ಭಾರತೀಯ ಷೇರು ಮಾರುಕಟ್ಟೆ 
ವಾಣಿಜ್ಯ

Indian Stock Market; ಸೆನ್ಸೆಕ್ಸ್ 238 ಅಂಕ ಏರಿಕೆ, 24 ಸಾವಿರ ಗಡಿಯತ್ತ Nifty

ಆಸ್ಟ್ರೇಲಿಯಾದೊಂದಿಗಿನ ಬಲಿಷ್ಠ ಸಹಭಾಗಿತ್ವ ಭಾರತಕ್ಕೆ ಇಂಧನ ಭದ್ರತೆಯನ್ನು ಹೆಚ್ಚಿಸಲು ನೆರವಾಗುವ ನಿರೀಕ್ಷೆಯಿದೆ.

ಮುಂಬೈ: ಭಾರತೀಯ ಷೇರುಮಾರುಕಟ್ಟೆಯ ಚೇತೋಹಾರಿ ವಹಿವಾಟು ಮುಂದುವರೆದಿದ್ದು, ಗುರುವಾರ ಕೂಡ ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಗುರುವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.31ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.34ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 238.22ಅಂಕಗಳ ಏರಿಕೆಯೊಂದಿಗೆ 76,741.82 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 80.75 ಅಂಕಗಳ ಏರಿಕೆಯೊಂದಿಗೆ 23,962.80 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ PSU ಬ್ಯಾಂಕ್, ಗ್ರಾಹಕ ಬಾಳಿಕ ವಸ್ತುಗಳು ವಲಯದ ಷೇರುಗಳ ಮೌಲ್ಯ ಏರಿಕೆ ಕಂಡಿದ್ದರೆ, ಆಟೋ ಮತ್ತು ಐಟಿವಲಯದ ಷೇರುಗಳು ಹಿನ್ನಡೆ ಕಂಡಿವೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಸನ್ ಫಾರ್ಮಾ ಶೇ. 2.7 ರಷ್ಟು ಏರಿಕೆಯಾಗಿ ಅತಿ ಹೆಚ್ಚು ಲಾಭ ಗಳಿಸಿತು. ಭಾರ್ತಿ ಏರ್‌ಟೆಲ್ ಶೇ. 2.15 ರಷ್ಟು ಏರಿಕೆಯಾಯಿತು. ಉಳಿದಂತೆ ಬಜಾಜ್ ಫಿನ್‌ಸರ್ವ್, ಇಂಟರ್‌ಗ್ಲೋಬ್ ಏವಿಯೇಷನ್, ಎಟರ್ನಲ್, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.

ಅಂತೆಯೇ ಭಾರ್ತಿ ಏರ್‌ಟೆಲ್ ಸಂಸ್ಥೆಯ ಷೇರುಗಳು ಶೇ.2.15 ರಷ್ಟು ನಷ್ಟ ಕಂಡಿವೆ. ಮತ್ತೊಂದೆಡೆ, ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಶೇ.5.99ರಷ್ಟು ಕುಸಿದು ಅತಿ ಹೆಚ್ಚು ನಷ್ಟ ಅನುಭವಿಸಿದ ಷೇರಾಯಿತು. ಉಳಿದಂತೆ ಇನ್ಫೋಸಿಸ್ ಶೇ.1.79, ಮಾರುತಿ ಸುಜುಕಿ ಶೇ.1.62, ಎನ್‌ಟಿಪಿಸಿ ಶೇ.1.51 ಹಾಗೂ ಒಎನ್‌ಜಿಸಿ ಶೇ.1.28ರಷ್ಟು ಇಳಿಕೆ ಕಂಡವು.

ಏರಿಕೆಗೆ ಕಾರಣ

ಹೂಡಿಕೆದಾರರು ರಕ್ಷಣಾತ್ಮಕ ಹಾಗೂ ದೇಶೀಯ ಬೇಡಿಕೆಯನ್ನು ಆಧರಿಸಿದ ವಲಯಗಳತ್ತ ಹೆಚ್ಚಿನ ಆಸಕ್ತಿ ತೋರಿದರು. ಇದರ ಜೊತೆಗೆ, ಭಾರತ–ಆಸ್ಟ್ರೇಲಿಯಾ ನಡುವಿನ ಕಾರ್ಯತಂತ್ರದ ಸಹಭಾಗಿತ್ವ ಮತ್ತಷ್ಟು ಬಲಗೊಳ್ಳುವ ಬೆಳವಣಿಗೆಯೂ ಮಾರುಕಟ್ಟೆಯ ವಿಶ್ವಾಸವನ್ನು ಹೆಚ್ಚಿಸಿದೆ. ಉಭಯ ದೇಶಗಳು ವ್ಯಾಪಾರ, ಇಂಧನ ಭದ್ರತೆ, ಶುದ್ಧ ಇಂಧನ ಹಾಗೂ ಪೂರೈಕೆ ಸರಪಳಿ (ಸಪ್ಲೈ ಚೈನ್) ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸಲು ಒಪ್ಪಿಗೆ ಸೂಚಿಸಿವೆ.

ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆಯಿಂದ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 78 ಅಮೆರಿಕನ್ ಡಾಲರ್ ಮಟ್ಟದಲ್ಲಿ ಮುಂದುವರಿದಿರುವ ಹಿನ್ನೆಲೆಯಲ್ಲಿ, ಆಸ್ಟ್ರೇಲಿಯಾದೊಂದಿಗಿನ ಬಲಿಷ್ಠ ಸಹಭಾಗಿತ್ವ ಭಾರತಕ್ಕೆ ಇಂಧನ ಭದ್ರತೆಯನ್ನು ಹೆಚ್ಚಿಸಲು ನೆರವಾಗುವ ನಿರೀಕ್ಷೆಯಿದೆ.

ಜೊತೆಗೆ, ದೀರ್ಘಾವಧಿಯಲ್ಲಿ ಭಾರತದ ಉತ್ಪಾದನಾ (ಮ್ಯಾನುಫ್ಯಾಕ್ಚರಿಂಗ್) ಹಾಗೂ ನವೀಕರಿಸಬಹುದಾದ ಇಂಧನ (ರಿನ್ಯೂಯಬಲ್ ಎನರ್ಜಿ) ಕ್ಷೇತ್ರಗಳ ಬೆಳವಣಿಗೆಗೂ ಇದು ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!