ಭಾರತೀಯ ಷೇರು ಮಾರುಕಟ್ಟೆ 
ವಾಣಿಜ್ಯ

ವಾರಾಂತ್ಯದಲ್ಲಿ Indian Stock Market ಭರ್ಜರಿ ವಹಿವಾಟು; Sensex 964 ಅಂಕ ಏರಿಕೆ

ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆ ಎರಡೂ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ: ವಾರಾಂತ್ಯದ ಹೊತ್ತಿಗೆ ಭಾರತೀಯ ಷೇರುಮಾರುಕಟ್ಟೆ ಭರ್ಜರಿ ವಹಿವಾಟು ನಡೆಸಿದ್ದು ಶುಕ್ರವಾರ ಒಂದೇ ದಿನ ಸೆನ್ಸೆಕ್ಸ್ ಬರೊಬ್ಬರಿ 964 ಅಂಕಗಳ ಏರಿಕೆ ಕಂಡಿದೆ.

ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆ ಎರಡೂ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.25ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.1.09ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 964.59ಅಂಕಗಳ ಏರಿಕೆಯೊಂದಿಗೆ 78,151.45 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 261.55 ಅಂಕಗಳ ಏರಿಕೆಯೊಂದಿಗೆ 24,334.30 ಅಂಕಗಳಿಗೆ ಏರಿಕೆಯಾಗಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಬ್ಯಾಂಕ್ ಮತ್ತು ಐಟಿ ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಕೋಟಕ್ ಮಹೀಂದ್ರಾ ಬ್ಯಾಂಕ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ರಿಲಯನ್ಸ್ ಇಂಡಸ್ಟ್ರೀಸ್, ಹಿಂದೂಸ್ತಾನ್ ಯೂನಿಲಿವರ್, ಮಹೀಂದ್ರಾ & ಮಹೀಂದ್ರಾ, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.

ಅಂತೆಯೇ ಸನ್ ಫಾರ್ಮಾ, ಭಾರ್ತಿ ಏರ್‌ಟೆಲ್, ಅಲ್ಟ್ರಾಟೆಕ್, ಇಂಡಿಗೋ ಮತ್ತು ಟ್ರೆಂಟ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.

ಇತ್ತ ಜೂನ್ ತ್ರೈಮಾಸಿಕದಲ್ಲಿ ಕ್ರೋಢೀಕೃತ ನಿವ್ವಳ ಲಾಭವು ಶೇ. 28.4 ರಷ್ಟು ಏರಿಕೆಯಾಗಿ 1,465 ಕೋಟಿ ರೂ.ಗಳಿಗೆ ತಲುಪಿದೆ ಎಂದು ವರದಿ ಮಾಡಿದ ನಂತರ ಟೆಕ್ ಮಹೀಂದ್ರಾ ಶೇ. 3.91 ರಷ್ಟು ಜಿಗಿದು ಬೇಡಿಕೆಯ ವಾತಾವರಣದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ. ಅಂತೆಯೇ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಜೂನ್ ತ್ರೈಮಾಸಿಕ ಗಳಿಕೆಯನ್ನು ದಿನದ ನಂತರ ಪ್ರಕಟಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20ರ ನಂತರ ನಿಮ್ಮನ್ನು ದೆವ್ವವಾಗಿ ಕಾಡುತ್ತೇನೆ: ವಿದ್ಯಾರ್ಥಿಗಳಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧರಾದ ವಾಂಗ್‌ಚುಕ್!

ಲಂಚಕ್ಕಾಗಿ APP ವಿಚಿತ್ರ ಬೇಡಿಕೆ: ಶೂ, ಚಪ್ಪಲಿ, 9 ಸೀರೆ, 10 ಸಾವಿರ ಕ್ಯಾಶ್ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!

Lanka Premier League: ಆಟಗಾರನಿಗೆ ಲಂಚ; U-19 ವಿಶ್ವಕಪ್ ವಿಜೇತ ಭಾರತದ ಮಾಜಿ ಆಟಗಾರನ ಬಂಧನ!

VIDEO: ವಾರಣಾಸಿಯಲ್ಲಿ ವಿಚಿತ್ರ ಕ್ರೌರ್ಯ; ಅರೆ ಬೆತ್ತಲಾಗಿ ಮನೆಗಳಿಗೆ ನುಗ್ಗಿ, ಜನರಿಗೆ ಕಚ್ಚಿದ ವಿದೇಶಿ ಪ್ರಜೆ!

ಸುರತ್ಕಲ್: ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ; ಕೂದಲೆಳೆ ಅಂತರದಲ್ಲಿ 6 ಮೀನುಗಾರರ ರಕ್ಷಣೆ