ನಟಿ ಪ್ರೀತಿ ಜಿಂಟಾ (ಸಂಗ್ರಹ ಚಿತ್ರ) 
ಬಾಲಿವುಡ್

ಮಹಿಳಾ ಪತ್ರಕರ್ತೆ ವಿರುದ್ಧ ಪ್ರೀತಿ ಕೋಪ..!

ಬಾಲಿವುಡ್ ನಟಿ ಪ್ರೀತಿ ಜಿಂಟಾ ಮಹಿಳಾ ಪತ್ರಕರ್ತೆ ವಿರುದ್ಧ ಕೋಪಗೊಂಡಿದ್ದು, ಖಾಸಗಿ ವಿಚಾರಗಳನ್ನು ತಿಳಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಮುಂಬೈ: ಬಾಲಿವುಡ್ ನಟಿ ಪ್ರೀತಿ ಜಿಂಟಾ ಮಹಿಳಾ ಪತ್ರಕರ್ತೆ ವಿರುದ್ಧ ಕೋಪಗೊಂಡಿದ್ದು, ಖಾಸಗಿ ವಿಚಾರಗಳನ್ನು ತಿಳಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಮುಂಬರುವ ಐಪಿಎಲ್ ಸರಣಿಗಾಗಿ ಮುಂಬೈನಲ್ಲಿ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಹೊಸ ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟಿ ಪ್ರೀತಿ ಜಿಂಟಾ ಪತ್ರಕರ್ತೆಯ ವಿರುದ್ಧ ಕೆಂಡಕಾರಿದರು. ನೆಸ್ ವಾಡಿಯಾ ಮತ್ತು ಪ್ರೀತಿ ಜಿಂಟಾ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕರಾಗಿದ್ದು, ಈಗ ಇಬ್ಬರ ನಡುವೆ ಜಗಳವಾಗಿದೆ.

ಈ ವಿಚಾರಕ್ಕೆ ಸಂಬಂಧಪಟ್ಟ ಪ್ರಶ್ನೆಯನ್ನು ಪತ್ರಕರ್ತೆ ಕೇಳಿದಾಗ ಪ್ರೀತಿ ಕೆಂಡಾ ಮಂಡಲರಾದರು. ಓರ್ವ ಮಹಿಳಾ ಪತ್ರಕರ್ತೆಯಾಗಿ ಎಲ್ಲಿ ಯಾವ ವಿಚಾರವನ್ನು ಕೇಳಬೇಕು ಎಂಬ ಅರಿವು ನಿಮಗಿರಬೇಕು ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಏರ್ಪಡಿಸಲಾಗಿದ್ದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಪ್ರೀತಿ ಜಿಂಟಾ, ಕ್ರೀಡಾಂಗಣದ ಹೊರಗಿನ ವಿಚಾರಗಳು ಯಾವುದೇ ಕಾರಣಕ್ಕೂ ಆಟದ ಮೇಲೆ ಪರಿಣಾಮ ಬೀರಬಾರದು. ಈ ಹಿಂದೆ ಏನಾಗಿತ್ತೋ ಅದು ಗತಿಸಿ ಹೋಗಿದೆ. ಮತ್ತೆ ಅದನ್ನು ಕೆಣಕುವ ಅಗತ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಆ ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ. ನಾನು ಕೂಡ ನಿಮ್ಮ ಖಾಸಗಿ ವಿಚಾರಗಳನ್ನು ಪ್ರಶ್ನಿಸಬಹುದು. ಆದರೆ ಅದು ಬೇಕಿಲ್ಲ. ನೀವು ಕೇಳಿದ ವಿಚಾರ ಸರಿ ಇದೆ.

ಆದರೆ ಕೇಳಿದ ರೀತಿ ತಪ್ಪು. ನಾವು ಯಾರನ್ನೇ ಏನೇ ಕೇಳಿದರೂ ಅದನ್ನು ಹೇಗೆ ಪ್ರಶ್ನಿಸಬೇಕು ಎಂಬುದನ್ನು ತಳಿದಿರಬೇಕು. ಮುಖ್ಯವಾಗಿ ಪತ್ರಕರ್ತರು ಈ ಬಗ್ಗೆ ಎಚ್ಚರದಿಂದರಬೇಕು ಎಂದು ಪ್ರೀತಿ ಜಿಂಟಾ ಹೇಳಿದರು. ಇದೇ ವೇಳೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳನ್ನು ನನ್ನ ಬಳಿ ತರಬೇಡಿ ಎಂದೂ ಪ್ರೀತಿ ಹೇಳಿದರು.

ಇದೇ ಸುದ್ದಿಗೋಷ್ಠಿಯಲ್ಲಿ ಭಾರತ ತಂಡದ ಆಟಗಾರ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಕೂಡ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT