Job Online Desk
ವೃತ್ತಿ & ಉದ್ಯೋಗ ಅವಕಾಶಗಳು

KFWCCF ನೇಮಕಾತಿ 2026: ಅರಣ್ಯ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆಯೆ ನೇರ ಕೆಲಸ; ₹70,000 ಸಂಬಳ!

KFWCCF ಬೆಂಗಳೂರಿನಲ್ಲಿ ಖಾಲಿ ಇರುವ PRO ಹುದ್ದೆಯ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹70,000 ಸಂಬಳ ಸಿಗಲಿದೆ. ಆ ಕುರಿತ ವರದಿ ಇಲ್ಲಿದೆ.

KFWCCF PRO Recruitment 2026: ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಒಂದು ಉತ್ತಮ ಅವಕಾಶ ಎದುರಾಗಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನವು (KFWCCF) ತನ್ನ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಸಾರ್ವಜನಿಕ ಸಂಪರ್ಕಾಧಿಕಾರಿ (Public Relation Officer) ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ.

ಹುದ್ದೆಯ ಸಂಪೂರ್ಣ ವಿವರ:

  • ಹುದ್ದೆಯ ಹೆಸರು: ಸಾರ್ವಜನಿಕ ಸಂಪರ್ಕಾಧಿಕಾರಿ (PRO)

  • ಒಟ್ಟು ಹುದ್ದೆಗಳು: 01

  • ಕೆಲಸದ ಸ್ಥಳ: ಬೆಂಗಳೂರು

  • ಮಾಸಿಕ ವೇತನ: ₹70,000

  • ನೇಮಕಾತಿ ಅವಧಿ: ಒಪ್ಪಂದದ ಆಧಾರದ ಮೇಲೆ 2 ವರ್ಷ

ಅರ್ಹತೆ ಮತ್ತು ಆಯ್ಕೆ ವಿಧಾನ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಅಥವಾ ತತ್ಸಮಾನ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ನೇಮಕಾತಿಗೆ ಯಾವುದೇ ರೀತಿಯ ಸ್ಪರ್ಧಾತ್ಮಕ ಅಥವಾ ಲಿಖಿತ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ. ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತರು ಆಫ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಿ, ಅಗತ್ಯವಿರುವ ವಿದ್ಯಾರ್ಹತೆ ಹಾಗೂ ವೃತ್ತಿಪರ ಅನುಭವದ ಸ್ವಯಂ-ದೃಢೀಕೃತ ದಾಖಲೆಗಳನ್ನು ಲಗತ್ತಿಸಬೇಕು. ನಂತರ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಹಾಕಿ, ಅದರ ಮೇಲೆ 'Application for the Position of PRO' ಎಂದು ಸ್ಪಷ್ಟವಾಗಿ ಬರೆದು ಕೆಳಗಿನ ವಿಳಾಸಕ್ಕೆ ಪೋಸ್ಟ್ ಮೂಲಕ ಅಥವಾ ಖುದ್ದಾಗಿ ತಲುಪಿಸಬೇಕಾಗಿ ವಿನಂತಿ.

Job

ಅರ್ಜಿ ಸಲ್ಲಿಸಬೇಕಾದ ವಿಳಾಸ:

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ ಮುಖ್ಯಸ್ಥರು), ಅರಣ್ಯ ಭವನ, 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು - 560 003.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ದಾಳಿ: 4 ಭಾರತೀಯರು ಸಾವು, ಭಾರತ ತೀವ್ರ ಖಂಡನೆ!

CJP Protest LIVE Updates | ಸಂಸತ್ತಿನಲ್ಲೂ ಮಾರ್ಧನಿಸಿದ CJP ಪ್ರತಿಭಟನೆ, ಉಭಯ ಸದನಗಳ ಕಲಾಪ ಮುಂದೂಡಿಕೆ, Abhijeet Dipke ಬಂಧಿಸಿಲ್ಲ ಎಂದ ದೆಹಲಿ ಪೊಲೀಸ್

ಫುಟ್‌ಬಾಲ್ ವಿಶ್ವಕಪ್ ಫೈನಲ್ ಗಲಾಟೆ: ಅರ್ಜೆಂಟೀನಾ ಆಟಗಾರರ ವರ್ತನೆಗೆ ಆಕ್ರೋಶ, ತನಿಖೆಗೆ ಮುಂದಾದ FIFA

ಮೊದಲ ಡೆಂಗ್ಯೂ ಲಸಿಕೆಗೆ ಭಾರತ ಅನುಮೋದನೆ: WHO ಶಿಫಾರಸು ಮಾಡಿರುವ ಲಸಿಕೆನ ಯಾರ್ಯಾರು ಪಡೆಯಬಹುದು!

ರಾಮಾಯಣ ಟ್ರೇಲರ್‌ನ ಮೊದಲ ವಿಮರ್ಶೆ: ರಾವಣನಾಗಿ ಯಶ್ ಅವತಾರಕ್ಕೆ ನಿರ್ದೇಶಕ ಅಟ್ಲಿ ಹೇಳಿದ್ದೇನು?