ರಶ್ಮಿಕಾ ಮಂದಣ್ಣ 
ಸಿನಿಮಾ

ಮೈಸೂರಿನಲ್ಲಿ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ದಾಖಲೆ ಸಲ್ಲಿಸಿದ ರಶ್ಮಿಕಾ ಮಂದಣ್ಣ

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಮಂಗಳವಾರ ಮೈಸೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಮೈಸೂರು: ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಮಂಗಳವಾರ ಮೈಸೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿನ ನಟಿಯ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ನಂತರ, ವಿಚಾರಣೆಗಾಗಿ ಇಲಾಖೆಯ ಮುಂದೆ ಹಾಜರಾಗುವಂತೆ ರಶ್ಮಿಕಾ ಹಾಗೂ ಅವರ ಕುಟುಂಬಕ್ಕೆ ಸೂಚಿಸಿದ್ದರು. ಅಲ್ಲದೆ
ರಶ್ಮಿಕಾ ಮನೆಯಿಂದ ಆದಾಯ ತೆರಿಗೆ ಅಧಿಕಾರಿಗಳು ಅನೇಕ ದಾಖಲೆಗಳನ್ನು ವಶಪಡಿಸಿಕೊಂಡು, ನಿಯಮಾವಳಿಯಂತೆ ವಿವರಣೆಯನ್ನು ಕೋರಿದ್ದರು.

ಈ ಹಿನ್ನೆಲೆಯಲ್ಲಿ ರಶ್ಮಿಕಾ ಅವರು ಇಂದು ತಮ್ಮ ತಂದೆ ಮದನ್ ಮಂದಣ್ಣ ಅವರೊಂದಿಗೆ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ, ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಕನ್ನಡ ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿರುವ ರಶ್ಮಿಕಾ ಮಂದಣ್ಣ ಅವರು, ಇತ್ತೀಚೆಗೆ ಬಿಡುಗಡೆಯಾಗಿರುವ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಟಾಲಿವುಡ್ ನ ಖ್ಯಾತ ನಟ ಮಹೇಶ್ ಬಾಬು ಜತೆ ನಟಿಸಿದ್ದರು. ಈ ಮೂಲಕ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರೆನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT