ಅರ್ಪಿತಾ-ಆಯುಶ್ ಶರ್ಮಾ-ಸಲ್ಮಾನ್ ಖಾನ್ 
ಬಾಲಿವುಡ್

ಸಲ್ಲು ತಂಗಿ ಮದುವೆಗೆ ಸಾಕ್ಷಿಯಾಗಲಿದ್ದಾರೆ 300 ವಿಐಪಿಗಳು

ಖ್ಯಾತ ಸಿನಿಮಾ ತಾರೆಯರು...

ನವೆಂಬರ್ 18ರಂದು ಹೈದರಾಬಾದಿನಲ್ಲಿ ಅದ್ದೂರಿ ಮದುವೆ

ಮುಂಬೈ:
ಖ್ಯಾತ ಸಿನಿಮಾ ತಾರೆಯರು, ಕ್ರೀಡಾ ತಾರೆಯರು, ಖ್ಯಾತ ರಾಜಕಾರಣಿಗಳು ಹಾಗೂ ಉದ್ಯಮಿಗಳು ಸೇರಿದಂತೆ ಸುಮಾರು 300 ವಿಐಪಿಗಳು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಸಹೋದರಿ ಅರ್ಪಿತಾ ಖಾನ್ ಅವರ ಮದುವೆಗೆ ಸಾಕ್ಷಿಯಾಗಲಿದ್ದಾರೆ.

ನವೆಂಬರ್ 18ರಂದು ಹೈದರಾಬಾದ್‌ನ ಪಂಚತಾರಾ ಹೋಟೆಲ್‌ನಲ್ಲಿ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂಗಿ ಅರ್ಪಿತಾ ಖಾನ್ ಅವರು ತಮ್ಮ ಬಹುಕಾಲದ ಗೆಳೆಯ ಆಯುಶ್ ಶರ್ಮಾ ಅವರೊಂದಿಗೆ ಮದುವೆಯಾಗುತ್ತಿದ್ದಾರೆ.

ಅದ್ಧೂರಿ ಮದುವೆಗಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮದುವೆ ಆಗಮಿಸುವ ಅತಿಥಿಗಳಿಗಾಗಿ ತಾಜ್ ಗ್ರೂಪ್‌ಗೆ ಸೇರಿದ ತಾಜ್ ಫಲಕ್ನುಮಾ ಹೋಟೆಲ್ ಎಲ್ಲಾ ರೂಮ್‌ಗಳನ್ನು ನಟನ ಕುಟುಂಬ ಬುಕ್ ಮಾಡಿದೆ.

ಸಲ್ಮಾನ್ ಖಾನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಖುದ್ದು ಭೇಡಿ ಮಾಡಿ, ಆಹ್ವಾನ ನೀಡಿದ್ದಾರೆ. ಆದರೆ ಪ್ರಧಾನಿ ವಿದೇಶ ಪ್ರವಾಸದಲ್ಲಿರುವುದರಿಂದ ನಟ ತಂಗಿಯ ಮದುವೆಗೆ ಆಗಮಿಸುತ್ತಿಲ್ಲ. ಇನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಸಲ್ಲು ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೂ ಅವರು ಮದುವೆಗೆ ಬರುತ್ತಿಲ್ಲ ಎನ್ನಲಾಗಿದೆ.

ಬಾಲಿವುಡ್ ಮೆಗಾಸ್ಟಾರ್‌ಗಳಾದ ಅಮಿತಾಭ್ ಬಚ್ಚನ್ ಹಾಗೂ ಶಾರುಖಾನ್ ಅವರಿಗೂ ಆಹ್ವಾನ ನೀಡಲಾಗಿದೆ. ಬಿಗ್ ಬಿ ಅವರು ಮದುವೆಗೆ ತೆರಳುವುದನ್ನು ಖಚಿತಪಡಿಸಿಲ್ಲ. ಆದರೆ ಶಾರುಖಾನ್ ಮತ್ತು ಪತ್ನಿ ಗೌರಿ ಖಾನ್ ಅರ್ಪಿತಾ ಮದುವೆಗೆ ಸಾಕ್ಷಿಯಾಗಲಿದ್ದಾರೆ ಎನ್ನಲಾಗಿದೆ.

ಬಾಲಿವುಡ್ ತಾರೆಯರಾದ, ಅಮಿರ್ ಖಾನ್, ಕತ್ರಿನಾ ಕೈಫ್, ಹೃತಿಕ್ ರೋಷನ್, ದೀಪಿಕಾ ಪಡುಕೋಣೆ, ಸೈಫ್ ಅಲಿಖಾನ್ ಮತ್ತು ಪತ್ನಿ ಕರೀನಾ ಕಪೂರ್, ಧರ್ಮೇಂದ್ರ, ಹೇಮಾ ಮಾಲಿನಿ, ಕರಣ್ ಜೋಹರ್ ಸೇರಿದಂತೆ ಹಲವು ಬಾಲಿವುಡ್ ನಟಿಯರು ಮದುವೆಯಲ್ಲಿ ಭಾಗವಹಿಸುವುದಾಗಿ ಖಚಿತಪಡಿಸಿದ್ದಾರೆ.

ತೆಲುಗು ಸೂಪರ್ ಸ್ಟಾರ್ ಹಾಗೂ ಮಾಜಿ ಕೇಂದ್ರ ಸಚಿವ ಚಿರಂಜೀವಿ ಹಾಗೂ ಪುತ್ರ ರಾಮಚರಣ್ ತೇಜ್, ನಾಗಾರ್ಜುನ್, ವೆಂಕಟೇಶ್ ಸೇರಿದಂತೆ 300ಕ್ಕು ಹೆಚ್ಚು ವಿಐಪಿಗಳು ಮದುವೆಗೆ ಆಗಮಿಸಲಿದ್ದಾರೆ.

ಇನ್ನು ಉದ್ಯಮಿಗಳ ಸಾಲಿನಲ್ಲಿ ರಿಲಯನ್ಸ್, ಅದಾನಿ ಸಂಸ್ಥೆಗಳು ಸೇರಿದಂತೆ ಹಲವು ಖ್ಯಾತ ನಾಮ ಉದ್ಯಮಿಗಳಿಗೆ ಆಹ್ವಾನ ನೀಡಲಾಗಿದೆ. ಕ್ರೀಡಾ ಕ್ಷೇತ್ರದ ಪಟ್ಟಿಯಲ್ಲಿ ದೊಡ್ಡ ದೊಡ್ಡ ಹೆಸರುಗಳೇ ಇದ್ದು, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಮಿಲ್ಕಾಸಿಂಗ್, ಕಪಿಲ್ ದೇವ್ ಸೇರಿದಂತೆ ಹಲವು ಖ್ಯಾತ ಕ್ರೀಡಾಳುಗಳಿಗೆ ಆಹ್ವಾನ ಪತ್ರಿಕೆ ರವಾನೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT