ನಟಿ ಪ್ರೀತಿ ಜಿಂಟಾ (ಸಂಗ್ರಹ ಚಿತ್ರ) 
ಬಾಲಿವುಡ್

ಮಹಿಳಾ ಪತ್ರಕರ್ತೆ ವಿರುದ್ಧ ಪ್ರೀತಿ ಕೋಪ..!

ಬಾಲಿವುಡ್ ನಟಿ ಪ್ರೀತಿ ಜಿಂಟಾ ಮಹಿಳಾ ಪತ್ರಕರ್ತೆ ವಿರುದ್ಧ ಕೋಪಗೊಂಡಿದ್ದು, ಖಾಸಗಿ ವಿಚಾರಗಳನ್ನು ತಿಳಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಮುಂಬೈ: ಬಾಲಿವುಡ್ ನಟಿ ಪ್ರೀತಿ ಜಿಂಟಾ ಮಹಿಳಾ ಪತ್ರಕರ್ತೆ ವಿರುದ್ಧ ಕೋಪಗೊಂಡಿದ್ದು, ಖಾಸಗಿ ವಿಚಾರಗಳನ್ನು ತಿಳಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಮುಂಬರುವ ಐಪಿಎಲ್ ಸರಣಿಗಾಗಿ ಮುಂಬೈನಲ್ಲಿ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಹೊಸ ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟಿ ಪ್ರೀತಿ ಜಿಂಟಾ ಪತ್ರಕರ್ತೆಯ ವಿರುದ್ಧ ಕೆಂಡಕಾರಿದರು. ನೆಸ್ ವಾಡಿಯಾ ಮತ್ತು ಪ್ರೀತಿ ಜಿಂಟಾ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕರಾಗಿದ್ದು, ಈಗ ಇಬ್ಬರ ನಡುವೆ ಜಗಳವಾಗಿದೆ.

ಈ ವಿಚಾರಕ್ಕೆ ಸಂಬಂಧಪಟ್ಟ ಪ್ರಶ್ನೆಯನ್ನು ಪತ್ರಕರ್ತೆ ಕೇಳಿದಾಗ ಪ್ರೀತಿ ಕೆಂಡಾ ಮಂಡಲರಾದರು. ಓರ್ವ ಮಹಿಳಾ ಪತ್ರಕರ್ತೆಯಾಗಿ ಎಲ್ಲಿ ಯಾವ ವಿಚಾರವನ್ನು ಕೇಳಬೇಕು ಎಂಬ ಅರಿವು ನಿಮಗಿರಬೇಕು ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಏರ್ಪಡಿಸಲಾಗಿದ್ದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಪ್ರೀತಿ ಜಿಂಟಾ, ಕ್ರೀಡಾಂಗಣದ ಹೊರಗಿನ ವಿಚಾರಗಳು ಯಾವುದೇ ಕಾರಣಕ್ಕೂ ಆಟದ ಮೇಲೆ ಪರಿಣಾಮ ಬೀರಬಾರದು. ಈ ಹಿಂದೆ ಏನಾಗಿತ್ತೋ ಅದು ಗತಿಸಿ ಹೋಗಿದೆ. ಮತ್ತೆ ಅದನ್ನು ಕೆಣಕುವ ಅಗತ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಆ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ. ನಾನು ಕೂಡ ನಿಮ್ಮ ಖಾಸಗಿ ವಿಚಾರಗಳನ್ನು ಪ್ರಶ್ನಿಸಬಹುದು. ಆದರೆ ಅದು ಬೇಕಿಲ್ಲ. ನೀವು ಕೇಳಿದ ವಿಚಾರ ಸರಿ ಇದೆ.

ಆದರೆ ಕೇಳಿದ ರೀತಿ ತಪ್ಪು. ನಾವು ಯಾರನ್ನೇ ಏನೇ ಕೇಳಿದರೂ ಅದನ್ನು ಹೇಗೆ ಪ್ರಶ್ನಿಸಬೇಕು ಎಂಬುದನ್ನು ತಳಿದಿರಬೇಕು. ಮುಖ್ಯವಾಗಿ ಪತ್ರಕರ್ತರು ಈ ಬಗ್ಗೆ ಎಚ್ಚರದಿಂದರಬೇಕು ಎಂದು ಪ್ರೀತಿ ಜಿಂಟಾ ಹೇಳಿದರು. ಇದೇ ವೇಳೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳನ್ನು ನನ್ನ ಬಳಿ ತರಬೇಡಿ ಎಂದೂ ಪ್ರೀತಿ ಹೇಳಿದರು.

ಇದೇ ಸುದ್ದಿಗೋಷ್ಠಿಯಲ್ಲಿ ಭಾರತ ತಂಡದ ಆಟಗಾರ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಕೂಡ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT