ಹಿಮಾಲಯ ಪತ್ರಿಕೆಯ ಮುಖಪುಟದಲ್ಲಿ ನಟಿ ಕರೀನಾ ಕಪೂರ್ (ಸಂಗ್ರಹ ಚಿತ್ರ) 
ಬಾಲಿವುಡ್

'ವಿಹೆಚ್‌ಪಿ' ಪತ್ರಿಕೆಯ ಮುಖಪುಟದಲ್ಲಿ ಕರೀನಾ ಫೋಟೋ!

ವಿಶ್ವ ಹಿಂದೂ ಪರಿಷತ್‌ನ ಪತ್ರಿಕೆ 'ಹಿಮಾಲಯ ಧ್ವನಿ'ಯಲ್ಲಿ ಪ್ರಕಟಗೊಂಡಿರುವ ನಟಿ ಕರೀನಾ ಕಪೂರ್...

ನವದೆಹಲಿ: ಇತ್ತೀಚೆಗೆ ಪ್ರಕಟಗೊಂಡ ವಿಶ್ವ ಹಿಂದೂ ಪರಿಷತ್‌ನ ಪತ್ರಿಕೆ 'ಹಿಮಾಲಯ ಧ್ವನಿ'ಯಲ್ಲಿ ಪ್ರಕಟಗೊಂಡಿರುವ ನಟಿ ಕರೀನಾ ಕಪೂರ್ ಅವರ ಭಾವಚಿತ್ರ ಇದೀಗ ಭಾರಿ ಚರ್ಚೆಗೀಡಾಗಿದೆ.

ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವ ಪುನರ್ ಮತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಿಕೆಯಲ್ಲಿ ಕರೀನಾ ಕಪೂರ್ ಅವರ ಭಾವಚಿತ್ರವನ್ನು ಬಳಸಿಕೊಳ್ಳಲಾಗಿತ್ತು. ಕರೀನಾ ಅವರ ಅರ್ಧ ಮುಖ ಮತ್ತು ಬುರ್ಖಾ ಧರಿಸಿರುವ ಮುಸ್ಲಿಂ ಯುವತಿಯ ಅರ್ಧ ಮುಖವನ್ನು ಸೇರಿಸಿ ಒಂದು ಭಾವಚಿತ್ರವನ್ನಾಗಿ ಮಾಡಲಾಗಿತ್ತು. ಇದು ಇದೀಗ ಸುದ್ದಿಗೆ ಗ್ರಾಸವಾಗುತ್ತಿದ್ದು, ಹಿಮಾಲಯ ಧ್ವನಿ ಪತ್ರಿಕೆಯ ಈ ಮುಖಪುಟಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪತ್ರಿಕೆಯಲ್ಲಿ ಹಿಂದೂಪರ ಸಂಘಟನೆಗಳು ಆಯೋಜಿಸಿರುವ 'ಘರ್ ವಾಪಸಿ' ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವರದಿ ಪ್ರಕಟಿಸಲಾಗಿದೆ. ಲವ್ ಜಿಹಾದ್ ಹೆಸರಲ್ಲಿ ಮುಸ್ಲಿಂ ಯುವಕರನ್ನು ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ಹಿಂದೂ ಮಹಿಳೆ ಮತ್ತು ಯುವತಿಯರನ್ನು ಮರುಮಂತಾಂತರದ ಮೂಲಕ ಹಿಂದೂ ಧರ್ಮಕ್ಕೆ ವಾಪಸ್ ಕರೆತರಲಾಗುತ್ತಿದೆ ಎಂದು ಲೇಖನ ಪ್ರಕಟಿಸಲಾಗಿತ್ತು.

ಬಾಲಿವುಡ್ ನಟಿ ಕರೀನಾ ಕಪೂರ್ ಕೂಡ ನಟ ಸೈಫ್ ಅಲಿಖಾನ್ ರನ್ನು ಮದುವೆಯಾಗಿದ್ದಾರೆ. ಆದರೂ ಇಬ್ಬರು ಪರಸ್ಪರ ತಮ್ಮ ಧರ್ಮಗಳನ್ನು ಗೌರವಿಸುತ್ತಿದ್ದು, ಇಬ್ಬರು ತಮ್ಮ-ತಮ್ಮ ಧರ್ಮಗಳನ್ನು ಪಾಲಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಆದರೆ ಇದನ್ನು ಯಾರೂ ಪಾಲನೆ ಮಾಡುತ್ತಿಲ್ಲ ಎನ್ನುವ ಅರ್ಥದಲ್ಲಿ ಕರೀನಾ ಅವರ ಭಾವಚಿತ್ರವನ್ನು ಬಳಸಲಾಗಿದೆ ಎಂದು ವಿಎಚ್‌ಪಿ ಸಮರ್ಥನೆ ನೀಡಿದೆ.

ಸೈಫ್ ಗರಂ..!
ಆದರೆ ವಿಎಚ್‌ಪಿಯ ಹಿಮಾಲಯ ಧ್ವನಿ ಪತ್ರಿಕೆಯಲ್ಲಿ ತಮ್ಮ ಪತ್ನಿ ಕರೀನಾ ಅವರ ಫೋಟೋ ಬಳಸಿಕೊಂಡಿರುವುದಕ್ಕೆ ಸೈಫ್ ಅಲಿಖಾನ್ ಅವರು ಗರಂ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT