ಸಂಗ್ರಹ ಚಿತ್ರ 
ವಾಣಿಜ್ಯ

Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ..

ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರುಪೇರಿನ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಗುರುವಾರ ಕೊಂಚ ಏರಿಕೆ ಕಂಡು ಬಂದಿದೆ. ಗುರುವಾರ ದರಗಳೊಂದಿಗೆ ಹೋಲಿಸಿದರೆ ಇಂದು ಪ್ರತಿ ಗ್ರಾಂಗೆ ರೂ.16 ಏರಿಕೆಯಾಗಿದೆ.

ಆಭರಣ ಪ್ರಿಯರು ಹಾಗೂ ಹೂಡಿಕೆದಾರರು ಪ್ರತಿದಿನ ಮಾರುಕಟ್ಟೆಯತ್ತ ಕಣ್ಣಿಟ್ಟಿರುತ್ತಾರೆ. ವಿಶೇಷವಾಗಿ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಖರೀದಿಗೆ ಕಾದು ಕುಳಿತಿರುತ್ತಾರೆ.

ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಬೆಂಗಳೂರಿನ ಇಂದಿನ ಚಿನ್ನದ ದರ (ಮಾರ್ಚ್ 27) ಬೆಂಗಳೂರು ನಗರದಲ್ಲಿ 24 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ 14,471ರೂ. ಆಗಿದ್ದು, 10 ಗ್ರಾಂಗೆ ರೂ.1,44,710 ದಾಖಲಾಗಿದೆ. 100 ಗ್ರಾಂಗೆ ರೂ.14,47,100 ದರ ದಾಖಲಾಗಿದೆ.

ಇದೇ ವೇಳೆ 22 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ ರೂ.13,265 ಆಗಿದ್ದು, 10 ಗ್ರಾಂಗೆ ರೂ.1,32,650 ತಲುಪಿದೆ. 100 ಗ್ರಾಂಗೆ ರೂ.13,26,500 ದರವಾಗಿದೆ. ಬೆಲೆಯಲ್ಲಿ ಸಣ್ಣ ಪ್ರಮಾಣದ ಇಳಿಕೆ ಕಂಡುಬಂದಿದೆ. ಪ್ರತಿ 10 ಗ್ರಾಂ ಬೆಳ್ಳಿ ದರ 2,400 ರೂ.ಕ್ಕೆ ಇಳಿಕೆಯಾಗದಿದ್ದು, ಪ್ರತಿ ಕಿಲೋಗೆ ರೂ.2,40,000 ತಲುಪಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,44,860 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,32,800 ರೂ.ಗಳಿದೆ.

ಮುಂಬೈನಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,44,710 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,32,650 ರೂ.ಗಳಿದೆ.

ಅದೇ ರೀತಿ, ಚೆನ್ನೈನಲ್ಲಿ 10 ಗ್ರಾಂ ಚಿನ್ನದ ಬೆಲೆ 1,46,510 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,34,300 ರೂ.ಗಳಿದೆ.

ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,44,710 ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,32,650 ನಲ್ಲಿ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್