VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ Online Desk
ವೃತ್ತಿ & ಉದ್ಯೋಗ ಅವಕಾಶಗಳು

VAO ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿದ KEA

ಕಂದಾಯ ಇಲಾಖೆಯು ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ KEA ಮೂಲಕ ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಸಲು ಜುಲೈ 30, 2026 ಅನ್ನು ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಆದ್ರೆ, ಇದೀಗ ಅರ್ಜಿ ಸಲ್ಲಿಸಲು ಆಗಸ್ಟ್ 07, 2026ರವರೆಗೆ ವಿಸ್ತರಿಸಿ ಆದೇಶಿಸಿದೆ.

ಬೆಂಗಳೂರು: ಹಲವು ವರ್ಷಗಳ ನಂತರ ಕರ್ನಾಟಕ ಸರ್ಕಾರವು 72,186 ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಪ್ರಾಧಿಕಾರಗಳಾದ KPSC ಮತ್ತು KEA ಮೂಲಕ ನೇಮಕಾತಿ ನಡೆಸಲು ಮುಂದಾಗಿದೆ. ಅದರಂತೆ, ಒಟ್ಟು 750 ಹುದ್ದೆಗಳ ಭೂಮಾಪಕರು, 945 ಕೃಷಿ ಅಧಿಕಾರಿಗಳು, ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2,403+ ಹುದ್ದೆಗಳು ಜೊತೆಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 7,900ಕ್ಕೂ ಹೆಚ್ಚು ವಿವಿಧ ಹುದ್ದೆಗಳ ಬೃಹತ್ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿದೆ.

ಇದರೊಂದಿಗೆ, ಕಂದಾಯ ಇಲಾಖೆಯು ಖಾಲಿ ಇರುವ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳಿಗೆ KEA ಮೂಲಕ ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಸಲು ಜುಲೈ 30, 2026 ಅನ್ನು ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಆದ್ರೆ, ಇದೀಗ ಅರ್ಜಿ ಸಲ್ಲಿಸಲು ಆಗಸ್ಟ್ 07, 2026ರವರೆಗೆ ವಿಸ್ತರಿಸಿ ಆದೇಶಿಸಿದೆ. ಇದರೊಂದಿಗೆ, ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್ 10, 2026ರವರೆಗೆ ಕೊನೆಯ ದಿನಾಂಕವನ್ನ ವಿಸ್ತರಿಸಿದೆ.

ಮುಂದುವರೆದು, ಈ ನೇಮಕಾತಿಯಲ್ಲಿ ಕರ್ನಾಟಕ ಸರ್ಕಾರ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಅದರಲ್ಲಿ 67 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಹಾಗೂ 505 ಹುದ್ದೆಗಳನ್ನು ಉಳಿದ ಮೂಲ ವೃಂದಕ್ಕೆ ನೀಡಲಾಗಿದೆ. ಇನ್ನು, ದ್ವಿತೀಯ ಪಿಯುಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವವರು ಅರ್ಜಿ ಸಲ್ಲಿಸಬಹುದು.

ಏತನ್ಮಧ್ಯೆ, 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಧಿಸೂಚನೆ, ಅರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ, ವೇತನ, ಲಿಖಿತ ಪರೀಕ್ಷೆ ನಡೆಯುವ ದಿನಾಂಕ ಸೇರಿದಂತೆ ಹಲವು ಮಾಹಿತಿಗಳಿಗಾಗಿ ಈ ಕೆಳಗಿನ ಲಿಂಕ್ ನೋಡಿ:

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇತರರ ಪ್ರಭಾವಕ್ಕೆ ಒಳಗಾಗಿ ಹಾಗೆ ಮಾತನಾಡಿದೆ, ಕ್ಷಮಿಸಿ': ದೆಹಲಿ ಪ್ರತಿಭಟನೆಯಲ್ಲಿ PM ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಾಲಕಿ-Video

'ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ'-Video

'ದೇಶವನ್ನೇ ಕ್ಷಮಿಸಿದ ನರೇಂದ್ರ ಮೋದಿ: ಪ್ರಧಾನಿಯ ಹೊಸ ವಿಡಿಯೋ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ!

ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ; ಮೂವರು ಸಾವು! ಹಲವು ಜಿಲ್ಲೆಗಳಿಗೆ IMD 'ರೆಡ್ ಅಲರ್ಟ್' ಘೋಷಣೆ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!