ಸಂಗ್ರಹ ಚಿತ್ರ 
ವಾಣಿಜ್ಯ

7,623 ಕೋಟಿ ಬ್ಯಾಂಕ್ ವಂಚನೆ ಪ್ರಕರಣ: ರಿಲಯನ್ಸ್ RCFL, RHFL ಮಾಜಿ ಸಿಇಒಗಳನ್ನು ಬಂಧಿಸಿದ CBI!

ಬ್ಯಾಂಕ್ ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್‌ನ ಇಬ್ಬರು ಮಾಜಿ ಸಿಇಒಗಳನ್ನು ಸಿಬಿಐ ಬಂಧಿಸಿದೆ.

ನವದೆಹಲಿ: ಬ್ಯಾಂಕ್ ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್‌ನ ಇಬ್ಬರು ಮಾಜಿ ಸಿಇಒಗಳನ್ನು ಸಿಬಿಐ ಬಂಧಿಸಿದೆ. ಸಿಬಿಐ ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಾಜಿ ಆರ್‌ಸಿಎಫ್‌ಎಲ್ ನಿರ್ದೇಶಕ ಸಿಐ ದೇವಾಂಗ್ ಮೋದಿ ಮತ್ತು ಮಾಜಿ ಆರ್‌ಎಚ್‌ಎಫ್‌ಎಲ್ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರವೀಂದ್ರ ಸುಧಾಕರ್ ರನ್ನು ಬಂಧಿಸಲಾಗಿದೆ. ಹಲವಾರು ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಒಳಗೊಂಡ 7,623 ಕೋಟಿ ವಂಚನೆಗೆ ಸಂಬಂಧಿಸಿದಂತೆ ಇಬ್ಬರೂ ಪ್ರತ್ಯೇಕ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಸಿಬಿಐ ವಕ್ತಾರರು ಸಂಪೂರ್ಣ ಹಗರಣವನ್ನು ಎರಡು ಭಾಗಗಳಲ್ಲಿ ನಡೆಸಲಾಗಿದ್ದು, ಇದರ ಪರಿಣಾಮವಾಗಿ ಹಲವಾರು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ನಷ್ಟವಾಗಿದೆ ಎಂದು ಹೇಳಿದ್ದಾರೆ. ಆರ್‌ಸಿಎಫ್‌ಎಲ್ ಪ್ರಕರಣದಲ್ಲಿ 13 ಸಾರ್ವಜನಿಕ ವಲಯದ ಬ್ಯಾಂಕುಗಳು 4,097 ಕೋಟಿ ನಷ್ಟವನ್ನು ಅನುಭವಿಸಿವೆ. ಆರ್‌ಎಫ್‌ಎಫ್‌ಎಲ್ ಪ್ರಕರಣದಲ್ಲಿ, 10 ಸಾರ್ವಜನಿಕ ವಲಯದ ಬ್ಯಾಂಕುಗಳು 3,526 ಕೋಟಿ ನಷ್ಟವನ್ನು ಅನುಭವಿಸಿವೆ. ದೇವಾಂಗ್ ಮೋದಿ ಮತ್ತು ರವೀಂದ್ರ ಸುಧಾಲ್ಕರ್ ಶೆಲ್ ಕಂಪನಿಗಳಿಗೆ ಕೋಟ್ಯಂತರ ರೂಪಾಯಿಗಳ ಸಾಲವನ್ನು ಮಂಜೂರು ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಅಂತಹ ಸಾಲಗಳು ಆರ್‌ಬಿಐ ಮಾರ್ಗಸೂಚಿಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಿಂದ ಸಾಲ ಪಡೆಯುವ ನಿಯಮಗಳಿಗೆ ವಿರುದ್ಧವಾಗಿವೆ.

ಸಿಬಿಐ ಹಲವಾರು ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಭಾರತೀಯ ಜೀವ ವಿಮಾ ನಿಗಮದಿಂದ ದೂರುಗಳನ್ನು ಸ್ವೀಕರಿಸಿದೆ. ಈ ದೂರುಗಳ ಆಧಾರದ ಮೇಲೆ, ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್, ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್, ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಟೆಲಿಕಾಂ ಲಿಮಿಟೆಡ್ ವಿರುದ್ಧ ಏಳು ಎಫ್‌ಐಆರ್‌ಗಳನ್ನು ದಾಖಲಿಸಿದೆ.

ರಿಲಯನ್ಸ್ ಎಡಿಎ ಗ್ರೂಪ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸಂಸ್ಥೆ ಐದು ಜನರನ್ನು ಬಂಧಿಸಿದೆ. ಇದಕ್ಕೂ ಮೊದಲು, ಮೇ 29 ರಂದು, ಆರ್‌ಕಾಮ್ ಪ್ರಕರಣದಲ್ಲಿ ಮೊದಲ ಚಾರ್ಜ್‌ಶೀಟ್ ಸಲ್ಲಿಸಲಾಯಿತು. ಇದರಲ್ಲಿ ಕಂಪನಿ, ಐದು ಹಿರಿಯ ಕಾರ್ಯನಿರ್ವಾಹಕರು ಮತ್ತು 10 ಬ್ಯಾಂಕ್ ಅಧಿಕಾರಿಗಳನ್ನು ಆರೋಪಿಗಳಾಗಿ ಹೆಸರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!