 ಕ್ಯಾರಟ್ ಚಿನ್ನದ ಬೆಲೆ 11,000 ರೂ ಮೈಲಿಗಲ್ಲು ಸಮೀಪ ಹೋಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ 300 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,550 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,690 ರುಪಾಯಿ ಆಗಿದೆ.

100 ಗ್ರಾಮ್ ಬೆಳ್ಳಿ ಬೆಲೆ 30,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 30,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 31,800 ರೂ ಇದೆ.

ಬೆಲೆ ಏರಿಕೆಗೆ ಕಾರಣ

ರಾಯಿಟರ್ಸ್‌ ವರದಿ ಪ್ರಕಾರ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗ್ರೀನ್‌ಲ್ಯಾಂಡ್‌ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ ಯುರೋಪಿಯನ್‌ ರಾಷ್ಟ್ರಗಳ ಮೇಲೆ ಸುಂಕದ ಬೆದರಿಕೆಯೊಡ್ಡಿದ ನಂತರ, ಅಮೆರಿಕ-ಇರಾನ್‌ ಉದ್ವಿಗ್ನತೆಯಿಂದಾಗಿ ಹೂಡಿಕೆದಾರರು ಚಿನ್ನದ ಮೇಲೆ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ.

ಅದೇ ಕಾರಣದಿಂದ ಚಿನ್ನ-ಬೆಳ್ಳಿ ಬೆಲೆ ಸೋಮವಾರ ಭಾರೀ ಏರಿಕೆ ಕಂಡಿದೆ. ಸ್ಪಾಟ್‌ ಚಿನ್ನದ ದರವು GMT 0335 ವೇಳೆಗೆ ಪ್ರತೀ ಔನ್ಸ್‌ಗೆ 1.5% ಏರಿಕೆಯಾಗಿ $4,663.37 ಕ್ಕೆ ತಲುಪಿದೆ.

ಶನಿವಾರ, ಟ್ರಂಪ್ ಗ್ರೀನ್‌ಲ್ಯಾಂಡ್ ಅನ್ನು ಖರೀದಿಸಲು ಯುನೈಟೆಡ್ ಸ್ಟೇಟ್ಸ್‌ಗೆ ಅವಕಾಶ ನೀಡುವವರೆಗೆ ಯುರೋಪಿಯನ್ ಮಿತ್ರರಾಷ್ಟ್ರಗಳ ಮೇಲೆ ಸುಂಕಗಳನ್ನು ಹೆಚ್ಚಿಸುವ ಅಲೆಯನ್ನು ಜಾರಿಗೆ ತರುವುದಾಗಿ ಪ್ರತಿಜ್ಞೆ ಮಾಡಿದರು, ಇದು ಡೆನ್ಮಾರ್ಕ್‌ನ ವಿಶಾಲವಾದ ಆರ್ಕ್ಟಿಕ್ ದ್ವೀಪದ ಭವಿಷ್ಯದ ಬಗ್ಗೆ ವಿವಾದವನ್ನು ಹೆಚ್ಚಿಸಿತು.

ಯುರೋಪಿಯನ್ ಒಕ್ಕೂಟದ ರಾಯಭಾರಿಗಳು ಭಾನುವಾರ ಯುರೋಪಿಯನ್ ಮಿತ್ರರಾಷ್ಟ್ರಗಳ ಮೇಲೆ ಸುಂಕಗಳನ್ನು ವಿಧಿಸುವುದನ್ನು ತಡೆಯಲು ಪ್ರಯತ್ನಗಳನ್ನು ತೀವ್ರಗೊಳಿಸಲು ವಿಶಾಲ ಒಪ್ಪಂದಕ್ಕೆ ಬಂದರು, ಜೊತೆಗೆ ಸುಂಕಗಳು ಮುಂದುವರಿದರೆ ಪ್ರತೀಕಾರದ ಕ್ರಮಗಳನ್ನು ಸಿದ್ಧಪಡಿಸುತ್ತಾರೆ ಎಂದು EU ರಾಜತಾಂತ್ರಿಕರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

'ಗಿಲ್ಲಿ 'ಬಡವ' ಅಂತ ಅನ್ನೋದಾದ್ರೆ, BiggBoss ವ್ಯಕ್ತಿತ್ವದ ಆಟ ಹೇಗಾಯ್ತು? ಅಶ್ವಿನಿ ಗೌಡ ಬೇಸರ

GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜೂನ್, 2026ರಲ್ಲಿ ಜಾಮೀನು, 2029ರಲ್ಲಿ ಪ್ರಕರಣದಿಂದಲೇ ಖುಲಾಸೆ: ಜ್ಯೋತಿಷಿ ಭವಿಷ್ಯ!

ಕಚೇರಿಯಲ್ಲೇ ರಾಮಚಂದ್ರರಾವ್ ಮಹಿಳೆ ಜೊತೆ ರಾಸಲೀಲೆ: ಆರೋಪ ಅಲ್ಲಗಳೆದ DGP, Video Viral

SCROLL FOR NEXT