ಅನುರಾಗ್ ಕಶ್ಯಪ್ ಮತ್ತು ರಾಧಿಕಾ ಆಪ್ಟೆ 
ಬಾಲಿವುಡ್

ರಾಧಿಕಾ ಆಪ್ಟೆ ಹಸಿಬಿಸಿ ದೃಶ್ಯಕ್ಕೆ ನಾನೇ ಹೊಣೆ ಎಂದ ಅನುರಾಗ್ ಕಶ್ಯಪ್

ಅಂತರ್ಜಾಲದಲ್ಲಿ ನಗ್ನ ಚಿತ್ರಗಳು ಬಿಡುಗಡೆಗೊಳಿಸಿ ವಿವಾದ ಸೃಷ್ಟಿಸಿದ್ದ ಬಾಲಿವುಡ್ ಹಾಟ್ ನಟಿ ರಾಧಿಕಾ ಆಪ್ಟೆ, ಇದೀಗ ಮತ್ತೆ ಸುದ್ದಿಗೆ ಬಂದಿದ್ದಾರೆ...

ಮುಂಬೈ: ಅಂತರ್ಜಾಲದಲ್ಲಿ ನಗ್ನ ಚಿತ್ರಗಳು ಬಿಡುಗಡೆಗೊಳಿಸಿ ವಿವಾದ ಸೃಷ್ಟಿಸಿದ್ದ ಬಾಲಿವುಡ್ ಹಾಟ್ ನಟಿ ರಾಧಿಕಾ ಆಪ್ಟೆ, ಇದೀಗ ಮತ್ತೆ ಸುದ್ದಿಗೆ ಬಂದಿದ್ದಾರೆ.

ಈ ಬಾರಿ ರಾಧಿಕಾ ಆಪ್ಟೆ ನಟಿಸಿದ್ದ ಶಾರ್ಟ್ ಫಿಲ್ಮ್ ಚಿತ್ರದ ಹಾಟ್ ಚಿತ್ರಗಳು ವಾಟ್ಸ್ ಆಪ್ ನಲ್ಲಿ ಲೀಕ್ ಆಗಿರುವುದು ಚಿತ್ರದ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಕೆಂಗಣ್ಣಿಗೆ ಕಾರಣವಾಗಿದೆ. ಕೆಲವು ತಿಂಗಳ ಹಿಂದಷ್ಟೇ 20 ನಿಮಿಷದ ಕಿರುಚಿತ್ರವೊಂದಕ್ಕೆ ಕಶ್ಯಪ್ ರಾಧಿಕಾ ಆಪ್ಟೆಯವರ ನಗ್ನ ದೃಶ್ಯಗಳನ್ನು ಚಿತ್ರೀಕರಿಸಿದ್ದರು.

ಈ ಕಿರು ಚಿತ್ರವನ್ನು ಅಂತರಾಷ್ಟ್ರೀಯ ಮಾರುಕಟ್ಟೆಗೆ ಮಾತ್ರ ಸೀಮಿತವಾಗಿರಿಸಿ ಚಿತ್ರೀಕರಣ ನಡೆಸಲಾಗಿತ್ತು. ಚಿತ್ರೀಕರಣ ಬಹಳ ಸೂಕ್ಷ್ಮದ ವಿಚಾರವಾಗಿದ್ದರಿಂದ ಕಿರು ಚಿತ್ರದ ಚಿತ್ರೀಕರಣವನ್ನು ಕೇವಲ ಮಹಿಳಾ ಸಿಬ್ಬಂದಿಯನ್ನೇ ಬಳಸಿ ಚಿತ್ರೀಕರಣ ನಡೆಸಲಾಗಿತ್ತು. ಈ ಕಿರುಚಿತ್ರದ ದೃಶ್ಯಗಳ ಚಿತ್ರೀಕರಣಕ್ಕೆ ಸಾಕಷ್ಟು ಹರಸಾಹಸ ಪಡಬೇಕಾಗಿತ್ತು. ಕಳೆದೊಂದು ತಿಂಗಳ ಹಿಂದಷ್ಟೇ ಈ ಚಿತ್ರವನ್ನು ನ್ಯೂಯಾರ್ಕ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಆದರೆ ಇದಕ್ಕೂ ಮುನ್ನವೇ ಈ ಚಿತ್ರ ಭಾರತದ ಅಂತರ್ಜಾಲದಲ್ಲಿ ಹರಿದಾಡತೊಡಗಿದೆ ಎಂದು ಕಶ್ಯಪ್ ವಿಷಾದವ್ಯಕ್ತಪಡಿಸಿದ್ದಾರೆ.

ಅಲ್ಲದೆ, ರಾಧಿಕಾ ಆಪ್ಟೆ ಅವರ ಬೆಂಬಲಕ್ಕೆ ನಿಂತಿರುವ ಕಶ್ಯಪ್, ಚಿತ್ರದಲ್ಲಿರುವ ಹಸಿಬಿಸಿ ದೃಶ್ಯಕ್ಕೆ ತಾವೇ ಹೊಣೆ ಎಂದು ಹೇಳಿದ್ದಾರೆ. ಚಿತ್ರದ ಸೋರಿಕೆ ಬಹಳ ಬೇಸರ ತಂದಿದ್ದು, ಈ ಕುರಿತಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಕಶ್ಯಪ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT