ಶಾರೂಖ್ ಖಾನ್(ಸಂಗ್ರಹ ಚಿತ್ರ) 
ಬಾಲಿವುಡ್

ವಿವಾದಗಳು ಸಿನಿಮಾ ಮೇಲೆ ಪರಿಣಾಮ ಬೀರುವುದಿಲ್ಲ: ಶಾರೂಖ್ ಖಾನ್

ದಿಲ್ ವಾಲೆ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಬಾಲಿವುಡ್ ನಟ ಶಾರೂಖ್ ಖಾನ್, ವಿವಾದಗಳು ತಮ್ಮ ಸಿನಿಮಾ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟಿದಾರೆ.

ನವದೆಹಲಿ: ಡಿ.18 ಕ್ಕೆ ಬಿಡುಗಡೆಯಾಗುತ್ತಿರುವ 'ದಿಲ್ ವಾಲೆ' ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಬಾಲಿವುಡ್ ನಟ ಶಾರೂಖ್ ಖಾನ್, ವಿವಾದಗಳು ತಮ್ಮ ಸಿನಿಮಾ ಮೇಲಾಗಲಿ ಅಥವಾ ತಮ್ಮ ವರ್ಚಸ್ಸಿನ ಮೇಲಾಗಲಿ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯಪಟ್ಟಿದಾರೆ.
ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಇತ್ತೀಚೆಗೆ ಶಾರೂಖ್ ಖಾನ್ ನೀಡಿದ್ದ ಹೇಳಿಕೆಗೆ ಅಕ್ರೋಶಗೊಂಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್), ಶುಕ್ರವಾರ ಬಿಡುಗಡೆಯಾಗಲಿರುವ ಶಾರೂಖ್ ಖಾನ್ ಚಿತ್ರವನ್ನು ವೀಕ್ಷಿಸದಂತೆ ಜನತೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಾರೂಖ್ ಖಾನ್ ತಮ್ಮ ಬಗ್ಗೆ ಕೇಳಿಬಂದಿರುವ ವಿವಾದಗಳು ಸಿನಿಮಾ ಮೇಲೆ ಅಥವಾ ತಮ್ಮ ಕೀರ್ತಿಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.  
ಜನರು ತಾವು ಹೇಳಬೇಕಿರುವುದನ್ನು ಸಾರ್ವಜನಿಕ ವ್ಯಕ್ತಿಗಳ ಮೂಲಕ ವ್ಯಕ್ತಪಡಿಸಲು ಇಚ್ಚಿಸುತ್ತಾರೆ. ಇದೊಂದು ಸಣ್ಣ ವಿಷಯ, ಆದರೆ ಸಾರ್ವಜನಿಕರು ಸೆಲಬ್ರಿಟಿಗಳ ಮೂಲಕ ತಾವು ಹೇಳಬೇಕಿರುವುದನ್ನು ವ್ಯಕಪಡಿಸಿದ ಮೂಲಕ ಸೆಲಬ್ರಿಟಿಗಳು ಇದಕ್ಕೆ ಸ್ಪಷ್ಟೀಕರಣ ನೀಡಬೇಕಾಗುತ್ತದೆ ಎಂದು ಶಾರೂಖ್ ಖಾನ್ ತಿಳಿಸಿದ್ದಾರೆ.
ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಹೇಳಿದ್ದ ಶಾರೂಖ್ ಖಾನ್ ವಿರುದ್ಧ, ಆಕ್ರೋಶಗೊಂಡಿದ್ದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಶಾರೂಖ್ ಖಾನ್ ಅವರ ಭಾಷೆಯನ್ನು ಉಗ್ರ ಹಫೀಜ್ ಭಾಷೆಗೆ ಹೋಲಿಸಿದ್ದರು. ವಿವಾದಗಳು ಸಿನಿಮಾ ಮೇಲೆ ಪರಿಣಾಮ ಬೀರುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿರುವ ಶಾರೂಖ್,  ಕೀರ್ತಿ ಹೆಚ್ಚಾದಂತೆ ವಿವಾದಗಳಲ್ಲಿ ಸಿಲುಕುವ ಅಪಾಯ ಹೆಚ್ಚಾಗುತ್ತದೆ ಎಂದು ಹಲವು ವರ್ಷಗಳ ಹಿಂದೆ ತಮ್ಮ ಹಿತೈಷಿಗಳು ಹೇಳಿದ್ದ ಮಾತನ್ನು ನೆನಪಿಸಿಕೊಂಡಿದ್ದಾರೆ. "ನಾನು ಜನರಿಂದ ಅತಿ ಹೆಚ್ಚು ಪ್ರೀತಿ ಗಳಿಸಿದ್ದೇನೆ, ವಿವಾದಗಳು ಸಿನಿಮಾ ಮೇಲೆ ಪರಿಣಾಮ ಬೀರುವುದಿಲ್ಲ" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT