ಸಲ್ಮಾನ್ ಖಾನ್ 
ಬಾಲಿವುಡ್

'ಬಜರಂಗಿ ಭಾಯಿಜಾನ್'ನಿಂದ ಕೃತಿಚೌರ್ಯ, ಹೈಕೋರ್ಟ್ ಮೆಟ್ಟಿಲೇರಿದ ಲೇಖಕ

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ಬಜರಂಗಿ ಭಾಯಿಜಾನ್ ಹಣ ಗಳಿಕೆಯಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ..

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ಬಜರಂಗಿ ಭಾಯಿಜಾನ್ ಹಣ ಗಳಿಕೆಯಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಆದರೆ ಈಗ ಭಾಯಿಜಾನ್ ಕಾನೂನಿ ಕಟಕಟೆಯಲ್ಲಿ ನಿಂತಿದ್ದಾನೆ.

ಬಜರಂಗಿ ಭಾಯಿಜಾನ್ ಕಥೆಯನ್ನು ಕೃತಿಚೌರ್ಯ ಮಾಡಲಾಗಿದೆ ಎಂದು ಆರೋಪಿಸಿ, ಮಾಹಿಮ್ ಜೋಶಿ ಬಾಂಬೆ ಹೈಕೋರ್ಟ್ನಲ್ಲಿ ದಾವೆ ಹೂಡಿ, ಚಿತ್ರ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಿಚಾರಣೆ ನಡೆಸಿದ ನ್ಯಾಯಾಧೀಶ ಗೌತಮ್ ಪಟೇಲ್ ಅವರು, ಬಜರಂಗಿ ಭಾಯಿಜಾನ್ ಪ್ರದರ್ಶನಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ. ಆದರೆ ವಿಚಾರಣೆ ಮುಗಿಯುವವರೆಗೆ ಚಿತ್ರದ ಆದಾಯವನ್ನು ಪ್ರತ್ಯೇಕವಾಗಿಟ್ಟುಕೊಂಡಿರಬೇಕು ಎಂದು ಚಿತ್ರದ ನಿರ್ಮಾಪಕರಿಗೆ ಸೂಚಿಸಿದ್ದಾರೆ.

ಚಿತ್ರ ಕಥೆಗೆ ಕ್ರೆಡಿಟ್ ಕೊಡಬೇಕು ಮತ್ತು ತಮ್ಮ ಕಥೆಯನ್ನು ಬಳಸಿಕೊಂಡಿದ್ದಕ್ಕೆ ಸೂಕ್ತ ಪರಿಹಾರ ಕೋರಿ ಮಾಹಿಮ್ ಜೋಶಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಚಿತ್ರದ ಕಥೆಯನ್ನು ನಾನು ಬರೆದಿದ್ದು, ಇದನ್ನು ಚಿತ್ರ ಲೇಖಕರ ಸಂಘದಲ್ಲಿ ನೋಂದಣಿ ಮಾಡಿಸಲಾಗಿದೆ. ಆದರೆ ಚಿತ್ರ ನೋಡಿದ ನಂತರ ಕೃತಿಚೌರ್ಯ ಮಾಡಿದ್ದನ್ನು ನೋಡಿ ನನಗೆ ಅಚ್ಚರಿಯಾಯಿತು ಎಂದು ಲೇಖರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT