ಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ವೃತ್ತಿ & ಉದ್ಯೋಗ ಅವಕಾಶಗಳು

ರಾಜ್ಯದ ವಸತಿ ಶಾಲೆಗಳಲ್ಲಿ 3,409 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ!

ನೇರ ನೇಮಕಾತಿ ಹುದ್ದೆಗಳು – 1,469, ಹಂಗಾಮಿ/ಅತಿಥಿ ಶಿಕ್ಷಕರು ಮತ್ತು ಸಿಬ್ಬಂದಿ – 1,940 ಒಟ್ಟು ಹುದ್ದೆಗಳು – 3,409 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ವಸತಿ ಶಾಲೆಗಳು, ಕಾಲೇಜುಗಳು ಹಾಗೂ ಆಡಳಿತ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3,409 ಹುದ್ದೆಗಳನ್ನು ನೇರ ನೇಮಕಾತಿ ಮತ್ತು ಹಂಗಾಮಿ/ಅತಿಥಿ ಆಧಾರದ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸರ್ಕಾರದ ಆದೇಶದ ಪ್ರಕಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳು, ಮೋರಾರ್ಜಿ ದೇಸಾಯಿ ವಸತಿ ಶಾಲೆಗಳು, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು ಹಾಗೂ ವಿವಿಧ ವಸತಿ ನಿಲಯಗಳಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ನೇರ ನೇಮಕಾತಿ ಹುದ್ದೆಗಳು – 1,469, ಹಂಗಾಮಿ/ಅತಿಥಿ ಶಿಕ್ಷಕರು ಮತ್ತು ಸಿಬ್ಬಂದಿ – 1,940 ಒಟ್ಟು ಹುದ್ದೆಗಳು – 3,409 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಯಾವ ಹುದ್ದೆಗಳು ಭರ್ತಿಯಾಗಲಿವೆ? ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಪದವಿ ಪೂರ್ವ ಕಾಲೇಜು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಕಲಾ ಶಿಕ್ಷಕರು, ವಿಜ್ಞಾನ ಶಿಕ್ಷಕರು, ಹಿಂದಿ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು, ಗಣಿತ ಶಿಕ್ಷಕರು, ಇತಿಹಾಸ, ಅರ್ಥಶಾಸ್ತ್ರ, ವಾಣಿಜ್ಯ ಹಾಗೂ ಇತರೆ ವಿಷಯಗಳ ಉಪನ್ಯಾಸಕರು, ಅಡುಗೆ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳು

ನೇಮಕಾತಿ ಹೇಗೆ ನಡೆಯಲಿದೆ? ಸರ್ಕಾರದ ಆದೇಶದಂತೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಮೂಲಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುತ್ತದೆ. ಹಂಗಾಮಿ/ಅತಿಥಿ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ಇಲಾಖೆಯ ಮಾರ್ಗಸೂಚಿಯಂತೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಮೋರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಿಗೆ 800 ಹುದ್ದೆಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2,050 ಹುದ್ದೆಗಳು, ಹಾಗೂ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆಗಳಿಗೆ ಪ್ರತ್ಯೇಕ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ.

ಅಕ್ರಮವಾಗಿ ಮಸೀದಿಗಳಲ್ಲಿ SIR: ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು; ವಿಡಿಯೋ ರಿಲೀಸ್‌

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!

Voter ID, PAN.. ಪೌರತ್ವ ಸಾಬೀತಿಗೆ ಸಲ್ಲಿಸಿದ್ದ 16 ದಾಖಲೆಗಳನ್ನೂ ತಿರಸ್ಕರಿಸಿದ ಹೈಕೋರ್ಟ್: ನ್ಯಾಯಾಧೀಶರು ಹೇಳಿದ್ದೇನು?

ಗೃಹ ಜ್ಯೋತಿ ಪರಿಶೀಲನೆ: ಜಾತಿ ಪ್ರಮಾಣ ಪತ್ರ ಕಡ್ಡಾಯನಾ? ಸ್ಪಷ್ಟನೆ ಕೊಟ್ಟ ಬೆಸ್ಕಾಂ!

Good News: ಪತ್ನಿಯ ಮೊಣಕಾಲು ನೋವಿಗೆ ಪರಿಹಾರ, ಮನೆಯಲ್ಲೇ ಎಸ್ಕಲೇಟರ್ ನಿರ್ಮಿಸಿದ ಆಂಧ್ರಪ್ರದೇಶದ ಮೆಕಾನಿಕ್ ರೈತ, Video