ಏರ್ ಇಂಡಿಯಾ ವಿಮಾನ 
ವಾಣಿಜ್ಯ

ಈ ಆರು ಮಾರ್ಗಗಳಲ್ಲಿ ಏರ್ ಇಂಡಿಯಾ ಅಂತರರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ; ಕಾರಣ ಏನು ಗೊತ್ತಾ?

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಪ್ರತಿ ತಿಂಗಳು 1,200 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುವುದನ್ನು ಮುಂದುವರಿಸುತ್ತದೆ.

ನವದೆಹಲಿ: ವಾಯುಪ್ರದೇಶದ ನಿರ್ಬಂಧಗಳು ಮತ್ತು ಜೆಟ್ ಇಂಧನ ಬೆಲೆ ಹೆಚ್ಚಳದ ಮಧ್ಯೆ, ದೆಹಲಿ-ಚಿಕಾಗೋ ಸೇರಿದಂತೆ ಆರು ಮಾರ್ಗಗಳಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಕಡಿತ ಮತ್ತು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಏರ್ ಇಂಡಿಯಾ ಬುಧವಾರ ಘೋಷಿಸಿದೆ.

ವಿಮಾನಯಾನ ಸಂಸ್ಥೆಯು, ಆಗಸ್ಟ್ ವರೆಗೆ ದೆಹಲಿ-ಚಿಕಾಗೋ, ಮುಂಬೈ-ನ್ಯೂಯಾರ್ಕ್, ದೆಹಲಿ-ಶಾಂಘೈ, ಚೆನ್ನೈ-ಸಿಂಗಾಪುರ, ಮುಂಬೈ-ಢಾಕಾ ಮತ್ತು ದೆಹಲಿ-ಮಾಲೆ ಮಾರ್ಗಗಳಲ್ಲಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಈಗಾಗಲೇ ಕೆಲವು ಮಾರ್ಗಗಳಲ್ಲಿ ವಿಮಾನಗಳನ್ನು ಕಡಿಮೆ ಮಾಡಿರುವ ನಷ್ಟದಲ್ಲಿರುವ ವಿಮಾನಯಾನ ಸಂಸ್ಥೆಯು, ಜೂನ್-ಆಗಸ್ಟ್ ಅವಧಿಯಲ್ಲಿ ಸೇವೆಗಳ ತರ್ಕಬದ್ಧಗೊಳಿಸುವಿಕೆ ಜಾರಿಯಲ್ಲಿರುತ್ತದೆ ಎಂದು ಹೇಳಿದೆ.

ಕೆಲವು ಪ್ರದೇಶಗಳಲ್ಲಿ ನಿರಂತರ ವಾಯುಪ್ರದೇಶ ನಿರ್ಬಂಧಗಳು ಮತ್ತು ಅಂತರರಾಷ್ಟ್ರೀಯ ಕಾರ್ಯಾಚರಣೆಗಳಿಗೆ ದಾಖಲೆಯ ಜೆಟ್ ಇಂಧನ ಬೆಲೆ ಸೇರಿದಂತೆ ಇತರ ಅಂಶಗಳು ಕೆಲವು ಯೋಜಿತ ಸೇವೆಗಳ ವಾಣಿಜ್ಯ ಕಾರ್ಯಾಚರಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತಿವೆ ಎಂದು ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಮಾನಯಾನ ಸಂಸ್ಥೆಯು ಪ್ರತಿ ತಿಂಗಳು 1,200 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುವುದನ್ನು ಮುಂದುವರಿಸುತ್ತದೆ. ಇವುಗಳಲ್ಲಿ ಉತ್ತರ ಅಮೆರಿಕಾಕ್ಕೆ ವಾರಕ್ಕೆ 33 ವಿಮಾನಗಳು, ಯುರೋಪ್‌ಗೆ ವಾರಕ್ಕೆ 47 ವಿಮಾನಗಳು, ಯುಕೆಗೆ ವಾರಕ್ಕೆ 57 ವಿಮಾನಗಳು, ಆಸ್ಟ್ರೇಲಿಯಾಗೆ ವಾರಕ್ಕೆ ಎಂಟು ವಿಮಾನಗಳು, ದೂರದ ಪೂರ್ವ, ಆಗ್ನೇಯ ಏಷ್ಯಾ ಮತ್ತು ಸಾರ್ಕ್ ಪ್ರದೇಶಗಳಿಗೆ ವಾರಕ್ಕೆ 158 ವಿಮಾನಗಳು ಮತ್ತು ಮಾರಿಷಸ್‌ಗೆ ವಾರಕ್ಕೆ ಏಳು ವಿಮಾನಗಳು ಸೇರಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!