ನಟಿ ಪ್ರೀತಿ ಜಿಂಟಾ (ಸಂಗ್ರಹ ಚಿತ್ರ) 
ಬಾಲಿವುಡ್

ಮಹಿಳಾ ಪತ್ರಕರ್ತೆ ವಿರುದ್ಧ ಪ್ರೀತಿ ಕೋಪ..!

ಬಾಲಿವುಡ್ ನಟಿ ಪ್ರೀತಿ ಜಿಂಟಾ ಮಹಿಳಾ ಪತ್ರಕರ್ತೆ ವಿರುದ್ಧ ಕೋಪಗೊಂಡಿದ್ದು, ಖಾಸಗಿ ವಿಚಾರಗಳನ್ನು ತಿಳಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಮುಂಬೈ: ಬಾಲಿವುಡ್ ನಟಿ ಪ್ರೀತಿ ಜಿಂಟಾ ಮಹಿಳಾ ಪತ್ರಕರ್ತೆ ವಿರುದ್ಧ ಕೋಪಗೊಂಡಿದ್ದು, ಖಾಸಗಿ ವಿಚಾರಗಳನ್ನು ತಿಳಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಮುಂಬರುವ ಐಪಿಎಲ್ ಸರಣಿಗಾಗಿ ಮುಂಬೈನಲ್ಲಿ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಹೊಸ ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟಿ ಪ್ರೀತಿ ಜಿಂಟಾ ಪತ್ರಕರ್ತೆಯ ವಿರುದ್ಧ ಕೆಂಡಕಾರಿದರು. ನೆಸ್ ವಾಡಿಯಾ ಮತ್ತು ಪ್ರೀತಿ ಜಿಂಟಾ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕರಾಗಿದ್ದು, ಈಗ ಇಬ್ಬರ ನಡುವೆ ಜಗಳವಾಗಿದೆ.

ಈ ವಿಚಾರಕ್ಕೆ ಸಂಬಂಧಪಟ್ಟ ಪ್ರಶ್ನೆಯನ್ನು ಪತ್ರಕರ್ತೆ ಕೇಳಿದಾಗ ಪ್ರೀತಿ ಕೆಂಡಾ ಮಂಡಲರಾದರು. ಓರ್ವ ಮಹಿಳಾ ಪತ್ರಕರ್ತೆಯಾಗಿ ಎಲ್ಲಿ ಯಾವ ವಿಚಾರವನ್ನು ಕೇಳಬೇಕು ಎಂಬ ಅರಿವು ನಿಮಗಿರಬೇಕು ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಏರ್ಪಡಿಸಲಾಗಿದ್ದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಪ್ರೀತಿ ಜಿಂಟಾ, ಕ್ರೀಡಾಂಗಣದ ಹೊರಗಿನ ವಿಚಾರಗಳು ಯಾವುದೇ ಕಾರಣಕ್ಕೂ ಆಟದ ಮೇಲೆ ಪರಿಣಾಮ ಬೀರಬಾರದು. ಈ ಹಿಂದೆ ಏನಾಗಿತ್ತೋ ಅದು ಗತಿಸಿ ಹೋಗಿದೆ. ಮತ್ತೆ ಅದನ್ನು ಕೆಣಕುವ ಅಗತ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಆ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ. ನಾನು ಕೂಡ ನಿಮ್ಮ ಖಾಸಗಿ ವಿಚಾರಗಳನ್ನು ಪ್ರಶ್ನಿಸಬಹುದು. ಆದರೆ ಅದು ಬೇಕಿಲ್ಲ. ನೀವು ಕೇಳಿದ ವಿಚಾರ ಸರಿ ಇದೆ.

ಆದರೆ ಕೇಳಿದ ರೀತಿ ತಪ್ಪು. ನಾವು ಯಾರನ್ನೇ ಏನೇ ಕೇಳಿದರೂ ಅದನ್ನು ಹೇಗೆ ಪ್ರಶ್ನಿಸಬೇಕು ಎಂಬುದನ್ನು ತಳಿದಿರಬೇಕು. ಮುಖ್ಯವಾಗಿ ಪತ್ರಕರ್ತರು ಈ ಬಗ್ಗೆ ಎಚ್ಚರದಿಂದರಬೇಕು ಎಂದು ಪ್ರೀತಿ ಜಿಂಟಾ ಹೇಳಿದರು. ಇದೇ ವೇಳೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳನ್ನು ನನ್ನ ಬಳಿ ತರಬೇಡಿ ಎಂದೂ ಪ್ರೀತಿ ಹೇಳಿದರು.

ಇದೇ ಸುದ್ದಿಗೋಷ್ಠಿಯಲ್ಲಿ ಭಾರತ ತಂಡದ ಆಟಗಾರ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಕೂಡ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT