ಸಲ್ಮಾನ್ ಖಾನ್, ಶಾರುಖ್ ಖಾನ್(ಚಿತ್ರ ಕೃಪೆ: ಕಲರ್ಸ್ ಚಾನೆಲ್) 
ಬಾಲಿವುಡ್

ಚಪ್ಪಲಿಯೊಂದಿಗೆ ದೇಗುಲ ಪ್ರವೇಶ: ಶಾರುಕ್, ಸಲ್ಮಾನ್ ತಪ್ಪೆಸಗಿಲ್ಲ- ದೆಹಲಿ ಪೊಲೀಸ್

ಬಾಲಿವುಡ್ ಸ್ಟಾರ್ ಗಳಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರು ಬಿಗ್ ಬಾಸ್ ರಿಯಾಲಿಟಿ ಷೋ ಚಿತ್ರೀಕರಣದ...

ನವದೆಹಲಿ: ಬಾಲಿವುಡ್ ಸ್ಟಾರ್ ಗಳಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರು ಬಿಗ್ ಬಾಸ್ ರಿಯಾಲಿಟಿ ಷೋ ಚಿತ್ರೀಕರಣದ ವೇಳೆ ಯಾವುದೇ ತಪ್ಪು ಮಾಡಿಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಶಾರುಕ್ ಮತ್ತು ಸಲ್ಮಾನ್ ಖಾನ್ ಹಿಂದೂ ನಂಬಿಕೆಗಳನ್ನು ಘಾಷಿಗೊಳಿಸಿದ್ದಾರೆ ಎಂಬುದು ವಿಚಾರಣೆಗೆ ಅರ್ಹವಾದ ಪ್ರಕರಣ ಅಲ್ಲ. ಬಿಗ್ ಬಾಸ್ ಷೋ ನಡೆಸುವ ಸೆಟ್ ಆಗಿ ಕಾಳಿ ದೇಗುಲವನ್ನು ನಿರ್ಮಿಸಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ತರುವಂತಹ ಉದ್ದೇಶವನ್ನು ಶಾರುಕ್, ಸಲ್ಮಾನ್ ಹೊಂದಿರಲಿಲ್ಲ ಎಂದು ನ್ಯಾಯಾಲಯದಲ್ಲಿ ದೆಹಲಿ ಪೊಲೀಸರು ಹೇಳಿದ್ದಾರೆ. 
ಸ್ಟುಡಿಯೋವೊಂದರಲ್ಲಿ ಈ ಚಿತ್ರೀಕರಣ ನಡೆದಿದ್ದು, ಯಾವುದೇ ಕಾಳಿ ದೇವಸ್ಥಾನದಲ್ಲಿ ನಡೆದಿಲ್ಲ. ಬಿಗ್ ಬಾಸ್ ಷೋಗಾಗಿ ಕಾಳಿ ದೇಗುಲದ ಸೆಟ್ ನಿರ್ಮಿಸಲಾಗಿತ್ತು. ಅಲ್ಲಿ ಪ್ರತಿ ಷೋ ನಡೆಸಿ ಕೊಡುವ ಹಾಗೇ ನಡೆಸಿ ಕೊಟ್ಟಿದ್ದಾರೆ. ಇದರಿಂದ ಯಾವುದೇ ದುರುದ್ದೇಶವಿಲ್ಲ ಎಂದು ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ. 
ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ದೆಹಲಿ ಕೋರ್ಟ್ ದೆಹಲಿ ಪೊಲೀಸರಿಗೆ ಸೂಚಿಸಿತ್ತು.
ಬಿಗ್ ಬಾಸ್ ಸೀಸನ್ 9 ಚಿತ್ರೀಕರಣದ ವೇಳೆ ಶೂ ಕಳಚದೇ ಕಾಳಿ ದೇವಾಲಯದ ಸೆಟ್ ಅನ್ನು ಪ್ರವೇಶಿಸುವ ಮೂಲಕ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತ ಟಿವಿ ತಂಡದ ಸದಸ್ಯರು ಭಕ್ತರ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಗೌರವ್ ಗುಲತಿ ಎಂಬುವವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT