ಸಲ್ಮಾನ್ ಖಾನ್ 
ಬಾಲಿವುಡ್

ಗುಲಾಂ ಅಲಿ ವಿಷಯದಲ್ಲಿ ರಾಜಕೀಯ ಅಜೆಂಡಾ ಏನೂ ಇಲ್ಲ: ಸಲ್ಮಾನ್ ಖಾನ್

ಕಲೆಗೆ ಯಾವುದೇ ಸೀಮಾರೇಖೆಗಳಿಲ್ಲ. ಎಲ್ಲರೂ ಅದನ್ನು ಪ್ರಶಂಸಿಸಲೇ ಬೇಕು. ಗುಲಾಂ ಅಲಿಯವರ ಕಾರ್ಯಕ್ರಮ ರದ್ದತಿಯ ಹಿಂದೆ ರಾಜಕೀಯವೇನೂ ಇಲ್ಲ...

ನವದೆಹಲಿ: ಪಾಕಿಸ್ತಾನಿ ಗಜಲ್ ಗಾಯಕ ಗುಲಾಂ ಅಲಿ ಭಾರತದಲ್ಲಿ ನಿಗದಿಯಾಗಿದ್ದ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಭಾರತದ ರಾಜಕಾರಣದಲ್ಲಿನ ಜಟಾಪಟಿಯ ನಡುವೆ ನನ್ನ ಹೆಸರು ತರುವುದು ಬೇಡ ಎಂದು ಹೇಳಿ ಗುಲಾಂ ಅಲಿ ಕಾರ್ಯಕ್ರಮವನ್ನು ರದ್ದು ಮಾಡಿದ್ದರು.
ಆದರೆ ಗುಲಾಂ ಅಲಿ ವಿಷಯದಲ್ಲಿ ಯಾವುದೇ ರಾಜಕೀಯ ಅಜೆಂಡಾ ಇದೆ ಎಂದು ನನಗನಿಸುತ್ತಿಲ್ಲ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿದ್ದಾರೆ. ಕಲೆಗೆ ಯಾವುದೇ ಸೀಮಾರೇಖೆಗಳಿಲ್ಲ. ಎಲ್ಲರೂ ಅದನ್ನು ಪ್ರಶಂಸಿಸಲೇ ಬೇಕು.  ಗುಲಾಂ ಅಲಿಯವರ ಕಾರ್ಯಕ್ರಮ ರದ್ದತಿಯ ಹಿಂದೆ ರಾಜಕೀಯವೇನೂ ಇಲ್ಲ. ಕಲೆ ಮತ್ತು ಸಂಸ್ಕೃತಿಯ ವಿಷಯದಲ್ಲಿ ಹೀಗೆಲ್ಲಾ ಆಗುವುದಕ್ಕೆ ಸಾಧ್ಯವಿಲ್ಲ ಎಂದು ಸಲ್ಮಾನ್ ಹೇಳಿದ್ದಾರೆ.
ಸಲ್ಮಾನ್ ಖಾನ್ ರ ಬಜರಂಗಿಭಾಯಿಜಾನ್ ಪಾಕಿಸ್ತಾನದಲ್ಲಿಯೂ ಉತ್ತಮ ಗಳಿಕೆ ಕಂಡು ಪ್ರಶಂಸೆಗೆ ಅರ್ಹವಾಗಿತ್ತು.
ಇದೊಂದು ಕಲೆ, ಅದಕ್ಕೆ ಸೀಮಾರೇಖೆಗಳಿಲ್ಲ. ಜಿಂದಗೀ ಶೋ ನೋಡಿ, ಅವರೆಷ್ಟು ಚೆನ್ನಾಗಿ ಮಾಡುತ್ತಿದ್ದಾರೆ. ಎಲ್ಲರೂ ಅದನ್ನು ನೋಡಲು ಇಷ್ಟಪಡುತ್ತಾರೆ. ನನ್ನಮ್ಮನೂ ಆ ಶೋ ನೋಡ್ತಾರೆ. ಕಲೆಯನ್ನು ಎಲ್ಲರೂ ಗೌರವಿಸಬೇಕು ಎಂದು ಸಲ್ಲು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT