ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ 
ಬಾಲಿವುಡ್

ಶ್ವೇತ ಭವನ ಮಾಧ್ಯಮ ವಕ್ತಾರರ ವಾರ್ಷಿಕ ಔತಣ ಕೂಟಕ್ಕೆ ಪ್ರಿಯಾಂಕಾಗೆ ಆಹ್ವಾನ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಕೇವಲ ಹಾಲಿವುಡ್ ನಲ್ಲಷ್ಟೇ ತಮ್ಮ ಬೇರುಗಳನ್ನು ವಿಸ್ತರಿಸಿಕೊಳ್ಳಲು ಪ್ರಯತ್ನಿಸುತ್ತಿಲ್ಲ ಬದಲಾಗಿ ತಮ್ಮ ಪ್ರತಿಭೆ ಮತ್ತು ವ್ಯಕ್ತಿತ್ವದಿಂದ ಜಾಗತಿಕವಾಗಿ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಕೇವಲ ಹಾಲಿವುಡ್ ನಲ್ಲಷ್ಟೇ ತಮ್ಮ ಬೇರುಗಳನ್ನು ವಿಸ್ತರಿಸಿಕೊಳ್ಳಲು ಪ್ರಯತ್ನಿಸುತ್ತಿಲ್ಲ ಬದಲಾಗಿ ತಮ್ಮ ಪ್ರತಿಭೆ ಮತ್ತು ವ್ಯಕ್ತಿತ್ವದಿಂದ ಜಾಗತಿಕವಾಗಿ ಛಾಪು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಅಮೆರಿಕಾದ ಶ್ವೇತ ಭವನದಲ್ಲಿ ಮಾಧ್ಯಮ ವಕ್ತಾರರಿಗೆ ಆಯೋಜಿಸಲಾಗುವ ವಾರ್ಷಿಕ ಔತಣ ಕೂಟಕ್ಕೆ ಅಧ್ಯಕ್ಷ ಬರಾಕ್ ಒಬಾಮಾ ಅವರಿಂದ ಆಹ್ವಾನ ಪಡೆದಿದ್ದಾರೆ. ಈ ವಾರ್ಷಿಕ ಮಾಧ್ಯಮ ವಕ್ತಾರರ ಔತಣಕೂಟವನ್ನು ಈ ತಿಂಗಳ ಕೊನೆಗೆ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಅವರ ಪತ್ನಿ ಮಿಶೆಲ್ ಒಬಾಮಾ ಆಯೋಜಿಸಿದ್ದಾರೆ.

ಹಾಲಿವುಡ್ ನಟರಾದ ಬ್ರಾಡ್ಲಿ ಕೂಪರ್, ಗ್ಲಾಡಿಸ್ ನೈಟ್, ಜೇನ್ ಫಂಡಾ ಮತ್ತು ಲೂಸಿ ಲಿಯೂ ಇವರ ಜೊತೆ ಪ್ರಿಯಾಂಕಾ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ವಾಶಿಂಗ್ಟನ್ ಪೋಸ್ಟ್ ಪತ್ರಿಕೆಯ ಪ್ರಕಾರ 'ಶ್ವೇತ ಭವನದ ಮಾಧ್ಯಮ ವಕ್ತಾರರ ಔತಣಕೂಟವನ್ನು ಪಾರಂಪಾರಿಕವಾಗಿ ಮಾಧ್ಯಮ ಬಂಧುಗಳು, ಟಿವಿ ವಾಹಿನಿಗಳು, ಇತರ ಮನರಂಜನಾ ಮಾಧ್ಯಮಗಳಿಗಾಗಿ' ಆಯೋಜಿಸಲಾಗುತ್ತದೆ.

ಸದ್ಯಕ್ಕೆ 'ಕ್ವಾಂಟಿಕೋ' ಧಾರಾವಾಹಿಯ ಹಾಗೂ ಹಾಲಿವುಡ್ ಸಿನೆಮಾ 'ಬೇವಾಚ್' ನ ಚಿತ್ರೀಕರಣದಲ್ಲಿ ನಿರತರಾಗಿರುವ ಪ್ರಿಯಾಂಕ ಇನ್ನೂ ಈ ಔತಣಕೂಟದಲ್ಲಿ ಭಾಗವಹಿಸುವುದರ ಬಗ್ಗೆ ಧೃಢೀಕರಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ಟೈಗರ್‌ ಜಿಂದಾ ಹೈ, ಕಿಂಗ್‌ ಈಸ್ ಅಲೈವ್‌: CM ಬಗ್ಗೆ ಬೈರತಿ ಗುಣಗಾನ; ಯತೀಂದ್ರ ಹೇಳಿಕೆಗೆ ಕೆರಳಿ ಕೆಂಡವಾದ ಡಿಕೆಶಿ ಬಣ!

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

SCROLL FOR NEXT