ಅರಣ್ಯ ವೀಕ್ಷಕ Online Desk
ವೃತ್ತಿ & ಉದ್ಯೋಗ ಅವಕಾಶಗಳು

ಪರೀಕ್ಷೆ ಇಲ್ಲದೆ ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಕೆಲಸ; 10th ಪಾಸಾದವರಿಂದ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆ 750 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೇವಲ 10ನೇ ತರಗತಿ ಪಾಸಾದವರೂ ಕೂಡ ಮೂಲಕ ಅರ್ಜಿ ಸಲ್ಲಿಸಬಹುದು. ಆ ಕುರಿತ ವರದಿ ಇಲ್ಲಿದೆ:

KFD Recruitment 2026: ಪದವಿ ಇಲ್ಲ, PU ಕೂಡ ಓದಿಲ್ಲ, ಆದರೂ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವವರಿಗೆ ಕರ್ನಾಟಕ ಅರಣ್ಯ ಇಲಾಖೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಹೌದು, 750 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೇವಲ 10ನೇ ತರಗತಿ ಪಾಸಾದವರೂ ಕೂಡ ಮೂಲಕ ಅರ್ಜಿ ಸಲ್ಲಿಸಬಹುದು. ಆ ಕುರಿತ ವರದಿ ಇಲ್ಲಿದೆ:

ಹುದ್ದೆಯ ವಿವರ:

ಒಟ್ಟು 750 ಅರಣ್ಯ ವೀಕ್ಷಕ (Forest Watcher) ಹುದ್ದೆ

  • ಮೈಸೂರು ವಲಯ: 75 ಹುದ್ದೆಗಳು

  • ಮಂಗಳೂರು ವಲಯ: 55 ಹುದ್ದೆಗಳು

  • ಕೊಡಗು (ಮಡಿಕೇರಿ) ವಲಯ: 70 ಹುದ್ದೆಗಳು

  • ಶಿವಮೊಗ್ಗ ವಲಯ: 80 ಹುದ್ದೆಗಳು

  • ಬೆಂಗಳೂರು ವಲಯ: 65 ಹುದ್ದೆಗಳು

  • ಉತ್ತರ ಕನ್ನಡ (ಶಿರಸಿ) ವಲಯ: 60 ಹುದ್ದೆಗಳು

  • ಚಾಮರಾಜನಗರ ವಲಯ: 85 ಹುದ್ದೆಗಳು

  • ಚಿಕ್ಕಮಗಳೂರು ವಲಯ: 60 ಹುದ್ದೆಗಳು

  • ಹಾಸನ ವಲಯ: 45 ಹುದ್ದೆಗಳು

  • ಬಳ್ಳಾರಿ ವಲಯ: 40 ಹುದ್ದೆಗಳು

  • ಬೆಳಗಾವಿ ವಲಯ: 50 ಹುದ್ದೆಗಳು

  • ಕಲಬುರಗಿ ವಲಯ: 35 ಹುದ್ದೆಗಳು

  • ಧಾರವಾಡ ವಲಯ: 30 ಹುದ್ದೆಗಳು

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 1, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 31, 2026

  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಸೆಪ್ಟೆಂಬರ್ 2, 2026

ಸಂಬಳ:

₹29,600 ರಿಂದ ₹52,800

ಅರ್ಹತೆ:

  • ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಕಡ್ಡಾಯವಾಗಿ SSLC ಉತ್ತೀರ್ಣರಾಗಿರಬೇಕು.

  • ವಯೋಮಿತಿ: ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 40 ವರ್ಷ ಹಾಗೂ ಮೀಸಲಾತಿ ವರ್ಗದವರಿಗೆ ನಿಯಮಾನುಸಾರ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಾದ ಕರ್ನಾಟಕ ಅರಣ್ಯ ಇಲಾಖೆ (aranya.gov.in) ಅಥವಾ KFD ನೇಮಕಾತಿ ಪೋರ್ಟಲ್ (https://kfdrecruitment.in/) ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಆಯ್ಕೆ ವಿಧಾನ:

  • ಈ ಹುದ್ದೆಗಳಿಗೆ ಯಾವುದೇ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುವುದಿಲ್ಲ.

  • SSLC ಅಂಕಗಳ ಮೆರಿಟ್ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

  • ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆ (Physical Test).

  • ವೈದ್ಯಕೀಯ ತಪಾಸಣೆ ಮತ್ತು ಮೂಲ ದಾಖಲಾತಿಗಳ ಪರಿಶೀಲನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ