ಸಿನಿಮಾ

ಚಾಮರಾಜನಗರ:ಕೊಲೆ ಪ್ರಕರಣದಲ್ಲಿ ಕೆಜಿಎಫ್ ಸಿನಿಮಾ ಸ್ಟಂಟ್ ಮ್ಯಾನ್ ಬಂಧನ

Shilpa D

ಚಾಮರಾಜನಗರ: ವ್ಯಕ್ತಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಫ್ ಸಿನಿಮಾದಲ್ಲಿ ಸ್ಟಂಟ್ ಮ್ಯಾನ್ ಆಗಿ ನಟಿಸಿದ್ದ ರಘು ಎಂಬಾತನನ್ನು ಪೊಲೀಸಲು ಬಂಧಿಸಿದ್ದಾರೆ.

ಐದು ದಿನಗಳ ಹಿಂದೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ನಿಟ್ರೆಬಳಿ ಕಾರಿನಲ್ಲಿ ಸುಟ್ಟ ಶವವೊಂದು ಪತ್ತೆಯಾಗಿತ್ತು,. ಪ್ರಕರಣ ಬೇಧಿಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಚಾಮರಾಜನಗರದ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಂಗಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಅಂಬೇಡ್ಕರ್ ಕಾಲೊನಿಯ ಬಸವರಾಜೇಶ್ವರಿ,ಅಣ್ಣೂರ್ ಕೇರಿಯ ರಘು, ಮತ್ತು ಕೆಜಿಎಫ್ ಸೇರಿ 10 ಸಿನಿಮಾಗಳಲ್ಲಿ ಸ್ಟಂಟ್ ಮ್ಯಾನ್ ಆಗಿ ಕೆಲಸ ಮಾಡಿದ್ದ  ರಘು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ,

ಈತನೇ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ, ಕೊಲೆಯಾದ ವ್ಯಕ್ತಿ ಬಸವರಾಜೇಶ್ವರಿ ಸೇರಿದಂತೆ ಹಲವು ಮಹಿಳೆಯರ ಜೊತೆ ಅನೈತಿಕ ಸಂಬಂಧ ಹೊಂದಿದ್ದನು. ಬಸವರಾಜೇಶ್ವರಿಯ ಖಾಸಗಿ ಫೋಟೋಗಳನ್ನು ತೆಗೆದುಕೊಂಡಿದ್ದ ಆತ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ವಿಷಯ ರಘುಗೆ ತಿಳಿಯಿತು, ಆತನನ್ನು ಕೊಲೆ ಮಾಡಲು ಸಂಚು ರೂಪಿಸಿದ. ರಂಗಸ್ವಾಮಿ ಮೇಲೆ ಹಲ್ಲೆ ಮಾಡಿ ನಂತರ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ ಎಂದು ಚಾಮರಾಜನಗರ ಎಸ್ ಪಿ ಆನಂದ್ ಕುಮಾರ್ ತಿಳಿಸಿದ್ದಾರೆ.

SCROLL FOR NEXT